Actress Rajini; ಸೀರಿಯಲ್‌ ಜರ್ನಿ ಖುಷಿ ಕೊಟ್ಟಿದೆ.. ನಟಿ ರಜಿನಿ ಮಾತು


Team Udayavani, Sep 26, 2023, 3:40 PM IST

Actress Rajini; ಸೀರಿಯಲ್‌ ಜರ್ನಿ ಖುಷಿ ಕೊಟ್ಟಿದೆ.. ನಟಿ ರಜಿನಿ ಮಾತು

“ಅಭಿನಯ ಶುರು ಮಾಡಿ ಸುಮಾರು 12 ವರ್ಷಗಳಾಯಿತು. ಅಭಿನಯದ ಬಗ್ಗೆ ಏನೂ ಗೊತ್ತಿಲ್ಲದ ನನ್ನನ್ನು “ಅಮೃತ ವರ್ಷಿಣಿ’ ಧಾರಾವಾಹಿ ಒಬ್ಬಳು ನಟಿಯಾಗಿ ಗುರುತಿಸುವಂತೆ ಮಾಡಿತು. 12 ವರ್ಷಗಳಾದರೂ, ಇಂದಿಗೂ ಕೂಡ ಅದೇ ಧಾರಾವಾಹಿಯ ಅಮೃತ ಪಾತ್ರದಲ್ಲಿಯೇ ಜನ ನನ್ನನ್ನು ಗುರುತಿಸುತ್ತಾರೆ. ಅಷ್ಟರ ಮಟ್ಟಿಗೆ ಆಳವಾಗಿ ಆ ಧಾರಾವಾಹಿ ಮತ್ತು ನನ್ನ ಪಾತ್ರವನ್ನು ಜನರ ಮನ ಮುಟ್ಟಿತ್ತು. ಪ್ರೇಕ್ಷಕರು ಕೂಡ ನಮ್ಮನ್ನು ಮೆಚ್ಚಿಕೊಂಡಿದ್ದರು’ ಇದು ನಟಿ ರಜಿನಿ ಮಾತು.

ಹೌದು, ಕಿರುತೆರೆಯ ಜನಪ್ರಿಯ “ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದವರೇ ನಟಿ ರಜಿನಿ. ತನ್ನ ಮೊದಲ ಧಾರಾವಾಹಿಯಲ್ಲೇ ಕಿರುತೆರೆ ಪ್ರೇಕ್ಷಕರ ಮನ-ಗಮನ ಎರಡನ್ನೂ ಸೆಳೆಯುವಲ್ಲಿ ಯಶಸ್ವಿಯಾದ ರಜಿನಿ, ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದು ಕೊಂಡಿದ್ದರು. ಹೀಗಿರುವಾಗಲೇ ರಜಿನಿ ಕಿರುತೆರೆಯಿಂದ ಹಿರಿತೆರೆ ಕಡೆಗೂ ಮುಖ ಮಾಡಿದ್ದರು.

ಚಿತ್ರರಂಗದಲ್ಲಿ ಕೆಲ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ರಜಿನಿ ಸದ್ಯಕ್ಕೆ “ಹಿಟ್ಲರ್‌ ಕಲ್ಯಾಣ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಇದರ ನಡುವೆಯೇ ಒಂದೆರಡು ಸಿನಿಮಾಕ್ಕೂ ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಪ್ಲಾನಿಂಗ್‌ ಇಲ್ಲದ ಜರ್ನಿಯಲ್ಲಿ ಖುಷಿಯಿದೆ…

ತಮ್ಮ ಅಭಿನಯ ಪ್ರಯಾಣದ ಬಗ್ಗೆ ಮಾತನಾಡುವ ರಜಿನಿ, “ನಾನು ನಟಿಯಾಗುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಪ್ಲಾನಿಂಗ್‌ ಇಲ್ಲದೆಯೇ, ಅಭಿನಯಕ್ಕೆ ಬಂದೆ. ಇಡೀ ಈ ಜರ್ನಿ ನನಗೆ ತುಂಬ ಖುಷಿ ಕೊಡುತ್ತಿದೆ. ಸಾಕಷ್ಟು ವಿಷಯಗಳನ್ನು ಕಲಿಸಿದೆ. ಜನರಿಗೆ ನನ್ನನ್ನು ಪರಿಚಯಿಸಿದೆ. ಎಲ್ಲೇ ಹೋದರು ಜನ ಗುರುತಿಸಿ, ಪ್ರೀತಿಯಿಂದ ಮಾತನಾಡಿಸುತ್ತಾರೆ. ಒಬ್ಬ ನಟಿಯಾಗಿ ಇದಕ್ಕಿಂತ ಹೆಚ್ಚು ಇನ್ನೇನು ಬೇಕು? ಈಗಲೂ ಅಷ್ಟೇ ತುಂಬ ಪ್ಲಾನಿಂಗ್‌ ಮಾಡದೆಯೇ ಈ ಜರ್ನಿ ನಡೆಯುತ್ತಿದೆ’ ಎನ್ನುತ್ತಾರೆ.

ಸೀರಿಯಲ್‌-ಸಿನಿಮಾ ವ್ಯತ್ಯಾಸವೇನಿಲ್ಲ…

“ನಾನೊಬ್ಬಳು ಕಲಾವಿದೆ ಅಷ್ಟೇ. ನನಗೆ ಖುಷಿ ಕೊಡುವಂಥ ಕಥೆಗಳು, ಪಾತ್ರಗಳು ಸೀರಿಯಲ್‌ನಲ್ಲಿ ಸಿಕ್ಕರೂ ಮಾಡುತ್ತೇನೆ. ಸಿನಿಮಾದಲ್ಲಿ ಸಿಕ್ಕರೂ ಮಾಡುತ್ತೇನೆ. ನನಗೆ ಸೀರಿಯಲ್‌ ಅಥವಾ ಸಿನಿಮಾ ನಡುವೆ ಅಂಥದ್ದೇನೂ ದೊಡ್ಡ ವ್ಯತ್ಯಾಸ ಕಾಣುವುದಿಲ್ಲ. ಕೆಲವರು ಬಂದು ಒಂದೆರಡು ಸಿನಿಮಾ ಅಥವಾ ಸೀರಿಯಲ್‌ ಮಾಡಿದ ನಂತರ ಮತ್ತೆ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಆದರೆ ನನ್ನ ವಿಷಯದಲ್ಲಿ ಹಾಗಿಲ್ಲ. ಸೀರಿಯಲ್‌ ಆದ ನಂತರ ಸಿನಿಮಾ. ಸಿನಿಮಾ ಆದ ನಂತರ ಸೀರಿಯಲ್‌, ಹೀಗೆ ಒಂದರ ಹಿಂದೊಂದು ಅವಕಾಶಗಳು ಬರುತ್ತಿವೆ. ಒಬ್ಬಳು ನಟಿಯಾಗಿ ನಾನು ತುಂಬ ಖುಷಿಯಾಗಿದ್ದೇನೆ. ಇದಕ್ಕಿಂತ ಹೆಚ್ಚೇನೂ ನಿರೀಕ್ಷಿಸುವುದಿಲ್ಲ’ ಎಂಬುದು ರಜಿನಿ ಮಾತು.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.