![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 29, 2020, 9:01 AM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮರಣೋತ್ತರ ಮತ್ತು ಒಳಾಂಗಗಳ ಪರೀಕ್ಷೆಯ ಮರು ಮೌಲ್ಯಮಾಪನ ಮಾಡುತ್ತಿದ್ದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ತಂಡವು ತನ್ನ ವರದಿಯನ್ನು ಸಿಬಿಐಗೆ ಸಲ್ಲಿಸಿದೆ.
ಸೋಮವಾರ ಸಂಜೆ ಏಮ್ಸ್ ತನ್ನ ವರದಿಯನ್ನು ಸಿಬಿಐಗೆ ಹಸ್ತಾಂತರಿಸಿದೆ. ಈ ವರದಿಯಿಂದ ನಟನ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ನಿರ್ಧರಿಸಲು ಪೂರಕ ಅಂಶಗಳು ಲಭ್ಯವಾಗಲಿದೆ.
ಸುಶಾಂತ್ ಸಿಂಗ್ ರಜಪೂತ್ ಕೊಲ್ಲಲ್ಪಟ್ಟಿದ್ದಾರೆಯೇ ಅಥವಾ ಇದು ಆತ್ಮಹತ್ಯೆಯೇ ಎಂದು ನಿರ್ಧರಿಸಲು ಸಿಬಿಐ ತನಗೆ ಇದುವರೆಗೆ ಲಭ್ಯವಾಗಿರುವ ಇತರ ಸಾಕ್ಷಿ ಪುರಾವೆಗಳೊಂದಿಗೆ ಈ ವರದಿಯನ್ನು ತುಲನೆ ಮಾಡಿ ವಿಶ್ಲೇಷಣೆ ಮಾಡಲಿದೆ.
ಈ ಹಿಂದಿನ ಏಮ್ಸ್ ವರದಿಯ ಪ್ರಕಾರ ಸುಶಾಂತ್ ಸಿಂಗ್ ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ವಕೀಲ ವಿಕಾಸ್ ಸಿಂಗ್ ಆರೋಪಿಸಿದ್ದರು. ಆದರೆ ಇದನ್ನು ಅಲ್ಲಗಳೆದಿರುವ ಏಮ್ಸ್ ವೈದ್ಯ ಸುಧೀರ್ ಗುಪ್ತಾ, ಇದು ತಪ್ಪು ಆರೋಪ ಎಂದಿದ್ದಾರೆ.
ಜೂನ್ 14ರಂದು ಸುಶಾಂತ್ ಸಿಂಗ್ ತನ್ನ ಮುಂಬೈ ನಿವಾಸದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣವೀಗ ಹಲವು ಕಾರಣಗಳಿಂದ ಸುದ್ದಿಯಾಗಿದ್ದು, ಇದರ ಸುಳಿವಿನಿಂದಲೇ ಬಾಲಿವುಡ್ ಡ್ರಗ್ ಮಾಫಿಯಾದ ಮುಖಗಳು ಹೊರಗೆ ಬರುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.