Vinod Prabhakar: ‘ಮಾದೇವ’ನ ಎದೆಯಲ್ಲಿ ತಂಗಾಳಿ!
Team Udayavani, Jun 7, 2024, 3:28 PM IST
“ಮಾದೇವ’- ಇದು ವಿನೋದ್ ಪ್ರಭಾಕರ್ ನಾಯಕರಾಗಿರುವ ಸಿನಿಮಾ. ಕೆಲವು ತಿಂಗಳ ಹಿಂದಷ್ಟೇ ಈ ಸಿನಿಮಾದ ಮಾಸ್ ಟೀಸರ್ ಬಿಡುಗಡೆಯಾಗಿತ್ತು. ಈಗ ಚಿತ್ರದ ಮೊದಲ ಹಾಡನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಈ ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶಿಸಿದ್ದಾರೆ.
ನಟ ವಿನೋದ್ ಪ್ರಭಾರ್ಕ ಮಾತನಾಡಿ, “ನನ್ನ ಕೆರಿಯರ್ನ ಬೆಸ್ಟ್ ಸಿನಿಮಾ ಇದು. ಚಿತ್ರದಲ್ಲಿ ನನ್ನದು ಡಿ-ಗ್ಲಾಮರ್ ಪಾತ್ರ. ಒಬ್ಬ ನಟನಾಗಿ ಗುರುತಿಸಿಕೊಳ್ಳಲು ಬಹಳಷ್ಟಿದೆ. ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಈ ಸಿನಿಮಾ ಖಂಡಿತ ಹಿಟ್ ಆಗುತ್ತದೆ. ಕೊನೆಯ 40 ನಿಮಿಷ ಪ್ರತಿಯೊಬ್ಬರಿಗೂ ಮಾದೇವನಾಗಿ ಸಿನಿಮಾ ನೋಡುತ್ತಾರೆ. ನಾನೇ ಈ ರೀತಿ ಸಿನಿಮಾವನ್ನು ಮತ್ತೂಮ್ಮೆ ಮಾಡಲು ಆಗುವುದಿಲ್ಲ. ಈ ಕಥೆ ಬಹಳಷ್ಟು ಜನರನ್ನು ಒಳಗಡೆ ಕರೆದುಕೊಂಡು ಬಂದಿದೆ. ಈ ಚಿತ್ರಕ್ಕಾಗಿ ಬಹಳಷ್ಟು ಹೋಮ್ ವರ್ಕ್ ಮಾಡಿದ್ದೇನೆ. ಆ್ಯಂಗ್ರಿ ಯಂಗ್ಮೆನ್ ಆಗಿ ನಟಿಸಿದ್ದೇನೆ’ ಎಂದರು
ಸೋನಾಲ್ ಮೊಂತೆರೋ ಈ ಚಿತ್ರದ ನಾಯಕಿ. ಈ ಚಿತ್ರದ ಮೇಲೆ ಸೋನಾಲ್ ಕೂಡಾ ನಿರೀಕ್ಷೆ ಇಟ್ಟಿದ್ದಾರೆ. “ಮಾದೇವ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾನು ಕಲಾವಿದೆಯಾಗಿ ಅಲ್ಲ ಆಡಿಯನ್ಸ್ ಆಗಿ ಸಿನಿಮಾ ನೋಡಲು ಕಾಯುತ್ತಿದ್ದೇನೆ. ನಾನು ಮಾಡಿರುವ ಸಿನಿಮಾಗಳಲ್ಲಿ ಇದು ನನ್ನ ಹೃದಯಕ್ಕೆ ಹತ್ತಿರವಾಗಿದೆ. ನಾನು ಈ ರೀತಿಯ ಪಾತ್ರದಲ್ಲಿ ನಟಿಸಿಲ್ಲ. ಇದೇ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ನಟಿಸಿದ್ದೇನೆ. ನನ್ನ ಹಾಗೂ ವಿನೋದ್ ಅವರ ಕೆಮಿಸ್ಟ್ರಿ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಬ್ಬರು ಈ ಸಿನಿಮಾವನ್ನು ಎಂಜಾಯ್ ಮಾಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು ಸೋನಾಲ್.
ಬಿಡುಗಡೆಯಾಗಿರುವ “ಎದೆಯಲ್ಲಿ ತಂಗಾಳಿ..’ ಎಂಬ ಪ್ರೇಮಗೀತೆಗೆ ಪ್ರಸನ್ನ ಕುಮಾರ್ ಎಂ ಸಾಹಿತ್ಯ ಬರೆದಿದ್ದು, ಅನನ್ಯ ಭಟ್ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಪ್ರದ್ಯೋತ್ತನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಹಾಡಿನಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೋನಲ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.
ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಈ ಸಿನಿಮಾದ ಕಥೆ 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯುತ್ತದೆ. ವಿಭಿನ್ನವಾದ ಲುಕ್ನಲ್ಲಿ ವಿನೋದ್ ಪ್ರಭಾಕರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಗರಕಿಟ್ಟಿ ಖಳನಾಯಕನಾಗಿ ನಟಿಸುತ್ತಿರುವುದು ವಿಶೇಷ. ನಟಿ ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಾಲಕೃಷ್ಣ ತೋಟ ಮಾದೇವ’ ಸಿನಿಮಾಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇಶವ ದೇವಸಂದ್ರ ಈ ಚಿತ್ರದ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.