ಗಾಂಧಿನಗರ ಮತ್ತೆ ಕಲರ್‌ ಫುಲ್‌ : ಈ ವಾರ ಏಳು ಸಿನಿಮಾ ರಿಲೀಸ್‌


Team Udayavani, Feb 9, 2022, 11:38 AM IST

ಗಾಂಧಿನಗರ ಮತ್ತೆ ಕಲರ್‌ ಫುಲ್‌ : ಈ ವಾರ ಏಳು ಸಿನಿಮಾ ರಿಲೀಸ್‌

ಥಿಯೇಟರ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಶೇಕಡ ನೂರರಷ್ಟುಪ್ರೇಕ್ಷಕರ ಪ್ರವೇಶಾತಿಗೆ ಅನುಮತಿ ಸಿಗುತ್ತಿದ್ದಂತೆ, ಗಾಂಧಿನಗರದಲ್ಲಿ ಸಿನಿಮಾಗಳ ರಿಲೀಸ್‌ ಭರಾಟೆಯೂ ಜೋರಾಗುತ್ತಿದೆ. ಫೆಬ್ರವರಿ ಮೊದಲ ವಾರದಿಂದ ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರ ಪ್ರವೇಶಾತಿಗೆ ಸಿಕ್ಕಿದ್ದು, ಮೊದಲ ವಾರದಲ್ಲೇ “ಜಾಡಘಟ್ಟ’, “ಆಪರೇಶನ್‌ 72′ ಮತ್ತು “ಹಳ್ಳಿ ಹೈಕ್ಳು ಪ್ಯಾಟೆ ಲೈಫ‌ು’ ಎಂಬ ಮೂರು ಸಿನಿಮಾಗಳು ಬಿಡುಗಡೆಯಾಗಿ ತೆರೆಗೆ ಬಂದಿದ್ದವು. ಇನ್ನು ಫೆಬ್ರವರಿ ಎರಡನೇ ಶುಕ್ರವಾರ (ಫೆ. 11)ರಂದು ಕೂಡ ಸದ್ಯ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿ ನಿಂತಿವೆ.

ಸದ್ಯ ಫೆ. 11ಕ್ಕೆ “ಲವ್‌ ಮಾಕ್ಟೇಲ್‌-2′, “ಫೋರ್‌ವಾಲ್ಸ್‌’, “ಮಹಾರೌದ್ರಂ’, “ರೌಡಿ ಬೇಬಿ’, “ಪ್ರೀತಿಗಿಬ್ಬರು’, “ಒಪ್ಪಂದ’, “ಇದೇ ಅಂತರಂಗ ಶುದ್ಧಿ’ ಸೇರಿದಂತೆ ಏಳು ಸಿನಿಮಾಗಳುತಮ್ಮ ಬಿಡುಗಡೆ ಯನ್ನು ಘೋಷಿಸಿಕೊಂಡಿವೆ.

ಮತ್ತೆ ಪ್ರೇಕ್ಷಕರನ್ನು ಸೆಳೆಯುವ ಕಸರತ್ತುಸುಮಾರುಎರಡುವರ್ಷಗಳಿಂದ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್ ಗಳತ್ತ ಮುಖ ಮಾಡುವ ಪ್ರೇಕ್ಷಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಹೀಗಿರುವಾಗ, ಪ್ರೇಕ್ಷಕರನ್ನು ಮತ್ತೆ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳತ್ತ ಮುಖ ಮಾಡುವಂತೆ ಮಾಡುವ ದೊಡ್ಡ ಸವಾಲು ಪ್ರದರ್ಶಕರ ಮುಂದಿದೆ.

ಅದಕ್ಕಾಗಿ ಪ್ರದರ್ಶಕರಿಗೆ ಬಿಗ್‌ ಸ್ಟಾರ್ ಸಿನಿಮಾಗಳು ಮತ್ತು ವೆರೈಟಿ ಸಿನಿಮಾಗಳ ಕಂಟೆಂಟ್‌ ತುಂಬಾನೇ ಮುಖ್ಯವಾಗಿರುತ್ತದೆ. ಇನ್ನು ಸಿನಿಮಾಗಳ ಬಿಡುಗಡೆಯಿಲ್ಲದೆ ಖಾಲಿ ಹೊಡೆಯುತ್ತಿದ್ದಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಬ್ಯಾಕ್‌ ಟು ಬ್ಯಾಕ್‌ಸಿನಿಮಾಗಳು ರಿಲೀಸ್‌ ಆಗುತ್ತಿರುವುದು ಸಹಜವಾಗಿಯೇಒಂದಷ್ಟು ಜೋಶ್‌ ತಂದಿದೆ. ಬೇರೆ ಬೇರೆ ಶೈಲಿಯ ಸಿನಿಮಾಗಳ ಕಂಟೆಂಟ್‌ ಸಿಗುವುದರಿಂದ, ತಮಗೆ ಬೇಕಾದಂತಹ ಸಿನಿಮಾಗಳನ್ನು ಪಡೆದು ಪ್ರದರ್ಶಿಸಲು ಪ್ರದರ್ಶಕರಿಗೆಅನುಕೂಲವಾಗುತ್ತದೆ.

ಪ್ರೇಕ್ಷಕರ ಅಭಿರುಚಿಕೆ ತಕ್ಕಂತ ಸಿನಿಮಾಗಳನ್ನು ಪಡೆದು, ಮತ್ತೆ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳತ್ತ ಪ್ರೇಕ್ಷಕರನ್ನು ಸೆಳೆಯಲು ಇದುಅನುಕೂಲವಾಗಬಹುದು ಎಂಬ ಲೆಕ್ಕಾಚಾರ ಪ್ರದರ್ಶಕರದ್ದು. ಗಾಂಧಿನಗರದಲ್ಲಿ ಮತ್ತೆ ಸಿನಿ ಟ್ರಾಫಿಕ್‌ ಆತಂಕ? ಸುಮಾರು ಎರಡು ವರ್ಷಗಳಿಂದ ಬಿಡುಗಡೆಯಾಗದೆ ಕಾದು ಕುಳಿತ ಸಿನಿಮಾಗಳು ಈಗ ಮತ್ತೆ ತೆರೆಗೆ ಬರುವ ಯೋಚನೆಮಾಡುತ್ತಿರುವುದರಿಂದ, ಪ್ರತಿವಾರ ಕನಿಷ್ಟ ಐದಾರು ಸಿನಿಮಾಗಳು ತಮ್ಮ ಬಿಡುಗಡೆಯ ದಿನಾಂಕವನ್ನು ಘೋಷಿಸಿಕೊಳ್ಳುತ್ತಿವೆ. ಸದ್ಯ ಫೆಬ್ರವರಿ ತಿಂಗಳಿನಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಮತ್ತುಬಿಡುಗಡೆ ಘೋಷಿಸಿಕೊಂಡಿರುವ ಸಿನಿಮಾಗಳ ಸಂಖ್ಯೆಯೇ ಸುಮಾರು 25ರ ಗಡಿ ದಾಟುತ್ತದೆ.

ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೀಗೆ ಮುಂದುವರೆದರೆ, ಮಾರ್ಚ್‌ -ಏಪ್ರಿಲ್‌ ವೇಳೆಗೆ ಸ್ಯಾಂಡಲ್‌ವುಡ್‌ನ‌ಲ್ಲಿ ಮತ್ತೂಮ್ಮೆ ಸಿನಿಮಾಗಳ “ಅತಿವೃಷ್ಟಿ’ಆತಂಕ ಎದುರಾದರೂ ಅಚ್ಚರಿಯಿಲ್ಲ.ಇಲ್ಲಿಯವರೆಗೆ ಥಿಯೇಟರ್‌ಗಳಲ್ಲಿ ಪೂರ್ಣ ಪ್ರವೇಶಾತಿ ಅವಕಾಶವಿಲ್ಲದೆ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದವರು, ಮುಂದಿನ ದಿನಗಳಲ್ಲಿ ಥಿಯೇಟರ್‌ಗಳಲಭ್ಯತೆ ಇಲ್ಲದೆ ಬಿಡುಗಡೆಗೆ ಹಿಂದೇಟು ಹಾಕಬಹುದು. ಒಟ್ಟಾರೆ ಎಲ್ಲವೂ ಸರಿಹೋಯ್ತು ಅಂದುಕೊಳ್ಳುತ್ತಿರುವಾಗಲೇ ಗಾಂಧಿನಗರದಲ್ಲಿ ಮತ್ತೆ ಸಿನಿ ಟ್ರಾಫಿಕ್ ಆತಂಕ ಸಣ್ಣಗೆ ಮನೆ ಮಾಡುತ್ತಿರುವುದಂತೂ ಸುಳ್ಳಲ್ಲ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.