“ಭಕ್ತ ಪ್ರಹ್ಲಾದ’ನಿಗೂ “ಅವನೇ ಶ್ರೀಮನ್ನಾರಾಯಣ’ನಿಗೂ ಏನಿದು ಲಿಂಕ್‌?

ಟ್ವಿಟ್ಟರ್‌ನಲ್ಲಿ ಕುತೂಹಲಕ್ಕೆ ಕಾರಣವಾಯ್ತು ಪುಷ್ಕರ್‌ ಶೇರ್‌ ಮಾಡಿದ ಕ್ಲಿಪ್ಪಿಂಗ್‌

Team Udayavani, Oct 10, 2019, 3:03 AM IST

avane-srimannarayana

ರಕ್ಷಿತ್‌ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ “ಅವನೇ ಶ್ರೀಮನ್ನಾರಾಯಣ’ ತೆರೆಗೆ ಬರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸದ್ಯ ಭರ್ಜರಿಯಾಗಿಯೇ ಚಿತ್ರದ ಪ್ರಮೋಶನಲ್‌ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಚಿತ್ರದ ಬಗ್ಗೆ ಒಂದರ ಹಿಂದೊಂದರಂತೆ ಹೊಸ ಹೊಸ ಸುದ್ದಿಗಳನ್ನು ಹೊರಬಿಡುತ್ತಿದೆ. ಇದೀಗ ಅಂಥದ್ದೇ ಒಂದು ಸುದ್ದಿ “ಅವನೇ ಶ್ರೀಮನ್ನಾರಾಯಣ’ ಚಿತ್ರಕ್ಕೂ ಡಾ. ರಾಜಕುಮಾರ್‌ ಅಭಿನಯದ “ಭಕ್ತ ಪ್ರಹ್ಲಾದ’ ಚಿತ್ರಕ್ಕೂ ಏನಾದರೂ ಸಂಬಂಧವಿದೆಯಾ ಅನ್ನೋ ಪ್ರಶ್ನೆಯನ್ನು ಮೂಡುವಂತೆ ಮಾಡಿದೆ.

ಹೌದು, ಇತ್ತೀಚೆಗೆ “ಅವನೇ ಶ್ರೀಮನ್ನಾರಾಯಣ’ ಚಿತ್ರದ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನ್‌ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿರುವ ಡಾ.ರಾಜಕುಮಾರ್‌ ಅಭಿನಯದ “ಭಕ್ತ ಪ್ರಹ್ಲಾದ’ ಚಿತ್ರದ ಕ್ಲಿಪಿಂಗ್‌ ಇದಕ್ಕೆಲ್ಲ ಕಾರಣವಾಗಿದೆ. ಈ ಕ್ಲಿಪ್ಪಿಂಗ್‌ನಲ್ಲಿ ಡಾ. ರಾಜಕುಮಾರ್‌ ಮತ್ತು ಬಾಲನಟ ಪುನೀತ್‌ ರಾಜಕುಮಾರ್‌ ಒಟ್ಟಿಗೆ ಕಾಣಿಸಿಕೊಂಡಿರುವ ದೃಶ್ಯವೊಂದರಲ್ಲಿ, ರಾಜಕುಮಾರ್‌ ಅವರು “ಎಲ್ಲಿ ನಿನ್ನ ನಾರಾಯಣ?’ ಎನ್ನುವಾಗ ಭಕ್ತ ಪ್ರಹ್ಲಾದ ಹೇಳುವ ಡೈಲಾಗ್‌ನಲ್ಲಿ, “ಅವನೇ ಶ್ರೀಮನ್ನಾರಾಯಣ’ ಎನ್ನುವ ಮಾತು ಬರುತ್ತದೆ.

ಇದು “ಭಕ್ತ ಪ್ರಹ್ಲಾದ’ ಚಿತ್ರಕ್ಕೂ “ಅವನೇ ಶ್ರೀಮನ್ನಾರಾಯಣ’ ಚಿತ್ರಕ್ಕೂ ಏನಾದ್ರೂ ಲಿಂಕ್‌ ಇದೆಯಾ ಎಂಬ ಕುತೂಹಲವನ್ನು ಹುಟ್ಟಿಸಿದೆ. ಇನ್ನು “ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲಿ ರಕ್ಷಿತ್‌ ನಟಿಸಿರುವ ಪಾತ್ರದ ಹೆಸರೂ ನಾರಾಯಣ ಎನ್ನಲಾಗುತ್ತಿದ್ದು, ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ರಕ್ಷಿತ್‌ ಶೆಟ್ಟಿ ಚಿತ್ರಕ್ಕೂ “ಭಕ್ತ ಪ್ರಹ್ಲಾದ’ ಚಿತ್ರಕ್ಕೂ ಏನು ಸಂಬಂಧ? ಇದು ಚಿತ್ರದಲ್ಲಿ ಹೇಗೆ ವರ್ಕೌಟ್‌ ಆಗುತ್ತದೆ? ಎನ್ನುವ ಪ್ರಶ್ನೆಯನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಸಿನಿಪ್ರಿಯರು ಕೇಳುತ್ತಿದ್ದಾರೆ. ಆದರೆ ಇದರ ಬಗ್ಗೆ ಎಲ್ಲೂ ಬಾಯಿಬಿಡದ ಚಿತ್ರತಂಡದ ನಡೆ, ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.

ಇನ್ನು ಪಂಚ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ “ಅವನೇ ಶ್ರೀಮನ್ನಾರಾಯಣ’ ಇದೇ 70-80ರ ದಶಕದ ಕಥೆಯನ್ನು ಹೊಂದಿದ್ದು, ಆಕ್ಷನ್‌ ಕಂ ಸಸೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ತೆರೆಗೆ ಬರುತ್ತಿದೆ. ಹಾಲಿವುಡ್‌ನ‌ ಜನಪ್ರಿಯ ಶೆರ್ಲಾಕ್‌ ಹೋಮ್ಸ್‌ ಪತ್ತೇಧಾರಿ ಶೈಲಿ ಚಿತ್ರದ ಟೀಸರ್‌ಗಳಲ್ಲಿ ಕಾಣುತ್ತಿದ್ದು, ಇದೇ ತಿಂಗಳಾಂತ್ಯಕ್ಕೆ “ಅವನೇ ಶ್ರೀಮನ್ನಾರಾಯಣ’ನ ಟ್ರೇಲರ್‌ ಕೂಡ ರಿಲೀಸ್‌ ಆಗುವ ಸಾಧ್ಯತೆ ಇದೆ.

ಶ್ರೀಮನ್ನಾರಾಯಣನ ದರ್ಶನ ಪಡೆದ ತಂತ್ರಜ್ಞರು: ಇನ್ನು ಇತ್ತೀಚೆಗೆ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಕೆಲ ಶೋ ರೀಲ್‌ಗ‌ಳನ್ನು ಚಿತ್ರದ ತಂತ್ರಜ್ಞರಿಗೆ ತೋರಿಸಲಾಗಿದೆ. ಇದನ್ನು ನೋಡಿದ ತಂತ್ರಜ್ಞರು ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿ, ಮೆಚ್ಚುಗೆಯ ಮಾತುಗಳನ್ನಾಡಿದ್ದಾರಂತೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನ್‌, “ನಮ್ಮ ತಂತ್ರಜ್ಞರೆಲ್ಲರೂ ಸುಮಾರು ಎರಡು ವರ್ಷ ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಅವರಿಗೆಲ್ಲಾ ವಿಶೇಷವಾಗಿ ಕೆಲ ಶೋ ರೀಲ್‌ ತೋರಿಸಿದೆವು. ಅದನ್ನು ನೋಡಿ ಅವರೆಲ್ಲಾ ಬಹಳ ಥ್ರಿಲ್‌ ಆದರು. ಸಿನಿಮಾ ರಿಲೀಸ್‌ಗಾಗಿ ಎಲ್ಲರೂ ಎಕ್ಸೈಟ್‌ಮೆಂಟ್‌ನಿಂದ ಕಾದಿದ್ದಾರೆ’ ಎನ್ನುತ್ತಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.