ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ


Team Udayavani, Apr 25, 2024, 12:46 PM IST

Telugu version of ‘Markasthra’ titled ‘Maranayudham

ಮಾಲಾಶ್ರೀ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ “ಮಾರಕಾಸ್ತ್ರ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಕೋಮಲ ನಟರಾಜ್‌ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಈ ಚಿತ್ರ ಈಗ ತೆಲುಗಿಗೆ ಡಬ್‌ ಆಗಿದ್ದು, “ಮಾರಣಾಯುಧಂ’ ಎಂಬ ಟೈಟಲ್‌ನಡಿ ಚಿತ್ರ ಬಿಡುಗಡೆಯಾಗಿದೆ. ಏಪ್ರಿಲ್‌ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

“ನಮ್ಮ ಮಾರಕಾಸ್ತ್ರ ಚಿತ್ರವನ್ನು ಕಳೆದವರ್ಷ ಬಿಡುಗಡೆ ಮಾಡಿದ್ದೆವು. ಆ ಸಮಯದಲ್ಲಿ ಭಾರತ-ಪಾಕ್‌ ಮ್ಯಾಚ್‌, ಹಬ್ಬಗಳು ಬಂದವು. ಹಾಗಾಗಿ ಅಷ್ಟು ಜನ ನಮ್ಮ ಸಿನಿಮಾ ನೋಡಲು ಆಗಲಿಲ್ಲ. ಆದರೆ ಚಿತ್ರ ನೋಡಿದ ತೆಲುಗು ವಿತರಕರಾದ ವೆಂಕಟೇಶ್‌ ರಾವ್‌ ಅವರು ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಿ ಎಂದರು. ಮಾರಕಾಸ್ತ್ರ ಈಗ ಮಾರಣಾಯುಧಂ ಎಂಬ ಹೆಸರಿನಿಂದ ಇದೇ ಏಪ್ರಿಲ್‌ 26 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ಶನಿವಾರ( 27) ದಂದು ಪೌರ ಕಾರ್ಮಿಕರು ಸೇರಿದಂತೆ ಅನೇಕ ಶ್ರಮಿಕ ವರ್ಗದವರಿಗೆ ಒಂದು ಉಚಿತ ಪ್ರದರ್ಶನದ ವ್ಯವಸ್ಥೆ ಮಾಡುತ್ತಿದ್ದೇವೆ’ ಎನ್ನುವುದು ನಿರ್ಮಾಪಕ ನಟರಾಜ್‌ ಮಾತು.

ನಿರ್ದೇಶಕ ಗುರುಮೂರ್ತಿ ಸುನಾಮಿ ಮಾತನಾಡಿ, “ಮಾರಕಾಸ್ತ್ರ ಚಿತ್ರವನ್ನು ಬಿಡುಗಡೆ ಮಾಡಿದಾಗ ಚಿತ್ರದ ಅವಧಿ ಸ್ವಲ್ಪ ಹೆಚ್ಚಿದೆ ಎಂದಿದ್ದರು. ಈಗ 26 ನಿಮಿಷ ಕಡಿಮೆ ಮಾಡಿದ್ದೇವೆ. ಮಾಲಾಶ್ರೀ, ಆನಂದ್‌ ಆರ್ಯ, ಹರ್ಷಿಕಾ ಪೂಣತ್ಛ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ’ ಎಂದರು.

“ನಾನು ಮೊದಲು ಮಾರಕಾಸ್ತ್ರ ಚಿತ್ರದಲ್ಲಿ ನಟಿಸಲು ಒಪ್ಪಿರಲಿಲ್ಲ. ಆನಂತರ ನಿರ್ದೇಶಕರು ಕಥೆ ಹೇಳಿದ ರೀತಿ ಇಷ್ಟವಾಯಿತು. ಅದರಲ್ಲೂ ನಿರ್ದೇಶಕರಿಗೆ ಕಾಲಿನ ಸಮಸ್ಯೆಯಿದೆ. ಆದರೂ ಅವರಿಗಿರುವ ಸಿನಿಮಾ ಪ್ರೀತಿ ಕಂಡು ಖುಷಿಯಾಯಿತು. ತೆಲುಗಿನ ಜನರು ನನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಇದೇ ಶುಕ್ರವಾರ ಕರ್ನಾಟಕದಲ್ಲೂ ಬಿಡುಗಡೆಯಾಗಲಿದೆ’ ಎನ್ನುವುದು ಮಾಲಾಶ್ರೀ ಮಾತು.

ಚಿತ್ರದ ವಿತರಕ ಯಾದವ್‌, ಕಾರ್ಯಕಾರಿ ನಿರ್ಮಾಪಕ ವೆಂಕಟೇಶ್‌ ರಾವ್‌, ನಾಯಕ ಆನಂದ್‌ ಆರ್ಯ, ರವಿ ಚೇತನ್‌, ಶಶಿಧರ್‌, ಮಂಜುನಾಥ್‌, ಮಂಜುಳಾ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.