![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-415x256.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
Team Udayavani, Jul 3, 2024, 11:06 AM IST
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-620x372.jpg)
“ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ’ ಚಿತ್ರಗಳನ್ನು ನಿರ್ದೇಶಿಸಿರುವ ಹೇಮಂತ್ ರಾವ್ ನಟ ಶಿವರಾಜ್ ಕುಮಾರ್ ಅವರಿಗೊಂದು ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯನ್ನು ನೀವು ಕೇಳಿರಬಹುದು. ಈಗ ಆ ಚಿತ್ರದ ಹೊಸ ಅಪ್ಡೇಟ್ ಬಂದಿದೆ. ಅದು ಟೈಟಲ್ ಕುರಿತು.
ಸದ್ಯ ಪ್ರೀ ಪ್ರೊಡಕ್ಷನ್ನಲ್ಲಿ ಬಿಝಿಯಾಗಿರುವ ನಿರ್ದೇಶಕ ಹೇಮಂತ್ ರಾವ್ ಈಗ ಚಿತ್ರದ ಟೈಟಲ್ ಅನೌನ್ಸ್ ಮಾಡಲು ಮುಂದಾಗಿದ್ದಾರೆ. ಜುಲೈ 4ರಂದು ಚಿತ್ರದ ಟೈಟಲ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಇಷ್ಟು ದಿನ ಪಕ್ಕಾ ಕ್ಲಾಸ್ ಸಿನಿಮಾ ಮಾಡಿಕೊಂಡು ಬಂದಿರುವ ಹೇಮಂತ್, ಈ ಬಾರಿ ಶಿವರಾಜ್ಕುಮಾರ್ ಅವರ ಸಿನಿಮಾ ಮೂಲಕ ಹೊಸ ಜಾನರ್ಗೆ ತೆರೆದುಕೊಳ್ಳಲಿದ್ದಾರೆ. ಇದೊಂದು ಆ್ಯಕ್ಷನ್ ಡ್ರಾಮಾ ಚಿತ್ರವಾಗಿದ್ದು, ಸಾಕಷ್ಟು ವಿಶೇಷತೆಗಳೊಂದಿಗೆ ಕಥೆ ಮೂಡಿಬರಲಿದೆ.
ವೈಶಾಖ್ ಗೌಡ ಎನ್ನುವವರು “ವಿಜೆ ಫಿಲಂಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೆಪ್ಟೆಂಬರ್ ನಂತರ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಂದಹಾಗೆ, ಸೌತ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಚಿತ್ರ ಮೂಡಿಬರುತ್ತಿದೆ.
ಟಾಪ್ ನ್ಯೂಸ್
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-150x93.jpg)
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.