Rista Laboni: ಬ್ರೈನ್ ಹ್ಯಾಮ್ರೇಜ್ ನಿಂದ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಖ್ಯಾತ ನಟಿ
Team Udayavani, Jun 6, 2024, 1:16 PM IST
ನವದೆಹಲಿ: ಕಳೆದ ಕೆಲ ದಿನಗಳಿಂದ ಬ್ರೈನ್ ಹ್ಯಾಮ್ರೇಜ್ ಸಮಸ್ಯೆಯಿಂದ ಸಾವು – ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದ ಖ್ಯಾತ ನಟಿಯೊಬ್ಬರು ವಿಧವಶರಾಗಿದ್ದಾರೆ.
ಬಾಂಗ್ಲಾದೇಶ ಚಿತ್ರರಂಗದ ಖ್ಯಾತ ನಟಿ ರಿಷ್ತಾ ಲಬೋನಿ ಶಿಮಾನಾ ತನ್ನ 39ನೇ ವಯಸ್ಸಿನಲ್ಲಿ ಬಂಗಬಂಧು ಶೇಖ್ ಮುಜೀಬ್ ವೈದ್ಯಕೀಯ ಆಸ್ಪತ್ರೆಯಲ್ಲಿಇಹಲೋಕ ತ್ಯಜಿಸಿದ್ದಾರೆ.
ನಟಿಯ ಸಾವಿನ ಸುದ್ದಿಯನ್ನು ಆಕೆಯ ಸಹೋದರ ಇಜಾಜ್ ಬಿನ್ ಮತ್ತು ಮಾಜಿ ಪತಿ ಪರ್ವೇಜ್ ಸಜ್ಜದ್ ಖಚಿತಪಡಿಸಿದ್ದಾರೆ.
ಮೇ.21 ರಿಷ್ತಾ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಬ್ರೈನ್ ಹ್ಯಾಮ್ರೇಜ್ ನಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ(ಮೇ.29 ರಂದು) ತೀವ್ರ ಗಂಭೀರಗೊಂಡ ಅವರನ್ನು ನ್ಯೂರೋಸೈನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಮೆದುಳಿನ ಸರ್ಜರಿಯನ್ನು ಮಾಡಲಾಗಿತ್ತು. ಆದರೆ ಇದರಿಂದ ನಟಿಯ ಆರೋಗ್ಯ ಮತ್ತಷ್ಟ ಹದಗೆಟ್ಟಿತ್ತು. ಹೀಗಾಗಿ ಶೇಖ್ ಮುಜೀಬ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮೇ.29 ರಿಂದ ವೆಂಟಿಲೇಟರ್ ನೆರವಿನಲ್ಲಿದ್ದ ಅವರು ಜೂ.4 ರಂದು ಕೊನೆಯುಸಿರೆಳೆದಿದ್ದಾರೆ.
ಬಾಂಗ್ಲಾದೇಶದ ಚಿತ್ರರಂಗದಲ್ಲಿ ಜನಪ್ರಿಯತೆಯನ್ನು ಗಳಿಸಿದ್ದ ರಿಷ್ತಾ 2006 ರಲ್ಲಿ ಸ್ಟಾರ್-ಸ್ಟಡ್ಡ್ ಲಕ್ಸ್-ಚಾನೆಲ್ ಸೂಪರ್ಸ್ಟಾರ್ ಕಾರ್ಯಕ್ರಮದಿಂದ ಮನರಂಜನಾ ಲೋಕಕ್ಕೆ ಕಾಲಿಟ್ಟಿದ್ದರು. ಆ ಬಳಿಕ ಚಿತ್ರರಂಗದಲ್ಲಿ ಅವಕಾಶ ಪಡೆದುಕೊಂಡ ಅವರು, “ದಾರುಚಿನಿ ದ್ವಿಪ್” ಎನ್ನುವ ಚಿತ್ರದಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ರಿಷ್ತಾ 2014 ರಲ್ಲಿ ಪರ್ವೇಜ್ ಸಜ್ಜದ್ ಅವರೊಂದಿಗೆ ವಿವಾಹವಾಗಿದ್ದರು. ಆ ಬಳಿಕ ಇಬ್ಬರು ವಿಚ್ಚೇದನ ಪಡೆದಿದ್ದರು.
ತಾಯಿಯಾದ ನಂತರ ಬ್ರೇಕ್ ಪಡೆದುಕೊಂಡಿದ್ದ ಅವರು,ಇತ್ತೀಚೆಗೆ ನಟನೆಗೆ ಮರಳಿದ್ದರು. ನಟಿಯ ನಿಧನಕ್ಕೆ ಬಾಂಗ್ಲಾ ಚಿತ್ರರಂಗ ಕಂಬನಿ ಮಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.