Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ
Team Udayavani, Sep 16, 2024, 3:34 PM IST
ಬೆಂಗಳೂರು: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಕನ್ನಡ ನಾಡು, ನುಡಿ ಭಾಷೆಯ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ. ಎಂದಿಗೂ ಕನ್ನಡಕ್ಕೆ ಅವಮಾನವಾಗುವ ರೀತಿ ಘಟನೆಗಳು ನಡೆದರೆ ಅಲ್ಲಿ ಕಿಚ್ಚ ತನ್ನ ಧ್ವನಿಯನ್ನು ಎತ್ತುತ್ತಾರೆ.
ಇಂಥದ್ದೇ ಒಂದು ಸನ್ನಿವೇಶ ಸೈಮಾ ಅವಾರ್ಡ್ಸ್ (SIIMA) ಸಮಾರಂಭದಲ್ಲಿ ನಡೆದಿದೆ. ದುಬೈನಲ್ಲಿ ಎರಡು ದಿನಗಳ ದಕ್ಷಿಣ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಖ್ಯಾತ ಕಲಾವಿದರುಗಳು ಭಾಗಿಯಾಗಿದ್ದಾರೆ. ಕನ್ನಡದ ಕಿಚ್ಚ ಸುದೀಪ್ ಕೂಡ ಸೈಮಾದಲ್ಲಿ ಭಾಗಿಯಾಗಿದ್ದಾರೆ.
PRIDE OF KANNADA CINEMA ♥️
It’s not kannad ,, it’s KANNADA 💥💥
Boss on Fire mode @#SIIMA2024 ♥️#KicchaBOSS #MaxTheMovie#BRBFirstBlood pic.twitter.com/gWTUMik4s9
— K R R I I S S H H ™ 𝕏 (@krriisshhtveezz) September 15, 2024
ಈ ವೇಳೆ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬ ʼಕನ್ನಡʼ ಎನ್ನುವ ಪದವನ್ನು ʼಕನ್ನಡ್ʼ ಎಂದು ತಪ್ಪಾಗಿ ಉಚ್ಚರಿಸಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಅವರು ಕೊಟ್ಟ ಪ್ರತಿಕ್ರಿಯೆ ವೈರಲ್ ಆಗಿದೆ.
ಮುಂಬೈ ಜನರುʼ ಕನ್ನಡ್ʼ ಎಂದು ಹೇಳಿದಾಗ ನನಗೆ ಅರ್ಥವಾಗುತ್ತದೆ. ಆದರೆ ನೀವು ಹೈದರಾಬಾದ್ ಮೂಲದವರಾಗಿ ʼಕನ್ನಡ್ʼ ಹೇಳುವುದು ನನಗೆ ಸರಿ ಕಾಣಲ್ಲ ಎಂದು ಕಿಚ್ಚ ಹೇಳಿದ್ದಾರೆ. ತಕ್ಷಣ ನಿರೂಪಕ ಕ್ಷಮಿಸಿ ʼಕನ್ನಡʼ ಎಂದು ಹೇಳಿದ್ದಾರೆ. ಇದಕ್ಕೆ ಕಿಚ್ಚ ಯೆಸ್ ಕನ್ನಡ ಥ್ಯಾಂಕ್ಯೂ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕನ್ನಡ ಭಾಷಾ ವಿಚಾರವಾಗಿ ಈ ಹಿಂದೆ ಅಜಯ್ ದೇವಗನ್ ಅವರೊಂದಿಗೂ ಕಿಚ್ಚನ ಟ್ವೀಟ್ ವಾರ್ ಆಗಿತ್ತು. “ಹಿಂದಿ ರಾಷ್ಟ್ರೀಯ ಭಾಷೆಯಲ್ಲ” ಎಂದು ಕಿಚ್ಚ ಟ್ವೀಟ್ ಮಾಡಿದ್ದರು. ಇದಕ್ಕೆ ಅಜಯ್ ದೇವಗನ್ “ನಿಮ್ಮ ಪ್ರಕಾರ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಎಂದಾದರೆ ನಿಮ್ಮ ಮಾತೃಭಾಷೆಯಲ್ಲಿ ತಯಾರಾದ ಚಿತ್ರಗಳನ್ನು ಹಿಂದಿಗೆ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿರುತ್ತದೆ ಮತ್ತು ಯಾವಾಗಲೂ ಇರುತ್ತದೆ.” ಎಂದು ಟ್ವೀಟ್ ಗೆ ರಿಪ್ಲೈ ಮಾಡಿದ್ದರು.
ಸದ್ಯ ಕಿಚ್ಚ ಸುದೀಪ್ ಶೀಘ್ರದಲ್ಲೇ ಬಿಗ್ಬಾಸ್ ಕನ್ನಡ -11ನ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ವಿಚಾರಕ್ಕೆ ಬಂದರೆ ʼಮ್ಯಾಕ್ಸ್ʼ ಬಳಿಕ ʼಬಿಲ್ಲ ರಂಗ ಬಾಷಾʼ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.