![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 2, 2022, 3:16 PM IST
ಜಗ್ಗೇಶ್ ನಟನೆಯ “ತೋತಾಪುರಿ’ ಚಿತ್ರ ಸೆ.30ರಂದು ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ.
ಜಗ್ಗೇಶ್ ಹಾಗೂ ವಿಜಯ ಪ್ರಸಾದ್ ಕಾಂಬಿನೇಶನ್ನಲ್ಲಿ ಮೂಡಿಬಂದ ಮತ್ತೂಂದು ಚಿತ್ರ ಇದಾಗಿದ್ದು, ಚಿತ್ರದ ಹಾಡು, ಡೈಲಾಗ್ಗಳಿಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಜಾತಿ, ಧರ್ಮ ಮತ್ತು ಮಾನವೀಯತೆಯಲ್ಲಿ ಮನುಷ್ಯನಿಗೆ ಯಾವುದು ದೊಡ್ಡದು? ಇಂದಿನ ಸಮಾಜಕ್ಕೆ ಬೇಕಾಗಿರುವುದು ಯಾವುದು? ಅಂತಿಮವಾಗಿ ನಮ್ಮೊಳಗೆ ಉಳಿಯುವುದು ಯಾವುದು, ಅಳಿಯುವುದು ಯಾವುದು? ಇಂಥದ್ದೊಂದು ಗಂಭೀರ ಪ್ರಶ್ನೆಯನ್ನು ಜೊತೆಗೆ ಕಾಮಿಡಿ ಕಚಗುಳಿ ಇಡುತ್ತಾ ಪ್ರೇಕ್ಷಕರ ಮುಂದೆ ಬಂದಿರುವ ಸಿನಿಮಾ “ತೋತಾಪುರಿ’.
ಆಗಾಗ್ಗೆ ಗಂಭೀರ ಚರ್ಚೆಯಾಗುವ, ರಾಜಕೀಯ ಬಣ್ಣ ಪಡೆದುಕೊಳ್ಳುವ, ಒಬ್ಬರ ಮೇಲೊಬ್ಬರು ಸವಾರಿ ಮಾಡುವಂಥ ಜಾತಿ, ಧರ್ಮ, ಲಿಂಗ ತಾರತಮ್ಯ ಹೀಗೆ ಪ್ರಸ್ತುತ ಸಮಾಜದಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ವಿಷಯಗಳನ್ನು ಹುಡುಕಿ ಅದನ್ನು ತನ್ನದೇ ಧಾಟಿಯಲ್ಲಿ ದೃಶ್ಯರೂಪದಲ್ಲಿ ಕಟ್ಟಿ ಕೊಟ್ಟಿರುವ ನಿರ್ದೇಶಕ ವಿಜಯ ಪ್ರಸಾದ್ ಪ್ರಯತ್ನಿಸಿದ್ದಾರೆ.
ತೋತಾಪುರಿ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಒಂದೆಡೆಯಾದರೆ, ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ ತೋತಾಪುರಿ ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಸಾಕಷ್ಟು ತಾರಾಸಮೂಹವೇ ಇದೆ ಎಂಬುದು ಮತ್ತೂಂದು ಗಮನಾರ್ಹ ವಿಷಯ. ಡಾಲಿ ಧನಂಜಯ್, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾದತ್ ಸೇರಿದಂತೆ ಅನೇಕ ಕಲಾವಿದರು ತೋತಾಪುರಿ ತಾರಾಗಣದಲ್ಲಿದ್ದಾರೆ. ಒಂದು ಕಾಮಿಡಿ ಸಿನಿಮಾವಾಗಿ “ತೋತಾಪುರಿ’ ಅಭಿಮಾನಿಗಳನ್ನು ನಗಿಸುತ್ತಿದ್ದು, ವಾರಾಂತ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.