![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 20, 2022, 10:13 AM IST
ಇತ್ತೀಚೆಗಷ್ಟೇ “ಗಾಳಿಪಟ-2′ ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ “ತ್ರಿಬಲ್ ರೈಡಿಂಗ್’ಗೆ ರೆಡಿಯಾಗುತ್ತಿದ್ದಾರೆ. ಹೌದು, ಗಣೇಶ್, ಅದಿತಿ ಪ್ರಭುದೇವಾ, ಮೇಘಾ ಶೆಟ್ಟಿ, ರಚನಾ ಇಂದರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ತ್ರಿಬಲ್ ರೈಡಿಂಗ್’ ಸಿನಿಮಾ, ಬಿಡುಗಡೆಗೆ ತಯಾರಾಗಿದೆ.
ಸದ್ಯ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ “ತ್ರಿಬಲ್ ರೈಡಿಂಗ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.
ಇನ್ನು ಬಿಡುಗಡೆಯಾಗಿರುವ “ತ್ರಿಬಲ್ ರೈಡಿಂಗ್’ ಸಿನಿಮಾದ “ಯಟ್ಟಾ ಯಟ್ಟಾ…’ ಎಂಬ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಧ್ವನಿಯಾಗಿದ್ದು, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ, ಚಂದನ್ ಶೆಟ್ಟಿ ಸಾಹಿತ್ಯದಲ್ಲಿ ಈ ಹಾಡು ಮೂಡಿಬಂದಿದೆ.
ಇದೇ ವೇಳೆ ಮಾತನಾಡಿದ ನಿರ್ದೇಶಕ ಮಹೇಶ್ ಗೌಡ, “ನಾನು ಮುಂಗಾರು ಮಳೆ ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ಅವರಿಗೊಂದು ಸಿನಿಮಾ ಮಾಡುವ ಆಸೆ ನನಗಿತ್ತು. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್’ ಸ್ವಮೇಕ್ ಚಿತ್ರ. ಆ್ಯಕ್ಷನ್, ಥ್ರಿಲ್ಲರ್, ಕಾಮಿಡಿ, ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಈ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಅದರಲ್ಲಿ ಒಂದು ಹಾಡು ಈಗ ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಶೀಘ್ರದಲ್ಲಿಯೇ ಉಳಿದ ಹಾಡುಗಳನ್ನೂ ಬಿಡುಗಡೆ ಮಾಡಲಿದ್ದೇವೆ’ ಎಂದರು.
ಇದನ್ನೂ ಓದಿ:ಟಿಕ್ ಟಾಕ್ ಮತ್ತು ಪಬ್ ಜಿ ಆ್ಯಪ್ ಗಳ ನಿಷೇಧಕ್ಕೆ ಮುಂದಾದ ತಾಲಿಬಾನ್; ಕಾರಣವೇನು ಗೊತ್ತಾ?
ಚಿತ್ರದ ಬಗ್ಗೆ ಮಾತನಾಡಿದ ನಟ ಗಣೇಶ್, “ನಿರ್ದೇಶಕ ಮಹೇಶ್ “ಮುಂಗಾರು ಮಳೆ’ ಸಿನಿಮಾದಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದರು. ಆಗಲೇ ನನಗೊಂದು ಕಥೆ ಮಾಡುತ್ತೀನಿ ಎಂದಿದ್ದರು.
14 ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದು ನನಗೊಂದು ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ಸಿನಿಮಾದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟ್, ಟರ್ನ್ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್’ ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನು ಇದರಲ್ಲಿ ನೋಡಬಹುದು. ಸಿನಿಮಾದಲ್ಲಿ ಮೂವರು ನಾಯಕಿಯರಿದ್ದು, ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ’ ಎಂದರು.
ನಾಯಕಿಯರಾದ ಮೇಘಾ ಶೆಟ್ಟಿ, ರಚನಾ ಇಂದರ್ “ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕ ರಾಮ್ ಗೋಪಾಲ್ ವೈ. ಎಂ, ಸಂಗೀತ ನಿರ್ದೇಶಕ ಸಾಯಿಕಾರ್ತಿಕ್, ಗಾಯಕ ಚಂದನ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಸದಸ್ಯರು ಸಿನಿಮಾದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.