ಟ್ರಂಕ್‌ ನಿರ್ದೇಶಕಿ-ನಾಯಕನ ಸಿನಿಮಾ “ಇರಾ’ದೆ


Team Udayavani, Oct 29, 2019, 3:01 AM IST

IRA–Films

ಕನ್ನಡದಲ್ಲಿ ಕಳೆದ ವರ್ಷ “ಟ್ರಂಕ್‌’ ಎಂಬ ಚಿತ್ರ ಬಂದಿದ್ದು ನೆನಪಿರಬಹುದು. ರಿಷಿಕಾ ಶರ್ಮಾ ನಿದೇಶನದಲ್ಲಿ ನಿಹಾಲ್‌ ನಾಯಕರಾಗಿ ನಟಿಸಿದ್ದರು. ಈಗ ಇವರ ಕಾಂಬಿನೇಷನ್‌ನಲ್ಲಿ ಹೊಸದೊಂದು ನಿರ್ಮಾಣ ಸಂಸ್ಥೆ ಹುಟ್ಟುಕೊಂಡಿದೆ. ಹೌದು, ರಿಷಿಕಾ ಹಾಗು ನಿಹಾಲ್‌ ಇಬ್ಬರೂ ಸೇರಿ ಇರಾ ಫಿಲಂಸ್‌ ಹೆಸರಿನ ನಿರ್ಮಾಣ ಸಂಸ್ಥೆ ಶುರುಮಾಡಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ಸಂತೋಷ್‌ ಎಸ್‌.ಲಾಡ್‌ ಅವರು ನೂತನ ಇರಾ ಫಿಲಂಸ್‌ ನಿರ್ಮಾಣ ಸಂಸ್ಥೆಗೆ ಚಾಲನೆ ನೀಡಿ, ಶುಭಹಾರೈಸಿದ್ದಾರೆ.

ತಮ್ಮ ನೂತನ ನಿರ್ಮಾಣ ಸಂಸ್ಥೆ ಇರಾ ಫಿಲಂಸ್‌ ಕುರಿತು ನಿಹಾಲ್‌ ಹೇಳಿದ್ದಿಷ್ಟು. “2018 ರಲ್ಲಿ ನಾವು ಮಾಡಿದ “ಟ್ರಂಕ್‌’ ಸಿನಿಮಾಗೆ ನಿಮ್ಮೆಲ್ಲರ ಬೆಂಬಲ ಚೆನ್ನಾಗಿತ್ತು. ಈಗ ನಿರ್ದೇಶಕಿ ರಿಷಿಕಾ ಶರ್ಮ ಅವರ ಜೊತೆಗೂಡಿ ಇರಾ ಫಿಲಂಸ್‌ ನಿರ್ಮಾಣ ಸಂಸ್ಥೆ ಮಾಡಿದ್ದೇನೆ. ಈ ಸಂಸ್ಥೆ ಮೂಲಕ ಸಿನಿಮಾಗಳ ನಿರ್ಮಾಣ, ವಿತರಣೆ, ಪ್ರಚಾರ ಕಾರ್ಯ ಹೀಗೆ ಸಿನಿಮಾಗೆ ಸಂಬಂಧಿಸಿದ ಕೆಲಸಗಳನ್ನು ಮಾಡಲಾಗುತ್ತದೆ.

ಕನ್ನಡ ಸಿನಿಮಾಗಳ ಜೊತೆಯಲ್ಲಿ ತೆಲುಗು, ತಮಿಳು, ಹಿಂದಿ ಭಾಷೆಯ ಚಿತ್ರಗಳನ್ನೂ ನಮ್ಮ ಸಂಸ್ಥೆ ಮೂಲಕ ವಿತರಣೆ ಮಾಡಲಾಗುವುದು. ಈಗ 140 ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ನಮ್ಮ ಸಂಸ್ಥೆ ಗುರುತಿಸಿದ್ದು, ಅವುಗಳ ಜೊತೆ ಮಾತುಕತೆ ನಡೆಸಲಾಗಿದೆ. ಕಳೆದ ಒಂದುವರೆ ವರ್ಷದಿಂದಲೂ ಒಂದು ತಂಡ ಕಟ್ಟಿಕೊಂಡು ಈ ಸಂಸ್ಥೆ ಹುಟ್ಟುಹಾಕಿದ್ದೇವೆ. ಇನ್ನು, ನಮ್ಮ ಸಂಸ್ಥೆ ಮೂಲಕ ಜನವರಿ ಅಥವಾ ಫೆಬ್ರವರಿಯಲ್ಲಿ ನಾಲ್ಕು ಹೊಸ ಪ್ರಾಜೆಕ್ಟ್ಗಳು ಶುರುವಾಗಲಿವೆ.

ಎರಡು ಸಿನಿಮಾ, ಒಂದು ಸೀರಿಯಲ್‌ ಹಾಗು ಒಂದು ವೆಬ್‌ಸೀರಿಸ್‌ ನಿರ್ಮಿಸುವ ಯೋಚನೆ ಇದೆ. ನಮ್ಮ ಬೆನ್ನೆಲುಬಾಗಿ, ಹಿತೈಷಿಗಳಾಗಿ ಸಂತೋಷ್‌ ಲಾಡ್‌ ಇದ್ದಾರೆ’ ಎಂದು ವಿವರ ಕೊಟ್ಟರು ನಿಹಾಲ್‌. ಇನ್ನು ಸಂಸ್ಥೆಯ ನಿರ್ದೇಶಕಿ ರಿಷಿಕಾ ಶರ್ಮಾ ಅವರು ಮಾತನಾಡಿ, “ನಾನು “ಟ್ರಂಕ್‌’ ಬಳಿಕ ಒಂದು ನಿರ್ಮಾಣ ಸಂಸ್ಥೆ ಕಟ್ಟುವ ಕೆಲಸದಲ್ಲಿ ಬಿಝಿಯಾದೆ. ಈಗ ಇರಾ ಫಿಲಂಸ್‌ ನಿರ್ಮಾಣ ಸಂಸ್ಥೆಗೆ ಚಾಲನೆ ಸಿಕ್ಕಿದೆ. ಇರಾ ಅಂದರೆ ಸಂಸ್ಕೃತ ಪದದಲ್ಲಿ ಸರಸ್ವತಿ ಎಂದರ್ಥ. ಹಾಗಾಗಿ ಈ ಹೆಸರಿನ ಸಂಸ್ಥೆ ಮೂಲಕ ಇಲ್ಲಿ ಸಿನಿಮಾ, ಸೀರಿಯಲ್‌, ವೆಬ್‌ಸೀರಿಸ್‌ ನಿರ್ಮಾಣ ಮಾಡುವ ಗುರಿ ಇದೆ.

ಈ ಸಂಸ್ಥೆಯಲ್ಲಿ 25 ಜನರ ತಂಡವಿದೆ. ಇಲ್ಲಿ ಬರವಣಿಗೆ ಕೆಲಸ ನಡೆಯುತ್ತದೆ. ಪ್ರಮೋಷನ್‌ ಕೆಲಸಗಳೂ ನಡೆಯಲಿವೆ. ವುಮೆನ್‌ ರೈಟರ್ ಕೂಡ ಇಲ್ಲಿದ್ದಾರೆ. ಕಥೆ, ಸಾಹಿತ್ಯ, ಸಂಭಾಷಣೆ ಹೀಗೆ ಬರವಣಿಗೆಯ ಕೆಲಸ ಇಲ್ಲಿ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಸಂಸ್ಥೆ ಮೂಲಕ ಎರಡು ಚಿತ್ರಗಳು ನಿರ್ಮಾಣಗೊಳ್ಳಲಿವೆ. ಅದಕ್ಕೆ ಈಗಾಗಲೇ ತಯಾರಿ ನಡೆದಿದೆ. ಕ್ರಿಯೆಟಿವ್‌ ವಿಷಯದಲ್ಲಿ ನಾನಿದ್ದರೆ, ಪ್ರಮೋಷನ್ಸ್‌, ಪ್ರೊಡಕ್ಷನ್ಸ್‌ ವಿಷಯವನ್ನು ನಿಹಾಲ್‌ ನೋಡಿಕೊಳ್ಳುತ್ತಾರೆ’ ಎಂದು ವಿವರ ಕೊಟ್ಟರು ರಿಷಿಕಾ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.