ಜು.14ಕ್ಕೆ ತೆರೆಗೆ ಬರಲಿದೆ ತ್ರಿಕೋನ ಪ್ರೇಮ ಕಥೆಯ ʼಓ ಮನಸೇʼ


Team Udayavani, Jul 12, 2023, 2:13 PM IST

ಜು.14ಕ್ಕೆ ತೆರೆಗೆ ಬರಲಿದೆ ತ್ರಿಕೋನ ಪ್ರೇಮ ಕಥೆಯ ʼಓ ಮನಸೇʼ

ನಟರಾದ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್‌ ಮತ್ತು ಸಂಚಿತಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ತ್ರಿಕೋನ ಕಥಾಹಂದರದ “ಓ ಮನಸೇ’ ಸಿನಿಮಾ ಇದೇ ಜುಲೈ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸದ್ಯ “ಓ ಮನಸೇ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಸಿನಿಮಾವನ್ನು ಪ್ರೇಕ್ಷಕರಿಗೆ ತಲುಪಿಸುವ ಕೊನೆಹಂತದ ಕಸರತ್ತು ನಡೆಸುತ್ತಿದೆ.

ಇದೇ ವೇಳೆ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಓ ಮನಸೇ’ ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.

ಮೊದಲಿಗೆ ಸಿನಿಮಾದ ಬಗ್ಗೆ ಮಾತನಾಡಿದ ನಟ ವಿಜಯ ರಾಘವೇಂದ್ರ, “ಈ ಸಿನಿಮಾದಲ್ಲಿ ಶಿಕ್ಷಣಕ್ಕೆ ಮಹತ್ವ ಕೊಡುವ ಒಂದಷ್ಟು ವಿಷಯಗಳಿವೆ. ಹಾಗಾಗಿ ನಾನು ಈ ಸಿನಿಮಾವನ್ನು ಒಪ್ಪಿಕೊಂಡೆ. ಉಳಿದಂತೆ ಲವ್‌, ಸಸ್ಪೆನ್ಸ್‌, ಕಾಮಿಡಿ ಹೀಗೆ ಎಲ್ಲ ಎಂಟರ್‌ಟೈನ್ಮೆಂಟ್‌ ಅಂಶಗಳೂ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ನಾನು ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದೇನೆ’ ಎಂದು ತಮ್ಮ ಪರಿಚಯ ಮಾಡಿಕೊಟ್ಟರು.

“ಮೊದಲ ಬಾರಿಗೆ ವಿಜಯ್‌ ರಾಘವೇಂದ್ರ ಅವರ ಜೊತೆ ಈ ಸಿನಿಮಾದಲ್ಲಿ ಅಭಿನಯಿಸಿದ್ದು ಒಳ್ಳೆಯ ಅನುಭವ ಕೊಟ್ಟಿದೆ. ನಿರ್ಮಾಪಕರು ಯಾವುದೇ ಕೊರತೆಯಿಲ್ಲದೆ, ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಾವು ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳಿಂದ ಎನ್ನೆಲಾ ಅನುಭವಿಸಬೇಕಾಗುತ್ತದೆ ಎಂಬುದು ಈ ಸಿನಿಮಾದ ಕಥೆಯ ಒಂದು ಎಳೆ’ ಎಂದರು ನಟ ಧರ್ಮ ಕೀರ್ತಿರಾಜ್‌.

“ಒಳ್ಳೆಯ ಕಥೆ ಸಿನಿಮಾದಲ್ಲಿದ್ದು, ನನ್ನ ಪಾತ್ರಕ್ಕೂ ಸಾಕಷ್ಟು ಮಹತ್ವವಿದೆ. ನಿರ್ಮಾಪಕರು ಸದಭಿರುಚಿಯ ಸಿನಿಮಾ ಮಾಡಿದ್ದಾರೆ. ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸದ ಮಾತನಾಡಿದರು ನಟಿ ಸಂಚಿತಾ ಪಡುಕೋಣೆ.

“ಶ್ರೀ ಫ್ರೆಂಡ್ಸ್‌ ಮೂವೀ ಮೇಕರ್’ ಲಾಂಛನದಲ್ಲಿ ಎಂ. ಎನ್‌ ಭೈರೇಗೌಡ, ಧನಂಜಯ್ ಯುವರಾಜು, ಸು. ಕಾ. ರಾಮು ಮತ್ತು ವೆಂಕಟೇಶ್‌ ಜಂಟಿಯಾಗಿ ನಿರ್ಮಿಸಿರುವ “ಓ ಮನಸೇ’ ಸಿನಿಮಾಕ್ಕೆ ಉಮೇಶ್‌ ಗೌಡ ನಿರ್ದೇಶನವಿದೆ. “ಓ ಮನಸೇ’ ಸಿನಿಮಾದಲ್ಲಿ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್‌, ಸಂಚಿತಾ ಪಡುಕೋಣೆ ಅವರೊಂದಿಗೆ ಹನುಮಂತೇಗೌಡ, ಶೋಭರಾಜ್‌, ಸಾಧು ಕೋಕಿಲ, ಗೋವಿಂದೇ ಗೌಡ, ಹರೀಶ್‌ ರಾಯ್ ಚಿಕ್ಕಹೆಜ್ಜಾಜಿ ಮಹಾದೇವ್‌, ಕಿಲ್ಲರ್‌ ವೆಂಕಟೇಶ್‌, ವಾಣಿಶ್ರೀ, ಜಯರಾಮ್‌, ರುಶಿಕಾ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರು, ಮಡಿಕೇರಿ, ಬ್ಯಾಂಕಾಕ್‌, ತಲ ಕಾವೇರಿ, ಪಟ್ಟಾಯಾ ಸುತ್ತಮುತ್ತ ಸುಮಾರು 55ಕ್ಕೂ ಹೆಚ್ಚು ದಿನಗಳ ಕಾಲ “ಓ ಮನಸೇ’ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. “ಓ ಮನಸೇ’ ಸಿನಿಮಾಕ್ಕೆ ಎಂ. ಆರ್‌ ಸೀನು ಛಾಯಾಗ್ರಹಣ, ಶ್ರೀನಿವಾಸ್‌ ಪಿ. ಬಾಬು ಸಂಕಲನವಿದೆ. ಚಿತ್ರದ ಹಾಡುಗಳಿಗೆ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದು, ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ, ಸುಮಾರು 120ಕ್ಕೂ ಹೆಚ್ಚಿನ ಥಿಯೇಟರ್‌ ಗಳಲ್ಲಿ “ಓ ಮನಸೇ’ ಸಿನಿಮಾ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.