ಸಾರೋಟ್‌ ಏರಿ ಬಂದವರು

ಅಚ್ಚುಕಟ್ಟಾದ ಸಿನ್ಮಾ ಮಾಡಿದ್ದೀವಿ ನೋಡಿ ಸಾರ್‌!

Team Udayavani, Mar 11, 2020, 7:00 AM IST

Saarot—Srikiran

ಕನ್ನಡ ಸಿನಿಮಾರಂಗಕ್ಕೆ ಹೊಸಬರ ಆಗಮನ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ “ಸಾರೋಟ್‌’ ಚಿತ್ರತಂಡ ಕೂಡ ಸೇರಿದೆ. ಈಗಾಗಲೇ ಸದ್ದಿಲ್ಲದೆಯೇ ಈ ಹೊಸ ತಂಡ ಚಿತ್ರದ ಚಿತ್ರೀಕರಣ ಮುಗಿಸಿ, ತಮ್ಮ ಚಿತ್ರವನ್ನು ಬಿಡುಗಡೆ ಮಾಡುವ ತಯಾರಿ ನಡೆಸುತ್ತಿದೆ. ಸಿನಿಮಾ ಮಾಡಿದ ಬಹುತೇಕರು, ನಮ್ಮ ಕಥೆ, ಹಾಗೆ, ನಮ್ಮ ಚಿತ್ರಕಥೆ ಹೀಗೆ ಅನ್ನುವುದು ಗೊತ್ತೇ ಇದೆ.

ಆದರೆ, ಹೊಸಬರೇ ಮಾಡಿರುವ “ಸಾರೋಟ್‌’ ಚಿತ್ರದ ಬಳಗ “ಒಂದು “ಅಚ್ಚುಕಟ್ಟಾದ ಒಂದು ಸಿನಿಮಾ ಮಾಡಿದ್ದೇವೆ ಎಲ್ಲರೂ ನೋಡಿ, ಹರಸಿ-ಹಾರೈಸಿ’ ಎಂದು ವಿನಮ್ರವಾದ ಮನವಿಯೊಂದನ್ನು ಮುಂದಿಟ್ಟಿದೆ. ಹಾಗಾದರೆ, ಈ “ಸಾರೋಟ್‌’ ಕಥೆ ಏನು? ಇದು ಲವ್‌ ಸ್ಟೋರಿನಾ, ರೌಡಿಸಂ ಸಬ್ಜೆಕ್ಟ್ ಹೊಂದಿದೆಯಾ, ಮಾಸ್‌ ಅಥವಾ ಕ್ಲಾಸ್‌ ಅಂಶಗಳಿವೆಯಾ? ಗೊತ್ತಿಲ್ಲ. ಆದರೆ, ಎಲ್ಲಾ ವರ್ಗಕ್ಕೂ ಸಲ್ಲುವ ಚಿತ್ರವಿದು.

ಅದನ್ನು ಸೀದಾ ಚಿತ್ರಮಂದಿರದಲ್ಲೇ ಬಂದು ಸಿನಿಮಾ ನೋಡಬೇಕೆಂಬುದು ಅವರ ಕಳಕಳಿಯ ಕೋರಿಕೆ. ತಮ್ಮ ಸಿನಿಮಾ ಕುರಿತು ಹೇಳಿಕೊಳ್ಳುವ ನಿರ್ದೇಶಕ ಗೌತಮ್‌. “ಈ ಚಿತ್ರದಲ್ಲಿ ಎಲ್ಲರೂ ಹೊಸಬರೇ ಇರುವುದರಿಂದ ಏನನ್ನಾದರೂ ಹೊಸತನ್ನೇ ಹೇಳಿದರೆ ಚೆನ್ನ ಎಂದುಕೊಂಡು ನವಿರಾದ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಚಿತ್ರದಲ್ಲಿ ಪ್ರೇಮಕಥೆಯಿದೆ. ಸಂಬಂಧಗಳ ಮೌಲ್ಯವಿದೆ. ನಗುವಿಗಂತೂ ಇಲ್ಲಿ ಬರವಿಲ್ಲ.

ಹೊಸ ಹೊಸ ತಾಣಗಳು ಚಿತ್ರದ ಹೈಲೈಟ್‌ ಎನ್ನುವ ಅವರು, ಪಾತ್ರಕ್ಕೆ ತಕ್ಕ ಕಲಾವಿದರು, ಜಬರ್‌ದಸ್ತ್ ಆಕ್ಷನ್‌, ಒಳ್ಳೊಳ್ಳೆ ಹಾಡುಗಳು ಇತ್ಯಾದಿ ಚಿತ್ರದಲ್ಲಿವೆ. ಪ್ರತಿಯೊಂದು ಕಥೆಗೆ ಪೂರಕವಾಗಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿ ಚಿತ್ರವಿದ್ದು, ಆದಷ್ಟೂ ಬೇಗ ಟೀಸರ್‌ ರಿಲೀಸ್‌ ಮಾಡುವ ಉದ್ದೇಶವಿದೆ. ನಮ್ಮದೊಂದು ಪ್ರಾಮಾಣಿಕ ಪ್ರಯತ್ನಕ್ಕೆ ಎಲ್ಲರ ಬೆಂಬಲ ಅತ್ಯಗತ್ಯ’ ಎಂಬುದು ನಿರ್ದೇಶಕ ಗೌತಮ್‌ ಮಾತು.

ಇನ್ನು, ಶ್ರೀಕಿರಣ್‌ ಎಂಬ ಯುವ ಪ್ರತಿಭೆ ಈ ಚಿತ್ರದ ಮೂಲಕ ನಾಯಕ ನಟನಾಗಿ ಪರಿಚಯವಾಗುತ್ತಿದ್ದು, ಅವರಿಗೆ ಜೋಡಿಯಾಗಿ ಮರ್ಲಿನ್‌ ಇದ್ದಾರೆ. ಉಳಿದ ತಾರಾಬಳಗದಲ್ಲಿ ಮಿಮಿಕ್ರಿ ಗೋಪಿ, ಕುರಿ ಸುನಿಲ್‌, ಪಲ್ಟಿ ಗೋವಿಂದ್‌, ನಾಗರತ್ನ ರಂಗಾಯಣ ಸೇರಿದಂತೆ ಸಾಕಷ್ಟು ಕಲಾವಿದರಿದ್ದಾರೆ. ಎಂ.ಸಿದ್ದರಾಜು ನಿರ್ಮಾಣದ ಈ ಚಿತ್ರಕ್ಕೆ ವೇಲು ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.