Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?


Team Udayavani, Oct 23, 2024, 4:14 PM IST

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ (Yash) ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೂಟಿಂಗ್‌ ಹಂತದಲ್ಲೇ ಸಿನಿಮಾ ಅನೇಕ ವಿಚಾರದಿಂದ ಸುದ್ದಿಯಾಗುತ್ತಿದೆ.

ಪಾತ್ರ ವರ್ಗದ ವಿಚಾರದಿಂದ ʼಟಾಕ್ಸಿಕ್‌ʼ ಗಮನ ಸೆಳೆಯುತ್ತಿದೆ. ನಯನತಾರ (Nayanthara) ಜೊತೆಗೆ ಅಕ್ಷಯ್‌ ಒಬೆರಾಯ್ (Akshay Oberoi), ತೆಲುಗು-ತಮಿಳು ನಟ ತಣಿಕೆಲ್ಲ ಭರಣಿ ಅವರು ಚಿತ್ರತಂಡದ ಜತೆ ಸೇರಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ (Kiara Advani) ಹುಮಾ ಖುರೇಷಿ (Human Qureshi) ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ನವಾಝುದ್ದೀನ್ ಸಿದ್ದಿಕಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೆ ಹಾಲಿವುಡ್‌ ಸ್ಟಾರ್ಸ್‌ ಗಳು ಸಿನಿಮಾದ ಭಾಗವಾಗಲಿದ್ದಾರೆ ಎನ್ನಲಾಗಿದೆ.

ಮಾಲಿವುಡ್‌ ಡೈರೆಕ್ಟರ್‌ ಗೀತು ಮೋಹನ್ ದಾಸ್ (Geethu Mohandas) ದೊಡ್ಡದಾಗಿಯೇ ʼಟಾಕ್ಸಿಕ್‌ʼ ಸಿನಿಮಾವನ್ನು ಆರಂಭಿಸಿದ್ದಾರೆ. ಬೆಂಗಳೂರು, ಮುಂಬೈನಲ್ಲಿ ಚಿತ್ರೀಕರಣದ ನಡೆದಿದೆ. ಸಿನಿಮಾ ಅನೌನ್ಸ್‌ ಆದಾಗಲೇ ರಿಲೀಸ್‌ ಡೇಟ್‌ (ಏ.10,2025) ರಿವೀಲ್‌ ಆಗಿತ್ತು. ಆದರೆ ʼಟಾಕ್ಸಿಕ್‌ʼ ದೇಶಾದ್ಯಂತದ ಹಲವಾರು ಖ್ಯಾತ ಕಲಾವಿದರನ್ನು ಒಟ್ಟುಗೂಡಿಸಲಿದೆ. ಇದಕ್ಕಾಗಿ ಚಿತ್ರತಂಡ ಸಾಕಷ್ಟು ತಯಾರಿಯನ್ನು ನಡೆಸಲಿದೆ. ಈ ಕಲಾವಿದರ ದಿನಾಂಕಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಈ ಕಾರಣದಿಂದ ಈಗಾಗಲೇ ನಿಗದಿಪಡಿಸಿರುವ ರಿಲೀಸ್‌ ಡೇಟ್‌ ಗಿಂತ ಹೆಚ್ಚಿನ ಸಮಯ ಇದಕ್ಕೆ ಬೇಕಾಗಬಹುದು ಎಂದು ವರದಿಯಾಗಿತ್ತು.

ಇದೀಗ ಈ ಬಗ್ಗೆ ಸ್ವತಃ ಯಶ್ ಅವರೇ ಸಂದರ್ಶನದಲ್ಲಿ ಅಧಿಕೃತವಾಗಿ ಹೇಳಿದ್ದಾರೆ.  ʼದಿ ಹಾಲಿವುಡ್‌ ರಿಪೋರ್ಟರ್‌ ಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

“ಟಾಕ್ಸಿಕ್‌ ದೊಡ್ಡ ಪ್ರಾಜೆಕ್ಟ್‌ ಆಗಿದ್ದು, ನಾವು ಸಿನಿಮಾ ಅಂದುಕೊಂಡ ದಿನಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಈ ಸಿನಿಮಾ ಒಂದು ಸಣ್ಣ ಎಳೆಯಾಗಿ ಪ್ರಾರಂಭವಾಯಿತು. ಆದರೆ ಹೋಗುತ್ತಿದ್ದಂತೆ ಸಿನಿಮಾದ ಕಥೆ ಭಿನ್ನವಾಗಿ ಬೆಳೆಯಿತು. ಖಂಡಿತವಾಗಿ ಇದು ಗೀತು ಮೋಹನ್‌ ದಾಸ್‌ ಅವರ ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿರಲಿದೆ” ಎಂದು ಯಶ್‌ ಹೇಳಿದ್ದಾರೆ.

ನಮ್ಮ ಡೈರೆಕ್ಟರ್‌ ಗೆ ಪ್ರೇಕ್ಷಕರ ನಾಡಿಮಿಡಿತ ಗೊತ್ತಿದೆ. ಜನರನ್ನು ಹೇಗೆ ರಂಜಿಸಬೇಕೆನ್ನುವುದನ್ನು ಅವರು ಅರಿತುಕೊಂಡಿದ್ದಾರೆ. ಮಾಸ್‌ ಮತ್ತು ಎಂಟರಟೈನಮೆಂಟ್‌  ಎರಡನ್ನೂ ಹೇಗೆ ಹೇಳಬೇಕೆಂದು ಗೀತು ಅವರಿಗೆ ಗೊತ್ತಿದೆ. ನಾನು ಜನರನ್ನು ರಂಜಿಸಲು ಇಷ್ಟಪಡುತ್ತೇನೆ. ನಮ್ಮ ಡೈರೆಕ್ಟರ್‌ ಅದನ್ನೇ ವಿಶೇಷವಾಗಿ ಸ್ಕ್ರೀನ್‌ ಮೇಲೆ ತರೋಕೆ ಪ್ಲ್ಯಾನ್‌ ಮಾಡಿದ್ದಾರೆ ಎಂದು ಯಶ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

1-a-yogi–bg

C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

14

Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ

13(1)

Udupi: ಆಸ್ಪತ್ರೆ ಕಟ್ಟಡ ಹೊಂಡದಿಂದ ಅಪಾಯ!

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.