Aroha Productions; ಸಿನಿಮಾಕ್ಕೆ ಕಥೆ ಬರೆದು ಒಂದು ಲಕ್ಷ ಗೆಲ್ಲಿ!
Team Udayavani, Jun 8, 2024, 4:38 PM IST
ಸಿನಿಮಾಕ್ಕೆ ಕಥೆ ಬರೆಯಬೇಕು ಎಂದು ಆಸೆ, ಪ್ರಯತ್ನಪಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಈಗ ಇಲ್ಲೊಂದು ಚಿತ್ರತಂಡ ತನ್ನ ಹೊಸ ಸಿನಿಮಾಕ್ಕೆ ಕಥೆ ಬರೆಯಲು ಕಥೆಗಾರರಿಗೆ ಆಹ್ವಾನ ನೀಡಿದೆ. ಈ ಮೂಲಕ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹೊರಟಿದೆ.
ಇತ್ತೀಚೆಗಷ್ಟೇ ಕಿಶೋರ್ ಮೇಗಳಮನೆ ನಿರ್ದೇಶನದ ಹಾಗೂ ಅದಿತ್ಯ ಅಭಿನಯದ ಕಾಂಗರೂ ಚಿತ್ರವನ್ನು ನಿರ್ಮಿಸಿದ್ದ ಆರೋಹ ಪ್ರೊಡಕ್ಷನ್ಸ್ ಸಂಸ್ಥೆ ತನ್ನ ಎರಡನೇ ನಿರ್ಮಾಣದ ಚಿತ್ರಕ್ಕೆ ಮುಂದಾಗಿದೆ. ಈ ಚಿತ್ರಕ್ಕೆ ಕಥೆ ಬರೆಯಲು ಸಂಸ್ಥೆ ಹೊಸ ಕಥೆಗಾರರಿಗೆ ಆಹ್ವಾನ ನೀಡಿದೆ.
ಶಾಲಾ ಕಾಲೇಜು ದಿನದಲ್ಲಿ ನೀವು ಮಾಡಿದ ಮೋಜು ಮಸ್ತಿ ಬಗ್ಗೆ ಕಥೆ ಬರೆಯಿರಿ. ಹೌದು, ನಿಮ್ಮ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಿಮ್ಮ ಸ್ನೇಹಿತರ ಜೊತೆ ನೀವು ಸಂಭ್ರಮಿಸಿದ ಖುಷಿಯ ಕ್ಷಣಗಳು ಮತ್ತು ನೀವು ಮಾಡಿರುವ ಕಿರಿಕ್ಗಳು ಹಾಗೂ ನಿಮ್ಮ ಹಳೆಯ ಲವ್ ಸ್ಟೋರಿಗಳ ಬಗ್ಗೆ ಮೂರು ಪುಟ ಮೀರದಂತೆ ಬರೆಯಲು ಹೇಳಿದೆ. ಆಯ್ಕೆಯಾದ ಬರಹಕ್ಕೆ ಒಂದು ಲಕ್ಷ ಬಹುಮಾನ ನಿಮ್ಮದಾಗಿಸಿಕೊಳ್ಳಿ.
ನಿಮ್ಮ ಬರವಣಿಗೆ ಸ್ವಾರಸ್ಯಕರವಾಗಿದ್ದರೆ ಪ್ರಥಮ ಆದ್ಯತೆ ನೀಡಲಿದೆ ಚಿತ್ರತಂಡ. ಚಿತ್ರತಂಡ ಹೇಳಿರುವಂತೆ ಪೂರ್ತಿ ಕಥೆ ಬದಲು ನೀವು ಅನುಭವಿಸಿರುವ ಕೆಲ ಸನ್ನಿವೇಶಗಳನ್ನು ವಿವರವಾಗಿ ಬರೆದು ಕಳುಹಿಸಿದರೆ ಸಾಕು ಎಂದಿದೆ. ಇದರ ಜೊತೆ ಚಿತ್ರತಂಡ ಮತ್ತೂಂದು ಅವಕಾಶವನ್ನು ಕೂಡಾ ನೀಡುತ್ತಿದೆ. ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಗಳಿಸುವವರನ್ನು ತಮ್ಮ ಸಿನೆಮಾದ ಚಿತ್ರಕಥೆ ವಿಭಾಗದಲ್ಲಿ ಅವರ ಹೆಸರನ್ನು ಬಳಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.