Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್


Team Udayavani, Sep 18, 2024, 10:58 AM IST

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

ಬೆಂಗಳೂರು: ನಟ ಉಪೇಂದ್ರ (Actor Upendra) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ “ಬುದ್ಧಿವಂತ’ನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಉಪ್ಪಿ ಕೂಡಾ ಕತ್ರಿಗುಪ್ಪೆಯ ತಮ್ಮ ಮನೆಯಲ್ಲಿ ಅಭಿಮಾನಿಗಳ ಜೊತೆಗೆ ಬರ್ತ್‌ಡೇ ಆಚರಿಸಲಿದ್ದಾರೆ.

ಈ ನಡುವೆಯೇ ಉಪೇಂದ್ರ ಅವರ “ಯುಐ’ (UI MOVIE) ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆ ಕುರಿತಾದ ಅಪ್‌ ಡೇಟ್‌ ಕೂಡಾ ಹೊರಬಿದ್ದಿದೆ.  ಕೊಂಬು ಇರುವ ಕುದುರೆ ಮೇಲೆ ಕೂತಿರುವ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಸಿನಿಮಾದ ಬಗ್ಗೆ ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದ್ದಾರೆ ಉಪ್ಪಿ. ಇದೇ ಅಕ್ಟೋಬರ್‌ ತಿಂಗಳಿನಲ್ಲಿ ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಅಲ್ಲಿ ತಲೆಗೆ ಹುಳ ಬಿಡಲಾಗುತ್ತದೆ, ಮೊದಲ ವೀಕ್ಷಣೆಗೆ ಸಿನಿಮಾ ಅರ್ಥವಾಗಲ್ಲ, ತುಂಬಾ ಕನ್‌ಫ್ಯೂಸ್‌ ಮಾಡುತ್ತಾರೆ ಎಂಬುದು ಹಳೆಯ ವಾದ. ಆದರೆ, “ಯು-ಐ’ ವಿಚಾರದಲ್ಲಿ ಉಪೇಂದ್ರ ಬದಲಾಗಿದ್ದಾರೆ. ಹೊಸದೇನೋ ತೋರಿಸಲು ಹೊರಟಿದ್ದಾರೆ.

ಈ ಬಾರಿ ನೋ ಕನ್‌ಫ್ಯೂಸ್‌, ಕೇವಲ ಕನ್ವಿನ್ಸ್‌ ಎನ್ನಲಾಗುತ್ತಿದೆ. ಈ ಹಿಂದೆ ಉಪೇಂದ್ರ ಹೇಳಿದಂತೆ, “ನಾನು ಯಾವತ್ತೂ ಕನ್ವಿನ್ಸ್‌ ಮಾಡೋಕೇ ಚಿತ್ರ ಮಾಡೋದು. ಅದರೆ, ಕನ್‌ಫ್ಯೂ ಸ್‌ ಮಾಡ್ತೀನಿ ಅಂದುಕೊಳ್ಳುತ್ತಾರೆ. ಸತ್ಯನೇ ಗೊಂದಲ ಆಗಿಬಿಟ್ಟಿದೆ ನಮ್ಮ ಜನಕ್ಕೆ. ಅದು ಯಾರ ತಪ್ಪು. ಕನ್ವಿನ್ಸ್‌ ಆಗುವವರಿಗೆ ಕನ್ವಿನ್ಸ್‌ ಮಾಡುತ್ತೇನೆ. ಕನ್‌ ಫ್ಯೂಸ್‌ ಆಗುವವರು ಯಾವಾಗಲೂ ಕನ್‌ಫ್ಯೂಸ್‌ ಆಗಿಯೇ ಇರುತ್ತಾರೆ. ಸಿನಿಮಾ ದೃಶ್ಯ ಮಾಧ್ಯಮ. ದೃಶ್ಯ ನೋಡಿ ಕಲ್ಪನೆ ಮಾಡಿಕೊಳ್ಳಬೇಕು. ಒಬ್ಬ ಚಿತ್ರ ಕಲಾವಿದ ಒಂದು ಚಿತ್ರ ಬರೆಯುತ್ತಾನೆ. ಅದನ್ನು ಅವನೇ ಚೆನ್ನಾಗಿದೆ ಎಂದರೆ ಚೆನ್ನಾಗಿರುತ್ತದಾ? ನೀವು ನೋಡಿ ಹೇಳಿದರೆ ಅದಕ್ಕೊಂದು ಬೆಲೆ ಇರುತ್ತದೆ’ ಎನ್ನುವುದು ಉಪ್ಪಿ ಮಾತು.

ಪ್ರೇಕ್ಷಕರಿಗೆ ಹೊಸದೇನೋ ನೀಡಬೇಕೆಂದು ಚಿತ್ರತಂಡ ಪ್ರಯತ್ನಿಸುತ್ತಿದ್ದು, ಅದರ ಮೊದಲ ಹಂತವಾಗಿ ಹಾಡುಗಳ ಲೈವ್‌ ರೆಕಾರ್ಡಿಂಗ್‌ಗೆ ಹಂಗೇರಿಯಾದ ಬುಡಾಪೆಸ್ಟ್‌ಗೆ ತೆರಳಿದೆ. ಹಂಗೆರಿಯ ಪ್ರಮುಖ ನಗರ ಬುಡಾಪೆಸ್ಟ್‌ ನಲ್ಲಿ ಹಾಡಿನ ರೆಕಾರ್ಡ್‌ ಮಾಡಿದೆ. 90-ಪೀಸ್‌ ಆರ್ಕೆಸ್ಟ್ರಾ ಬಳಸಿ ಸಂಗೀತವನ್ನು ರೆಕಾರ್ಡ್‌ ಮಾಡುವ ಮೂಲಕ ಹಾಡಲ್ಲಿ ಹೊಸ  ಫೀಲ್‌ ಸಿಗಲಿದೆ.

ಉಪೇಂದ್ರ ನಿರ್ದೇಶನದ ‌ʼಯುಐʼ ಸಿನಿಮಾಕ್ಕೆ ಕೆ.ಪಿ ಶ್ರೀಕಾಂತ್, ಜಿ.ಮನೋಹರನ್‌ ಬಂಡವಾಳ ಹಾಕಿದ್ದಾರೆ. ರೀಷ್ಮಾ ನಾಣಯ್ಯ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.