![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 30, 2023, 4:49 PM IST
“ಜಿ 9 ಕಮ್ಯುನಿಕೇಷನ್ ಮೀಡಿಯಾ’ ಎಂಟರ್ಟೈನ್ಮೆಂಟ್ ಬ್ಯಾನರ್ನಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದಿ ಜಡ್ಜ್ ಮೆಂಟ್’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಫೂರ್ಣಗೊಂಡಿತ್ತು. ಇದೀಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, “ದಿ ಜಡ್ಜ್ ಮೆಂಟ್’ ಸಿನಿಮಾದ ಮಾತಿನ ಜೋಡಣೆ ಕಾರ್ಯ ಆರಂಭಿಸಿದೆ.
“ದಿ ಜಡ್ಜ್ ಮೆಂಟ್’ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ವಕೀಲರಾಗಿ ಅಭಿನಯಿಸಿದ್ದಾರೆ. ದಿಗಂತ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ ಕುಮಾರ, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ ಬೆಳವಾಡಿ, ಟಿ. ಎಸ್ ನಾಗಾ ಭರಣ, ಕೃಷ್ಣಾ ಹೆಬ್ಟಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ರವಿಶಂಕರ ಗೌಡ ಸುಜಯ ಶಾಸ್ತ್ರೀ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಂ, ಅಶ್ವಿನ್ ರಾವ್ ಮುಂತಾದವರು “ದಿ ಜಡ್ಜ್ ಮೆಂಟ್’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ “ದಿ ಜಡ್ಜ್ ಮೆಂಟ್’ ಸಿನಿಮಾಕ್ಕೆ ಎಂ. ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಅನೂಪ್ ಸೀಳಿನ್ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾ.
ಸಿನಿಮಾಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಕೆಂಪರಾಜ್ ಬಿ. ಎಸ್ ಸಂಕಲನವಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ಮುಂದಿನ ವರ್ಷದ ಆರಂಭದಲ್ಲಿ “ದಿ ಜಡ್ಜ್ ಮೆಂಟ್’ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.