![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 18, 2020, 1:14 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ತ್ರಿವಿಕ್ರಮ’ದ ಚಿತ್ರೀಕರಣ ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ.
ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆದಷ್ಟು ಬೇಗ ಹಾಡುಗಳಚಿತ್ರೀಕರಣ ಮುಗಿಸುವ ಯೋಚನೆಯಲ್ಲಿದೆ ಚಿತ್ರತಂಡ. ಇದರ ನಡುವೆಯೇ ದೀಪಾವಳಿ ಹಬ್ಬದ ಸಂದರ್ಭದಲ್ಲಿ “ತ್ರಿವಿಕ್ರಮ’ ಚಿತ್ರದ “ಮಮ್ಮಿ ಪ್ಲೀಸ್ ಮಮ್ಮಿ…’ ಎಂಬ ಹಾಡೊಂದನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದೆ.
ಮಗ ತನ್ನ ಪ್ರೀತಿಯ ಬಗ್ಗೆ ತಾಯಿಯ ಬಳಿ ವಿನೂತನ ಶೈಲಿಯಲ್ಲಿ ಹೇಳಿಕೊಳ್ಳುವ ಈ ಹಾಡಿಗೆ ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ವಿಜಯ್ ಪ್ರಕಾಶ್ ಈ ಹಾಡಿಗೆ ಧ್ವನಿಯಾಗಿದ್ದಾರೆ. ಚಿತ್ರದ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
“ಗೌರಿ ಎಂಟರ್ಟೈನರ್’ ಬ್ಯಾನರ್ನಲ್ಲಿ ಸೋಮಣ್ಣ ನಿರ್ಮಿಸುತ್ತಿರುವ “ತ್ರಿವಿಕ್ರಮ’ ಚಿತ್ರಕ್ಕೆ ಸಹನಾ ಮೂರ್ತಿ ಕಥೆ, ಚಿತ್ರಕಥೆ,ಸಂಭಾಷಣೆ ಬರೆದು ನಿದೇಶಿಸುತ್ತಿದ್ದಾರೆ. ಚಿತ್ರಕ್ಕೆ ಸಂತೋಷ್ ರೈ ಪಾತಾಜೆ, ಗುರು ಪ್ರಶಾಂತ್ ರೈ ಛಾಯಾಗ್ರಹಣ ಹಾಗೂ ಕೆ.ಎಂ ಪ್ರಕಾಶ್ ಸಂಕಲನವಿದೆ. “ತ್ರಿವಿಕ್ರಮ’ ಚಿತ್ರದಲ್ಲಿ ವಿಕ್ರಮ್ ರವಿಚಂದ್ರನ್ಗೆ ನಾಯಕಿಯಾಗಿ ಅಕಾಂಕ್ಷ ಶರ್ಮ ಜೋಡಿಯಾಗಿದ್ದಾರೆ. ಉಳಿದಂತೆ ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧು ಕೋಕಿಲ, ಚಿಕ್ಕಣ್ಣ, ರೋಹಿತ್ ರಾಯ್, ಆದಿ ಲೋಕೇಶ್, ಶಿವಮಣಿ, ಅಕ್ಷರ ಗೌಡ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ತ್ರಿವಿಕ್ರಮ’ನ ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ತೆರೆಮೇಲೆ “ತ್ರಿವಿಕ್ರಮ’ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತಾನೆ ಅನ್ನೋದು, ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.