![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 20, 2022, 12:14 PM IST
ಸೌರಭ್ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್ಎಲ್ವಿ) ಸಿನಿಮಾದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಇದೇ ವೇಳೆ ಮಾತನಾಡಿದ ಸೌರಭ್ ಕುಲಕರ್ಣಿ, “ಈಗಾಗಲೇ ಈ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾದ ಮೊದಲ ಪ್ರತಿ ಕೂಡ ಸಿದ್ದವಾಗಿದೆ. “ಸಿರಿ ಲಂಬೋದರ ವಿವಾಹ’ ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಇರುವಂಥ ಸಿನಿಮಾ. ಸಿನಿಮಾದಲ್ಲಿ ಸಿರಿ ಹಾಗೂ ಲಂಬೋದರ ಪಾತ್ರಗಳು ನಾಯಕ, ನಾಯಕಿ ಅಲ್ಲ. ಈ ಪಾತ್ರಗಳು ಯಾವುದು ಎಂಬುದೇ ಸಿನಿಮಾದ ಸಸ್ಪೆನ್ಸ್. ಬಹುತೇಕ ರಂಗಭೂಮಿ ಕಲಾವಿದರೇ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.
ರಂಗಭೂಮಿ ಪ್ರತಿಭೆ ಅಂಜನ್ ಎ. ಭಾರದ್ವಾಜ್ “ಸಿರಿ ಲಂಬೋದರ ವಿವಾಹ’ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. “ಒಳ್ಳೆಯ ಸಿನಿಮಾ ಮಾಡಿರುವ ಖಷಿಯಿದೆ. ನಾನು ಈ ಸಿನಿಮಾದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎಂಬ ವಿಶ್ವಾಸದ ಮಾತು ಅಂಜನ್ ಅವರದ್ದು.
“ಈ ಹಿಂದೆ ಬಿ. ಸುರೇಶ್ ಅವರ “ದೇವರ ನಾಡಲ್ಲಿ’ ಸಿನಿಮಾದಲ್ಲಿ ಅಭಿನಿಯಿಸಿದ್ದೆ. ಆನಂತರ ಅಭಿನಯಿಸಿರುವ ಎರಡನೇ ಸಿನಿಮಾ ಇದು. ಕಥೆ ಮತ್ತು ಪಾತ್ರ ಚೆನ್ನಾಗಿದೆ’ ಎಂಬುದು ನಾಯಕಿ ದಿಶಾ ರಮೇಶ್ ಮಾತು. ಸಿನಿಮಾದ ಬಗ್ಗೆ ಮಾತನಾಡಿದ ನಟಿ ವೀಣಾ ಸುಂದರ್, “ಸಿರಿ ಲಂಬೋದರ ವಿವಾಹ ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಸಿನಿಮಾ. ತುಂಬ ಹೊಸತನದಿಂದ ಸಿನಿಮಾ ಮೂಡಿಬಂದಿದೆ’ ಎಂದರು.
ಉಳಿದಂತೆ ರಾಜೇಶ್ ನಟರಂಗ, ಪಿ. ಡಿ ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಸಂಘರ್ಷ್ ಕುಮಾರ್ ಸಂಗೀತವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.