ಭರವಸೆಯೊಂದೇ ಬೆಳಕು


Team Udayavani, May 14, 2021, 9:10 AM IST

The only hope is light

ಕೊರೊನಾ ಮೊದಲ ಅಲೆಯ ಹೊಡೆತದಿಂದ ಕಳೆದ ವರ್ಷ ಬಿಡುಗಡೆಯಾಗಬೇಕಿದ್ದ ಬಹುತೇಕ ಸ್ಟಾರ್‌ ನಟರ ಸಿನಿಮಾಗಳು ಈ ವರ್ಷಕ್ಕೆ ತಮ್ಮ ಬಿಡುಗಡೆಯನ್ನು ಮುಂದೂಡಿಕೊಂಡಿದ್ದವು. ಇನ್ನು ಕಳೆದ ವರ್ಷದಂತೆ, ಈ ವರ್ಷ ಕೂಡ ಅದೇ ಸಮಯಕ್ಕೆ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದ್ದು, ಮತ್ತೆ ಲಾಕ್‌ಡೌನ್‌ ಘೋಷಣೆ ಯಾಗಿದೆ. ಹೀಗಾಗಿ ಬಿಡುಗಡೆಗೆ ಸಿದ್ಧವಾಗಿದ್ದರೂ, ಬಹುತೇಕ ಸ್ಟಾರ್‌ ನಟರ, ಬಿಗ್‌ ಬಜೆಟ್‌ ಸಿನಿಮಾ ಗಳು ಈ ವರ್ಷವೂ ತೆರೆಗೆ ಬರೋದು ಡೌಟು ಎನ್ನುವ ಮಾತು ಚಿತ್ರರಂಗದಲ್ಲಿ ಕೇಳಿಬರುತ್ತಿದೆ.

ಇದೇ ವೇಳೆ ಸ್ಟಾರ್ ಸಿನಿಮಾಗಳಿಗೆ ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿದ ನಿರ್ಮಾಪಕರು, ಈ ವರ್ಷವೂ ಹೀಗಾದರೆ, ಮುಂದೇನು? ಎಂಬ ಚಿಂತೆಯಲ್ಲಿದ್ದಾರೆ. ಕನ್ನಡದಲ್ಲಿ ಸದ್ಯದ ಮಟ್ಟಿಗೆ “ಕೋಟಿಗೊಬ್ಬ-3′, “ಭಜರಂಗಿ-2′, “ಸಲಗ’, “ಕೆಜಿಎಫ್-2′, “ವಿಕ್ರಾಂತ್‌ ರೋಣ’ ಹೀಗೆ ಹಲವು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿದ್ದು, ಈ ವರ್ಷದಲ್ಲಿ ಈ ಎಲ್ಲ ಸಿನಿಮಾಗಳು ತೆರೆಗೆ ಬರುತ್ತವೆಯಾ? ಇಲ್ಲವಾ? ಎಂಬ ಬಗ್ಗೆ ಚಿತ್ರತಂಡಕ್ಕೂ ಸ್ಪಷ್ಟತೆಯಿಲ್ಲ. ಇದೇ ವೇಳೆ “ಉದಯವಾಣಿ’ ಜೊತೆಗೆ ಮಾತನಾಡಿರುವ ಕೆಲವು ಬಿಗ್‌ ಬಜೆಟ್‌ ಸಿನಿಮಾಗಳ ನಿರ್ಮಾಪಕರು ತಮ್ಮ ಮನದಾಳದ ಆತಂಕ, ಅಳಲನ್ನು ತಮ್ಮದೇ ಮಾತುಗಳಲ್ಲಿ ಹಂಚಿಕೊಂಡಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸಿಕೊಳ್ಳುವುದು ತುಂಬ ಮುಖ್ಯ. ಜನರ ಜೀವ ಆರೋಗ್ಯ ಎಲ್ಲವೂ ಚೆನ್ನಾಗಿದ್ದರೆ, ಬೇರೆ ಏನು ಬೇಕಾದ್ರೂ ಮಾಡಬಹುದು. ಈ ಸಿನಿಮಾವನ್ನ ಸುದೀಪ್‌ ಅಭಿಮಾನಿ ಗಳಿಗಾಗಿಯೇ ಮಾಡಿದ್ದು. ಹಾಗಾಗಿ ಇದನ್ನು ಥಿಯೇಟರ್‌ ನಲ್ಲೇ ರಿಲೀಸ್‌ ಮಾಡಬೇಕು ಅನ್ನೋದು ನಮ್ಮ ಆಸೆ. ಥಿಯೇಟರ್‌ ಬಿಟ್ಟು ಒಟಿಟಿ ಅಥವಾ ಬೇರೆಲ್ಲೋ ಸಿನಿಮಾ ರಿಲೀಸ್‌ ಮಾಡುವುದಿಲ್ಲ. ಸದ್ಯ ಎಲ್ಲವೂ ಮೊದಲಿನಂತಾಗಬೇಕು ಅಂಥ ಕಾಯುತ್ತಿ ದ್ದೇವೆ. ಚಿತ್ರರಂಗ ಮೊದಲಿನ ಸ್ಥಿತಿಗೆ ಬರುವವರೆಗೂ, ನಮ್ಮ ಸಿನಿಮಾ ಬಿಡುಗಡೆ ಮಾಡುವ ಯಾವುದೇ ಯೋಚನೆ ಇಲ್ಲ.

  • ಸೂರಪ್ಪ ಬಾಬು, ನಿರ್ಮಾಪಕ

ಇದನ್ನೂ ಓದಿ:ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಕನ್ನಡ ಚಿತ್ರರಂಗದಲ್ಲಿ ಕಾರ್ಪೋರೆಟ್‌ ಶೈಲಿಯಲ್ಲಿ ಸಿನಿಮಾ ನಿರ್ಮಾಣವಾಗುವು ದಿಲ್ಲ. ಕೈಯಲ್ಲಿ ಹಣ ಇಟ್ಟುಕೊಂಡು ಸಿನಿಮಾ ಮಾಡುವ ನಿರ್ಮಾಪಕರ ಸಂಖ್ಯೆ ತುಂಬ ಕಡಿಮೆ. ಇಲ್ಲಿನ ಬಹುತೇಕ ನಿರ್ಮಾಪಕರು ಫೈನಾನ್ಸಿಯರ್ ಮೇಲೆ ಅವಲಂಬಿತರಾಗಿ ರುತ್ತಾರೆ.

ಹೀಗಾಗಿ ಅಂದು ಕೊಂಡ ಟೈಮ್‌ ಒಳಗೆ ಸಿನಿಮಾ ಮಾಡಿ ಅದು ರಿಲೀಸ್‌ ಆಗಿ ಹಣ ಬಂದ್ರೆ, ಅದರಿಂದ ಫೈನಾನ್ಸಿಯರ್ಗೆ ಬಡ್ಡಿ, ಅಸಲು ಎರಡನ್ನೂ ಪಾವತಿಸಬಹುದು. ಇಲ್ಲದಿದ್ರೆ, ಸಿನಿಮಾ ರಿಲೀಸ್‌ ಆಗಿ ಹಣ ಬರುವವರೆಗೂ ಬಡ್ಡಿ ಕಟ್ಟುತ್ತಲೇ ಇರಬೇಕು. ಇವತ್ತು ತುಂಬ ಬಿಗ್‌ ಬಜೆಟ್‌ ನಿರ್ಮಾಪಕರ ಸ್ಥಿತಿ ಹಾಗೇ ಆಗಿದೆ. ಎರಡು ವರ್ಷದಿಂದ ತಮ್ಮ ಬಿಗ್‌ ಬಜೆಟ್‌ ಸಿನಿಮಾಗಳು ರಿಲೀಸ್‌ ಆಗದೆ, ಅನೇಕ ನಿರ್ಮಾಪಕರು ಬಡ್ಡಿ ಕಟ್ಟುತ್ತಾ ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ರಿಲೀಸ್‌ ಆಗೋದು ತಡವಾದಷ್ಟು, ಬಂದ ಲಾಭವೆಲ್ಲ ಸಾಲ ಕಟ್ಟೋದಕ್ಕೇ ಸರಿಯಾಗುತ್ತದೆ. ಆದ್ರೆ ಈಗಿನ ಪರಿಸ್ಥಿತಿ ಯಾರ ನಿಯಂತ್ರಣದಲ್ಲೂ ಇಲ್ಲದಿರೋದ್ರಿಂದ, ಏನೂ ಮಾಡಲಾಗದು. ಸದ್ಯಕ್ಕೆ ಎಲ್ಲರೂ ತಮ್ಮ ಜೀವದ ಕಡೆಗೆ ಗಮನ ಹರಿಸಬೇಕಾಗಿದ್ದರಿಂದ, ಮೊದಲು ಪರಿಸ್ಥಿತಿ ನಿಯಂತ್ರಣಕ್ಕೆ ಬಂದು ಸುಧಾರಿಸಬೇಕು. ಆನಂತರವೇ ಬೇರೆ ಯೋಚನೆ. ಹಾಗಾಗಿ ಸಿನಿಮಾ ಬಿಡುಗಡೆಯ ಬಗ್ಗೆ ಈಗಲೇ ಏನೂ ಹೇಳಲಾರೆ.

ಜಾಕ್‌ ಮಂಜುನಾಥ್‌, ನಿರ್ಮಾಪಕ ಮತ್ತು ವಿತರಕ

ಕಳೆದ ವರ್ಷ ಲಾಕ್‌ಡೌನ್‌ ಆದಾಗ ಕೆಲ ತಿಂಗಳಲ್ಲಿ ಎಲ್ಲ ಸರಿ ಹೋಗುತ್ತೆ, ಥಿಯೇಟರ್‌ ಓಪನ್‌ ಆಗಿ ಸಿನಿಮಾಗಳು ರಿಲೀಸ್‌ ಆಗುತ್ತವೆ ಅಂಥ ಭರವಸೆನಾದ್ರೂ ಕಾಣಿಸುತ್ತಿತ್ತು. ಆದ್ರೆ ಈ ಸಲ ಲಾಕ್‌ ಡೌನ್‌ನಲ್ಲಿ ಮುಂದೇನು ಅನ್ನೋದೆ ಕಾಣಿಸ್ತಿಲ್ಲ. ಈ ಸಾವು-ನೋವು ನೋಡ್ತಿದ್ರೆ, ಈಗಿನ ಪರಿಸ್ಥಿತಿಯಲ್ಲಿ ಉಸಿರು ಉಳಿಸಿಕೊಳ್ಳೋದೆ ದೊಡª ವಿಷಯ. ಎಲ್ಲ ಸರಿಯಾಗಿದ್ದರೆ, ಈ ವಾರ “ಭಜರಂಗಿ-2′ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದ್ರೆ ಈಗ ಲಾಕ್‌ಡೌನ್‌ನಿಂದಾಗಿ ಇಡೀ ಸಿನಿಮಾ ಇಂಡಸ್ಟ್ರಿ ಕಂಪ್ಲೀಟ್‌ ಜೀರೋ ಆಗಿದೆ. ಸದ್ಯ ನಮ್ಮ ಬ್ಯಾನರ್‌ನಲ್ಲಿ “ಭಜರಂಗಿ-2′, “ಶಿವ 143′ ಎರಡೂ ಸಿನಿಮಾಗಳೂ ರಿಲೀಸ್‌ಗೆ ರೆಡಿಯಾಗಿವೆ. ಈಗಿನ ಪರಿಸ್ಥಿತಿಯಲ್ಲಿ ಮುಂದೇನಾಗುತ್ತದೆ ಅನ್ನೋದನ್ನ ಕಾದು ನೋಡುವುದನ್ನ ಬಿಟ್ಟರೆ ಬೇರೆ ದಾರಿ ಇಲ್ಲ. ಎಲ್ಲ ಸರಿಯಾದ ಮೇಲೆ ಮುಂದಿನ ಯೋಚನೆ ಮಾಡಬೇಕು.

  • ಜಯಣ್ಣ, ನಿರ್ಮಾಪಕ ಮತ್ತು ವಿತರಕ

ಇವತ್ತು ಎಲ್ಲ ಕ್ಷೇತ್ರಗಳಿಗಿಂತ ಸಿನಿಮಾ ಕ್ಷೇತ್ರಕ್ಕೆ ಹೆಚ್ಚು ನಷ್ಟವಾಗುತ್ತಿದೆ. ಅದರಲ್ಲೂ ಕನ್ನಡ ಚಿತ್ರರಂಗಕ್ಕೆ ಅತ್ಯಂತ ಸೀಮಿತ ಮಾರುಕಟ್ಟೆ, ಪ್ರೇಕ್ಷಕ ವರ್ಗ ಇರೋದ್ರಿಂದ, ಅದರ ನೇರ ಪರಿಣಾಮ ನಮ್ಮ ಚಿತ್ರರಂಗದ ಮೇಲೆ ಆಗುತ್ತಿದೆ. ಆದ್ರೆ, ಸದ್ಯದ ಪರಿಸ್ಥಿತಿಯಲ್ಲಿ ಜನರ ಯೋಗಕ್ಷೇಮ ತುಂಬ ಮುಖ್ಯ. ಜನ ಆರೋಗ್ಯದಿಂದ ಇದ್ದು, ಪರಿಸ್ಥಿತಿ ಸುಧಾರಿಸಿದರೆ ಎಲ್ಲವೂ ಸರಿ ಹೋಗುತ್ತದೆ. ಆದಷ್ಟು ಬೇಗ ಸರಿಹೋಗುತ್ತದೆ ಎಂಬ ನಿರೀಕ್ಷೆ, ಭರವಸೆಯಲ್ಲಿದ್ದೇವೆ. ಎಲ್ಲವೂ ಸರಿ ಹೋಗುವವರೆಗೆ ನಮ್ಮ ಸಿನಿಮಾ ಬಿಡುಗಡೆಯ ಬಗ್ಗೆ ಏನೂ ಯೋಚಿಸುವುದಿಲ್ಲ.

  • ಕೆ.ಪಿ ಶ್ರೀಕಾಂತ್‌, ನಿರ್ಮಾಪಕ

ಜಿ.ಎ ಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.