![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 4, 2021, 2:33 PM IST
ಲಾಕ್ಡೌನ್ ವೇಳೆ ಊಟ ಇಲ್ಲದವರಿಗೆ, ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ನಟ, ರಾಜಕಾರಣಿ ಉಪೇಂದ್ರ ಅವರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಉಪೇಂದ್ರ ಅವರ ಕಾರ್ಯಕ್ಕೆ ಮೆಚ್ಚಿ ಅನೇಕ ಮಂದಿ ನಟನಿಗೆ ತಾವೂ ಕೂಡ ಕೈ ಜೋಡಿಸಿದ್ದಾರೆ. ಆದ್ರೆ ಇದೀಗ ಉಪೇಂದ್ರ ಟ್ವೀಟ್ ಒಂದನ್ನು ಮಾಡಿದ್ದು, ಇನ್ಮುಂದೆ ಯಾವುದೇ ದಾನವನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.
ಉಪೇಂದ್ರ ಅವರು ರೈತರಿಂದ ಬೆಳೆಗಳನ್ನು ಖರೀದಿ ಮಾಡಿ ಅವುಗಳನ್ನು ಅಗತ್ಯ ಇರುವವರಿಗೆ ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚಿದ ಅದೆಷ್ಟೋ ಜನ ರೈತರು, ಜನ ಸಾಮಾನ್ಯರು, ಉಚಿತವಾಗಿಯೇ ಹಣ್ಣು-ತರಕಾರಿ, ದಿನಸಿ ಸಾಮಗ್ರಿಗಳನ್ನು ನೀಡಿ ತಾವೂ ಕೂಡ ಉಪೇಂದ್ರ ಅವರಿಗೆ ಕೈಜೋಡಿಸಿದ್ದರು.
ಸದ್ಯ ಉಪೇಂದ್ರ ಬೇರೆಯವರು ನೀಡುವ ದಾನವನ್ನು ತಾವು ಸ್ವೀಕರಿಸುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ಇಲ್ಲಿಯವರೆಗೂ ನಾವು ಯಾರನ್ನೂ ಏನೂ ಕೇಳದಿದ್ದರೂ ತುಂಬಾ ಹೃದಯವಂತರು ನಮ್ಮ ಮೂಲಕ ವಿತರಣೆಯಾಗಲೆಂದು ದಿನಸಿ ಹಣ್ಣು, ತರಕಾರಿ ಹೀಗೆ ಮುಂತಾದವುಗಳನ್ನು ಕೊಟ್ಟಿದ್ದಾರೆ. ನಮ್ಮ ಉಪ್ಪಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ಗೆ ಧನ ಸಹಾಯವನ್ನೂ ಮಾಡಿದ್ದಾರೆ. ಅವುಗಳೆಲ್ಲವನ್ನೂ ಸೂಕ್ತವಾಗಿ ಬೇರೆ ಬೇರೆ ಕಡೆ ಸಂಕಷ್ಟದಲ್ಲಿರುವವರಿಗೆ ವಿತರಿಸಲಾಗಿದೆ, ಇನ್ನೂ ವಿತರಿಸಲಾಗುತ್ತದೆ ಸಹೃದಯತೆ ಮೆರೆದಂತಹ ತಮ್ಮೆಲ್ಲರಿಗೂ ಅನಂತಾನಂತ ಧನ್ಯವಾದಗಳು ಎಂದಿದ್ದಾರೆ.
ಧನ್ಯವಾದಗಳು ??? pic.twitter.com/YvRHbxZHPE
— Upendra (@nimmaupendra) June 3, 2021
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.