![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 30, 2018, 11:06 AM IST
“ಗಲ್ಲಿ ಬೇಕರಿ’…. ಇದು ವಿದೇಶಿ ಕನ್ನಡಿಗ ನಿರ್ಮಾಣದ ಚಿತ್ರ. ನಿರ್ಮಾಪಕರ ಹೆಸರು ಮಹ್ಮದ್ ಮುಸ್ತಾಫ. ಮೂಲತಃ ಮಂಗಳೂರಿನವರಾದ ಮಹ್ಮದ್ ಮುಸ್ತಾಫ, ಕತಾರ್ನಲ್ಲಿ ನೆಲೆಸಿದ್ದಾರೆ. ನಿರ್ದೇಶಕ ವಿ.ಆರ್.ಕೆ.ರಾಧಾಕೃಷ್ಣ ಹೇಳಿದ ಕಥೆ ಕೇಳಿ, ನಿರ್ಮಾಣಕ್ಕೆ ಇಳಿದಿದ್ದಾರೆ.
ಗಲ್ಲಿ ಬೇಕರಿಯಲ್ಲಿ ಕೆಲಸ ಮಾಡುವ ಹುಡುಗ, ಅದೇ ಏರಿಯಾದಲ್ಲಿರುವ ಪೋಲೀಸ್ ಅಧಿಕಾರಿ ಮಗಳ ನಡುವಿನ ಲವ್ಸ್ಟೋರಿ ಇಲ್ಲಿದೆ. ಇದು ನೈಜ ಘಟನೆ ಆಧರಿಸಿದ ಮಾಡಿದ ಚಿತ್ರ ಎನ್ನುವ ನಿರ್ದೇಶಕರು, ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ ಎನ್ನುತ್ತಾರೆ.
ಇನ್ನು, ಇಲ್ಲಿ ಹಲವು ವಿಶೇಷತೆಗಳಿದ್ದು, ಅದನ್ನು ಸಿನಿಮಾದಲ್ಲೇ ನೋಡಬೇಕೆಂಬುದು ನಿರ್ದೇಶಕರ ಮಾತು. ಇಲ್ಲಿ ಜಯಕರ್ನಾಟಕ ಸಂಘದ ಕೆಲಸವನ್ನೂ ತೋರಿಸಲಾಗಿದೆ. ಅದಕ್ಕೊಂದು ಹಾಡು ಇರಿಸಿ, ರಾಜ್ಯದ 20 ಜಿಲ್ಲೆಗಳಲ್ಲಿ ಚಿತ್ರೀಕರಿಸಲಾಗಿದೆ. ಸಂತೋಷ್ ಚಿತ್ರದ ನಾಯಕರಾದರೆ, ಆರ್ಯನ್ ಮತ್ತೂಂದು ನಾಯಕನ ಪಾತ್ರ ಮಾಡಿದ್ದಾರೆ.
ಪ್ರಜ್ವಲ್ಪೂವಯ್ಯ ನಾಯಕಿ. ಇನ್ನುಳಿದಂತೆ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಯಮುನಾ ಶ್ರೀನಿಧಿ, ರಮೇಶ್ಭಟ್, ಉಗ್ರಂಮಂಜು ಇತರರು ನಟಿಸಿದ್ದಾರೆ. ಅಂದಹಾಗೆ, ಇತ್ತೀಚೆಗೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಲಹರಿ ವೇಲು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಸುನಾದ್ ಗೌತಮ್ ಸಂಗೀತವಿದೆ. ಆಡಿಯೋ ಬಿಡುಗಡೆ ಸಂದರ್ಭದಲ್ಲಿ ಚಿತ್ರದಲ್ಲಿ ಹಾಡು ಮತ್ತು ಟ್ರೇಲರ್ ಪ್ರದರ್ಶನ ಮಾಡಿದ್ದು ವಿಶೇಷ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.