ಇಂದು ಹೊಡಿ ಒಂಬತ್ತ್ ಹಾಡು ಬಿಡುಗಡೆ
Team Udayavani, Jul 10, 2017, 10:50 AM IST
ಗಣೇಶ್ ಅಭಿನಯದ ಮತ್ತು ಯೋಗರಾಜ್ ಭಟ್ ನಿರ್ದೇಶನದ “ಮುಗುಳು ನಗೆ’ ಚಿತ್ರದ ಹಾಡುಗಳ ಸಿಡಿಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಮಧ್ಯೆ ಚಿತ್ರದ “ಹೊಡಿ ಒಂಬತ್ತ್’ ಹಾಡು ಇಂದು (ಸೋಮವಾರ) ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಲಿದೆ.
ಹಾಡನ್ನು ಬಿಡುಗಡೆ ಮಾಡುವುದಕ್ಕೆ ಗಣೇಶ್, ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಿರ್ಮಾಪಕ ಸೈಯದ್ ಸಲಾಂ ಸೇರಿದಂತೆ ಚಿತ್ರತಂಡದ ಹಲವರು ಇಂದು ಹುಬ್ಬಳ್ಳಿಗೆ ಬರಲಿದ್ದಾರೆ.ವಿಶೇಷವೆಂದರೆ, ಒಂದೇ ಹಾಡು ಎರಡು ಸಾರಿ ಬಿಡುಗಡೆಯಾಗುತ್ತಿರುವುದು. ಹೌದು, ಮಧ್ಯಾಹ್ನ 1 ಗಂಟೆಗೆ ಚಿತ್ರತಂಡದವರು ಖಾಸಗೀ ಕಾಲೇಜ್ನಲ್ಲಿ ವಿದ್ಯಾರ್ಥಿಗಳ ಮಧ್ಯೆ ಹಾಡನ್ನು ಬಿಡುಗಡೆ ಮಾಡಲಿದ್ದಾರೆ.
ನಂತರ ಮಧ್ಯಾಹ್ನ 3.30ಕ್ಕೆ ರಾಣಿ ಚೆನ್ನೆಮ್ಮ ಪ್ರತಿಮೆಗೆ ಮತ್ತು ನಾಲ್ಕಕ್ಕೆ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಜೆ ಐದರ ನಂತರ ಲಕ್ಷಿ ಮಾಲ್ನಲ್ಲಿ “ಹೊಡಿ ಒಂಬತ್ತ್’ ಹಾಡನ್ನು ಮತ್ತೂಮ್ಮೆ ಬಿಡುಗಡೆ ಮಾಡಲಾಗುತ್ತದೆ. ಇದು “ಮುಗುಳು ನಗೆ’ಯ ಮೊದಲ ಹಾಡಿನ ಕಥೆಯಾದರೆ, ಎರಡನೆಯ ಹಾಡಾದ “ರೂಪಸಿ’ಯನ್ನು 12ನೇ ತಾರೀಖೀನಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.