Yograj Bhat: ಲೈಟ್ ಬಾಯ್ ಸಾವು- ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR ದಾಖಲು
Team Udayavani, Sep 6, 2024, 9:40 AM IST
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ (Yograj Bhat) ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.
ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ ಹಿನ್ನೆಲೆ ಕನ್ನಡ ಚಿತ್ರರಂಗದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ಉತ್ತರ ಹೊರವಲಯದ ವಿಆರ್ಎಲ್ ಅರೆನಾ ಬಳಿ ಸಂಭವಿಸಿದ ಘಟನೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಮೃತಪಟ್ಟಿದ್ದಾರೆ.
ಎರಡು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನದಲ್ಲಿ ಮುಂಗಾರು ಮಳೆ, ಗಾಳಿಪಟ ದಂತಹ ಹಿಟ್ ಸಿನಿಮಾಗಳನ್ನು ನೀಡಿದ್ದ ಯೋಗರಾಜ್ ಭಟ್ ಅವರನ್ನು ಮಾದನಾಯಕನಹಳ್ಳಿ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಆರೋಪಿ ಸಂಖ್ಯೆ 3 ಎಂದು ನಮೂದಿಸಲಾಗಿದೆ. ಮ್ಯಾನೇಜರ್ ಸುರೇಶ್ ಅವರನ್ನು ಆರೋಪಿ ಸಂಖ್ಯೆ 1 ಎಂದು ಹೆಸರು ದಾಖಲಾಗಿಸಲಾಗಿದೆ.
ಚಿತ್ರದ ಚಿತ್ರೀಕರಣದ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲೈಟ್ ಬಾಯ್, ಮೃತ ಶಿವರಾಜ್ ಅವರು ತನ್ನ ಸಹೋದರನೊಂದಿಗೆ ನಗರದಲ್ಲಿ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.