Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ
Team Udayavani, Sep 23, 2024, 10:48 AM IST
ರಾಧಿಕಾ ಕುಮಾರಸ್ವಾಮಿ (Radhika Kumaraswamy) ನಟನೆಯ ಭೈರಾದೇವಿ ಚಿತ್ರ (Bhairadevi Movie) ಅಕ್ಟೋಬರ್ 3ರಂದು ತೆರೆಕಾಣುತ್ತಿದೆ. ಇದು ಅವರ ಡ್ರೀಮ್ ಪ್ರಾಜೆಕ್ಟ್ ಕೂಡಾ. ಈ ಚಿತ್ರದ ಮೂಲಕ ರಾಧಿಕಾ ಒಂದು ನಿರ್ಧಾರಕ್ಕೆ ಬಂದಿರೆ. ಅದು ಮುಂದಿನ ನಟನೆಯ ಕುರಿತಾಗಿ. ಈ ಚಿತ್ರ ಜನರಿಗೆ ಇಷ್ಟವಾಗಿ ಕೈ ಹಿಡಿದರೆ ನಟನೆ ಮುಂದುವರೆಸಲು ಹಾಗೂ ಇಷ್ಟವಾಗದಿದ್ದರೆ ನಟನೆ ನಿಲ್ಲಿಸಲು.
ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಲ್ಲಿ ಈ ಕುರಿತು ರಾಧಿಕಾ ಮಾತನಾಡಿ, “ನಿರ್ದೇಶಕ ಶ್ರೀಜೈ ಅವರಿಗೆ ಮೊದಲೇ ಹೇಳಿದ್ದೆ, ಭೈರಾದೇವಿ ಸಿನಿಮಾ ಗೆದ್ದರೆ, ಪ್ರೇಕ್ಷಕರಿಗೆ ಇಷ್ಟ ಆದರೆ ಮತ್ತೆ ಸಿನಿಮಾ ಮಾಡುತ್ತೇನೆ. ಇಲ್ಲವಾದರೆ ಸಿನಿಮಾದಿಂದ ದೂರ ಇರುತ್ತೇನೆ. ಜೊತೆಗೆ ನಾನು ನಟಿಸಿರುವ ಕೊನೆ ಸಿನಿಮಾ ಇದಾಗಿರುತ್ತದೆ. ನನ್ನ ಮೇಲೆ ನಂಬಿಕೆ ಇಟ್ಟು, ಪ್ರೋತ್ಸಾಹ ಕೊಟ್ಟು, ನಿರ್ದೇಶಕರು ಈ ಸಿನಿಮಾ ಮಾಡಿಸಿದ್ದಾರೆ. ಇದು ದೊಡ್ಡ ಯಶಸ್ಸಾಗುತ್ತದೆ ಎಂಬ ನಂಬಿಕೆ ನನಗಿದೆ. ಚಿತ್ರದಲ್ಲಿ ರಮೇಶ್ ಅರವಿಂದ್ ಅವರು ಅದ್ಭುತ ಪಾತ್ರ ಮಾಡಿದ್ದಾರೆ. ಚಿತ್ರೀಕರಣದ ವೇಳೆ ಆ ಗೆಟಪ್ ಹಾಕಿದ ತಕ್ಷಣ ನನಗೆ ಬಹಳ ಸುಸ್ತಾಗುತ್ತಿತ್ತು. ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದು ತಮ್ಮ ಅನುಭವ ಹಂಚಿಕೊಂಡರು.
ಈಗಾಗಲೇ ಭೈರಾದೇವಿ ಚಿತ್ರದ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿವೆ. ರಮೇಶ್ ಅರವಿಂದ, ರವಿಶಂಕರ್, ಅನುಪ್ರಭಾಕರ್, ರಂಗಾಯಣ ರಘು ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Priya Shatamarshan: ಇನ್ಸ್ ಪೆಕ್ಟರ್ ಗಿರಿಜಾ ರಿಪೋರ್ಟಿಂಗ್ ಸಾರ್..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada11: ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.