ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಮೂರು ಕೊಡುಗೆ ನೀಡಿದ ಮುಖ್ಯಮಂತ್ರಿ


Team Udayavani, Mar 16, 2017, 3:30 PM IST

5.jpg

ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಬಜೆಟ್‌ನಲ್ಲಿ ಕನ್ನಡ ಚಿತ್ರರಂಗಕ್ಕೆ ಕೆಲವು ಕೊಡುಗೆಗಳನ್ನು ಘೋಷಿಸಿದ್ದಾರೆ. ಮುಖ್ಯವಾಗಿ ಮೂರು ಕೊಡುಗೆಗಳನ್ನು ಚಿತ್ರರಂಗಕ್ಕಾಗಿ ಘೋಷಿಸಿದ್ದು, ಅದರಲ್ಲಿ ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಟ್ಗಳಲ್ಲಿ ಶೋ ಹಾಗೂ ಟಿಕೆಟ್‌ ದರ ನಿಗದಿಪಡಿಸಿದ್ದು ಪ್ರಮುಖವಾಗಿದೆ. ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಘೋಷಿಸಿದ ಮೂರು ಕೊಡುಗೆಗಳು ಈ ಕೆಳಗಿನಂತಿವೆ.

ಚಲನಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಆರೋಗ್ಯ ಸೇವೆಗಾಗಿ ಸ್ಥಾಪಿಸಲಾದ ದತ್ತಿ ನಿಧಿಯ ಮೊತ್ತವನ್ನು 1 ಕೋಟಿ ರೂ.ಗಳಿಂದ 10 ಕೋಟಿ ರೂಗಳಿಗೆ ಹೆಚ್ಚಿಸುವುದಾಗಿ ಘೋಷಿಸಲಾಗಿದೆ.

 ರಾಜ್ಯದಲ್ಲಿನ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದ ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ 7.30ರವರೆಗಿನ ಪ್ರಮುಖ ಅವಧಿಯಲ್ಲಿ ಕನ್ನಡ ಹಾಗೂ ಪ್ರಾದೇಶಿಕ ಭಾಷೆಯ ಸಿನಿಮಾಗಳ ಪ್ರದರ್ಶನವನ್ನು ಕಡ್ಡಾಯಗೊಳಿಸುವ ಘೋಷಣೆಯನ್ನು ಮಾಡಲಾಗಿದೆ.

 ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕ ರೀತಿಯ ಪ್ರವೇಶ ದರ ನೀತಿ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದ್ದು, 200 ರೂ.ಗಳ ಗರಿಷ್ಠ ಪ್ರವೇಶ ದರ ನಿಗದಿ ಪಡಿಸುವ ಕುರಿತು ಕೂಡಾ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಪ್ರಮುಖವಾಗಿ ಮಲ್ಟಿಪ್ಲೆಕ್ಸ್‌ಗಳ ಟಿಕೆಟ್‌ ದರದ ಕುರಿತು ಅನೇಕರಲ್ಲಿ ಆಕ್ಷೇಪವಿತ್ತು. ಈಗ ಮಲ್ಟಿಪ್ಲೆಕ್ಸ್‌ ಗಳ ಟಿಕೆಟ್‌ ದರ ಕೂಡಾ ಇಳಿಯುವ ಮೂಲಕ ಸಾಮಾನ್ಯ ಜನ ಕೂಡಾ ಮಲ್ಟಿಪ್ಲೆಕ್ಸ್‌ ನತ್ತ ಮುಖ ಮಾಡಬಹುದು ಎಂಬ ಸಂತಸ ಚಿತ್ರರಂಗದ್ದಾಗಿದೆ.

ಇನ್ನು ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳನ್ನು ಕಡೆಗಣಿಸಲಾಗುತ್ತಿದೆ, ಒಳ್ಳೆಯ ಸಮಯದಲ್ಲಿ ಶೋ ಕೊಡುವುದಿಲ್ಲ ಎಂಬ ಆರೋಪವೂ ಚಿತ್ರರಂಗದ್ದಾಗಿತ್ತು. ಅದರಲ್ಲೂ ಹೊಸಬರ ಸಿನಿಮಾಗಳನ್ನು ಮಲ್ಟಿಪ್ಲೆಕ್ಸ್‌ಗಳು ಹೇಳದೇ ಕೇಳದೇ ಕಿತ್ತುಹಾಕುತ್ತವೆ ಎಂಬ ಕೂಗು ಆಗಾಗ ಕೇಳಿಬರುತ್ತಲೇ ಇತ್ತು. ಈಗ ಮಲ್ಟಿಪ್ಲೆಕ್ಸ್‌ ಗಳಲ್ಲಿ 1.30ರಿಂದ 7.30ರ ಅವಧಿಯ ಎರಡು ಶೋಗಳನ್ನು ಕನ್ನಡ ಚಿತ್ರಗಳಿಗೆ ಮೀಸಲಿಡಬೇಕೆಂದು ಸರ್ಕಾರ ತನ್ನ ಬಜೆಟ್‌ನಲ್ಲಿ ಘೋಷಿಸಿರೋದು ಕೂಡಾ ಚಿತ್ರರಂಗದ ಖುಷಿಗೆ ಕಾರಣವಾಗಿದೆ. 

 ಚಿತ್ರರಂಗದ ಅಭಿವೃದ್ಧಿಗೆ ಪೂರಕ ನಿರ್ಧಾರ

ಆರಂಭದಿಂದಲೂ ಕನ್ನಡ ಚಿತ್ರರಂಗಕ್ಕೆ ಎಲ್ಲವನ್ನು ನೀಡುತ್ತಾ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಚಿತ್ರರಂಗದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ. ಮುಖ್ಯಮಂತ್ರಿಗಳಿಗೆ ಕನ್ನಡ ಚಿತ್ರಗಳ ಮೇಲೆ ಪರಭಾಷಾ ಚಿತ್ರಗಳ ಹಾವಳಿ ಚೆನ್ನಾಗಿ ಗೊತ್ತಾಗಿರುವುದರಿಂದ ಕನ್ನಡ ಚಿತ್ರರಂಗದ ಬಹುತೇಕ ಬೇಡಿಕೆಗಳನ್ನು ಪೂರೈಸುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಮಲ್ಟಿಪ್ಲೆಕ್ಸ್‌ ಗಳ ಎಲ್ಲಾ ಪರದೆಗಳಲ್ಲೂ ಮಧ್ಯಾಹ್ನದ ಎರಡು ಶೋಗಳು ಕಡ್ಡಾಯವಾಗಿ ಕನ್ನಡಕ್ಕೆ ಕೊಡುತ್ತಾರೆ. ಈ ಮೂಲಕ ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರೈಮ್‌ ಟೈಮ್‌ ಸಿಗಲಿದೆ. ಮಲ್ಟಿಪ್ಲೆಕ್ಸ್‌ಗಳ ದರ ನಿಗದಿ ವಿಷಯದಲ್ಲೂ ಇಡೀ ಚಿತ್ರರಂಗ ಖುಷಿಯಾಗಿದೆ.

ಪರಭಾಷಾ ಚಿತ್ರಗಳನ್ನು ದೊಡ್ಡ ಮೊತ್ತಕ್ಕೆ ತಂದು ಇಲ್ಲಿ ಬಿಡುಗಡೆ ಮಾಡುತ್ತಿದ್ದರಿಂದ ಮಲ್ಟಿಪ್ಲೆಕ್ಸ್‌ಗಳು ದಿನಕ್ಕೊಂದು ದರ ನಿಗದಿ ಮಾಡುತ್ತಿದ್ದವು. ಇದರಿಂದ ಸಾಮಾನ್ಯ ಜನರು ಮಲ್ಟಿಪ್ಲೆಕ್ಸ್‌ ಗಳಲ್ಲಿ ಸಿನಿಮಾ ನೋಡುವುದೇ ಕಷ್ಟವಾಗುತ್ತಿತ್ತು. ಸಾಮಾನ್ಯ ಜನ ಕೂಡಾ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ನೋಡುವಂತಾಗಬೇಕು ಎಂಬ ಕಾರಣಕ್ಕೆ ನಾವು ಗರಿಷ್ಠ ಟಿಕೆಟ್‌ ದರವನ್ನು 200 ರೂಪಾಯಿ ನಿಗದಿ ಮಾಡುವಂತೆ ಮನವಿ ಮಾಡಿದ್ದೆವು. ಈಗ ಮುಖ್ಯಮಂತ್ರಿಗಳು 200 ರೂಪಾಯಿ ಗರಿಷ್ಠ ಟಿಕೆಟ್‌ ದರ ನಿಗದಿ ಮಾಡಿದ್ದಾರೆ. ಇದು ಸಂತಸ ತಂದಿದೆ. ಈ ಮೂಲಕ ಎಲ್ಲರೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ನೋಡಬಹುದಾಗಿದೆ.
– ಸಾ.ರಾ.ಗೋವಿಂದು, ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
 

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.