ವಿಭಿನ್ನ ಮನಸ್ಥಿತಿಯ ಸುತ್ತ ವಿರಾಟ ಪರ್ವ


Team Udayavani, Aug 6, 2018, 11:22 AM IST

virat-abhinaya.jpg

“ಮುದ್ದು ಮನಸೇ’ ಎಂಬ ಸಿನಿಮಾ ಬಂದಿರೋದು ನಿಮಗೆ ಗೊತ್ತಿರಬಹುದು. ಅರುಗೌಡ ನಾಯಕರಾಗಿದ್ದ ಈ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆ ಚಿತ್ರವನ್ನು ನಿರ್ದೇಶಿಸಿರೋದು ಅನಂತ್‌ ಶೈನ್‌. “ಮುದ್ದು ಮನಸೇ’ ನಂತರ ಅನಂತ್‌ ಶೈನ್‌ ಏನು ಮಾಡುತ್ತಿದ್ದಾರೆ, ಯಾವ ಸಿನಿಮಾ ಆರಂಭಿಸಿದ್ದಾರೆಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಅದು “ವಿರಾಟ ಪರ್ವ’. ಹೌದು, ಅನಂತ್‌ ಶೈನ್‌ “ವಿರಾಟ ಪರ್ವ’ ಎಂಬ ಸಿನಿಮಾವನ್ನು ಸದ್ದಿಲ್ಲದೇ ಆರಂಭಿಸಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಕೂಡಾ ಮಾಡಿಮುಗಿಸಿದ್ದಾರೆ.

ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಈ ಬಾರಿ ಹೊಸ ಜಾನರ್‌ನತ್ತ ವಾಲಿರುವ ಅನಂತ್‌ಶೈನ್‌ ಇಂದಿನ ಟ್ರೆಂಡ್‌ಗೆ ಒಗ್ಗುವಂತಹ ಕಥೆ ಮಾಡಿಕೊಂಡಿದ್ದಾರೆ. ವಿಭಿನ್ನ ಮನಸ್ಥಿತಿಯ ಮೂವರು ಹುಡುಗರ ಸುತ್ತ ಇಡೀ ಸಿನಿಮಾ ಸುತ್ತಲಿದ್ದು, ಹೊಸ ಬಗೆಯ ಕಥೆಯಾಗಿ ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸ ಅನಂತ್‌ ಶೈನ್‌ ಅವರಿಗಿದೆ. ಕಥೆಗೆ ತಕ್ಕಂತೆ ವಿಭಿನ್ನ ಲೊಕೇಶನ್‌ಗಳಲ್ಲೂ ಚಿತ್ರೀಕರಣ ಮಾಡಿರುವ ಅನಂತ್‌, ಸದ್ಯ ಉಳಿದ ಭಾಗದ ಚಿತ್ರೀಕರಣಕ್ಕೆ ಅಣಿಯಾಗುತ್ತಿದ್ದಾರೆ. 

ಚಿತ್ರದಲ್ಲಿ ಅಭಿನಯ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಅಭಿನಯ ಕನ್ನಡದಲ್ಲಿ “ಹುಡುಗರು’, “ಕಿಚ್ಚು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾತು ಬಾರದ ಹಾಗೂ ಶ್ರವಣ ದೋಷವಿರುವ ಅಭಿನಯ “ಕಿಚ್ಚು’ ಸಿನಿಮಾದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನೇ ಮಾಡಿದ್ದರು. ಆದರೆ, “ವಿರಾಟ ಪರ್ವ’ ಸಿನಿಮಾದಲ್ಲಿ ತಮ್ಮ ನಿಜ ಜೀವನಕ್ಕೆ ವಿರುದ್ಧವಾದ, ಸವಾಲಿನ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾದುದ್ದಕ್ಕೂ ಪಟಪಟನೇ ಮಾತನಾಡುವ ಪಾತ್ರ ಸಿಕ್ಕಿದೆ.

ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಲಿಪ್‌ ಸಿಂಕ್‌ ಮಾಡುವ ಸಾಮರ್ಥ್ಯ ಅಭಿನಯ ಅವರಿಗಿರುವುದರಿಂದ ಅವರಿಂದಲೇ ಈ ಪಾತ್ರವನ್ನು ಮಾಡಿಸುತ್ತಿದ್ದಾರೆ ಅನಂತ್‌ ಶೈನ್‌.  ಚಿತ್ರದ ಬಗ್ಗೆ ಮಾತನಾಡುವ ಅನಂತ್‌, “ಚಿತ್ರ ತುಂಬಾ ನೈಜವಾಗಿ ಮೂಡಿಬರುತ್ತಿದೆ. ಕಥೆಗೆ ಪೂರಕವಾದ ಲೊಕೇಶನ್‌ನಲ್ಲೇ ಚಿತ್ರೀಕರಿಸುತ್ತಿದ್ದು, ಹೊಸ ಅಂಶದೊಂದಿಗೆ ಚಿತ್ರ ಸಾಗುತ್ತದೆ’ ಎನ್ನುವುದು ಅನಂತ್‌ ಮಾತು. ಉಳಿದಂತೆ ಈ ಚಿತ್ರದಲ್ಲಿ ಯಶವಂತ್‌ ಶೆಟ್ಟಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರವನ್ನು ಎಸ್‌.ಆರ್‌.ಮೀಡಿಯಾ ಪ್ರೊಡಕ್ಷನ್ಸ್‌ನಡಿ ಸುನೀಲ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.