Bollywood: ಲೋಕೇಶ್ ಕನಕರಾಜ್ ಜತೆ ಆಮೀರ್ ಸಿನಿಮಾ?; ಕಂಬ್ಯಾಕ್ ಮಾಡ್ತಾರಾ ಖಾನ್?
Team Udayavani, Aug 19, 2024, 10:14 AM IST
ಚೆನ್ನೈ: ಕಾಲಿವುಡ್ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಬಾಲಿವುಡ್ ಸೂಪರ್ ಸ್ಟಾರ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ.
ದಕ್ಷಿಣ ಭಾರತದ ದೊಡ್ಡ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಮೈತ್ರಿ ಮೂವಿ ಮೇಕರ್ಸ್ ಲೋಕೇಶ್ ಕನಕರಾಜ್ ಅವರ ಸಿನಿಮಾದ ಬಗ್ಗೆ ಮಾತುಕತೆ ನಡೆಸಿದ್ದು, ಬಾಲಿವುಡ್ ನಟನ ಜತೆ ಸಿನಿಮಾ ಮಾಡುವ ಯೋಜನೆಗೆ ಕೈಜೋಡಿಸಲಿದೆ ಎನ್ನಲಾಗಿದೆ.
ಬಾಲಿವುಡ್ ನಲ್ಲಿ ಒಂದು ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದ ಸಲ್ಮಾನ್ ಖಾನ್(Salman Khan), ಶಾರುಖ್ ಖಾನ್ (Shah Rukh Khan) ಇತ್ತೀಚೆಗಿನ ವರ್ಷದಲ್ಲಿ ಕಂಬ್ಯಾಕ್ ಮಾಡಲು ಸೌತ್ ನಿರ್ದೇಶಕರ ಜತೆ ಕೈಜೋಡಿಸಿ ಸೈ ಎನ್ನಿಸಿಕೊಂಡಿದ್ದಾರೆ.
ಈ ಸಾಲಿನಲ್ಲಿ ಈಗ ಆಮೀರ್ ಖಾನ್ (Aamir Khan) ಅವರ ಹೆಸರು ಕೇಳಿ ಬರುತ್ತಿದೆ. ಆಮೀರ್ ಖಾನ್ ʼಲಾಲ್ ಸಿಂಗ್ ಚಡ್ಡಾʼ ಬಳಿಕ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅವರು ನಟನೆಯಿಂದ ನಿವೃತ್ತಿ ಪಡೆಯುತ್ತಾರೆ. ಸಿನಿಮಾಗಳ ನಿರ್ಮಾಣದತ್ತ ಮಾತ್ರ ಗಮನ ಹರಿಸುತ್ತಾರೆ ಎನ್ನುವ ಮಾತುಗಳ ನಡುವೆಯೇ ಅವರು ಸೌತ್ ನಿರ್ದೇಶಕ ಲೋಕೇಶ್ ಕನಕರಾಜ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.
ಮೈತ್ರಿ ಮೂವಿ ಮೇಕರ್ಸ್, ಲೋಕೇಶ್ ಕನಕರಾಜ್ ಹಾಗೂ ಆಮೀರ್ ನಡುವಿನ ಸಿನಿಮಾದ ಮೊದಲ ಹಂತದ ಮಾತುಕತೆ ನಡೆದಿದ್ದು, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವೆನ್ನಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರದಲ್ಲಿ ಸಿನಿಮಾ ಅನೌನ್ಸ್ ಆಗಲಿದೆ ಎನ್ನಲಾಗಿದೆ.
ಈ ಸಿನಿಮಾ ಲೋಕೇಶ್ ಕನಕರಾಜ್ ಯೂನಿವರ್ಸ್ ಗೆ ಕನೆಕ್ಟ್ ಆಗಲಿದೆ ಎನ್ನಲಾಗಿದೆ. ಲೋಕೇಶ್ ಕನಕರಾಜ್ ಯೂನಿವರ್ಸ್ ನಲ್ಲಿ ಕಮಲ್ ಹಾಸನ್, ವಿಜಯ್, ಸೂರ್ಯ, ಕಾರ್ತಿ, ವಿಜಯ್ ಸೇತುಪತಿ ಮತ್ತು ಫಾಹದ್ ಫಾಸಿಲ್ ಕಾಣಿಸಿಕೊಂಡಿದ್ದಾರೆ. ಮುಂದೆ ಕಾರ್ತಿ ಅವರ LCU ನಲ್ಲಿ ʼಕೈತಿ 2ʼ ಈ ಸಾಲಿನಲ್ಲಿ ಬರಲಿದೆ.
ಸದ್ಯ ಲೋಕೇಶ್ ರಜಿನಿಕಾಂತ್ ಅವರ ʼಕೂಲಿʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಆಮೀರ್ ಖಾನ್ ʼಸಿತಾರೆ ಜಮೀನ್ ಪರ್ʼ(Sitaare Zamin Par) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಆರ್ಎಸ್ ಪ್ರಸನ್ನ ನಿರ್ದೇಶನ ಮಾಡಲಿದ್ದಾರೆ. ಇದು ಸ್ಪ್ಯಾನಿಷ್ ಸ್ಪೋರ್ಟ್ಸ್ ಕಾಮಿಡಿ ʼಕ್ಯಾಂಪಿಯೋನ್ಸ್ʼನ (Campeones) ರಿಮೇಕ್ ಆಗಿದೆ. ಜೆನಿಲಿಯಾ ಡಿಸೋಜಾ ಹೀರೋಯಿನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.