Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Team Udayavani, Sep 21, 2024, 12:32 PM IST
ಮುಂಬೈ: ಬಾಲಿವುಡ್ ನಟ ಪರ್ವಿನ್ ದಾಬಸ್ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ನಟ ಗಂಭೀರ ಗಾಯಗೊಂಡಿದ್ದು ಅವರನ್ನು ಮುಂಬೈನ ಬಾಂದ್ರಾದಲ್ಲಿರುವ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಪತ್ನಿ ಪ್ರೀತಿ ಜಾಂಗಿಯಾನಿ ಜೊತೆಗಿದ್ದಾರೆ ಎಂದು ಹೇಳಲಾಗಿದೆ.
ನಟ ಪರ್ವಿನ್ ದಬಾಸ್ ಪ್ರೊ ಪಂಜಾ ಲೀಗ್ನ ಸಹ ಸಂಸ್ಥಾಪಕರಾಗಿದ್ದಾರೆ. ಕಾರು ಅಪಘಾತದ ಬಗ್ಗೆ ಪ್ರೊ ಪಂಜಾ ಲೀಗ್ ಸ್ವತಃ ಮಾಹಿತಿಯನ್ನು X ನಲ್ಲಿ ಹಂಚಿಕೊಂಡಿದ್ದು “ಪ್ರೊ ಪಂಜಾ ಲೀಗ್ ಸಹ ಸಂಸ್ಥಾಪಕ ಪರ್ವಿನ್ ದಾಬಾಸ್ ಅವರು ಶನಿವಾರ ಬೆಳಿಗ್ಗೆ ಕಾರು ಅಪಘಾತಕ್ಕೊಳಗಾಗಿದ್ದು ಅವರನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆ, ಬಾಂದ್ರಾ, ಐಸಿಯುಗೆ ದಾಖಲಿಸಲಾಗಿದೆ ಎಂದು ತಿಳಿಸಲು ನಾವು ವಿಷಾದಿಸುತ್ತೇವೆ. ಎಂದು ಪೋಸ್ಟ್ ಹಾಕಿದ್ದಾರೆ.
ಪರ್ವಿನ್ ದಾಬಾಸ್ ಅವರು 2008 ರಲ್ಲಿ ನಟಿ ಪ್ರೀತಿ ಜಾಂಗಿಯಾನಿ ಅವರನ್ನು ವಿವಾಹವಾದರು.
ನಟ ಪರ್ವಿನ್ ದಾಬಾಸ್ 2006 ರಲ್ಲಿ ಬಿಡುಗಡೆಯಾದ ಖೋಸ್ಲಾ ಕಾ ಘೋಸ್ಲಾ ಚಿತ್ರದಲ್ಲಿ ಕಾಣಿಸಿಕೊಂಡರು. ಮೈ ನೇಮ್ ಈಸ್ ಖಾನ್, ರಾಗಿಣಿ ಎಂಎಂಎಸ್ 2 ಚಿತ್ರಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದರು, ಅಲ್ಲದೆ ಇತ್ತೀಚೆಗೆ ಅವರು ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಯಾದ ಶರ್ಮಾ ಜಿ ಕಿ ಭೇಟಿ ಚಿತ್ರದಲ್ಲಿ ಕಾಣಿಸಿಕೊಂಡರು.
According to a media statement issued by the Pro Panja League,
actor and the league’s co-founder Parvin Dabas has been hospitalised and is in the ICU at Holy family hospital Bandra following an unfortunate car accident in the early hours of Saturday. pic.twitter.com/rIzwnGb1iq— Shayan Acharya (@ShayanAcharya) September 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.