![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 29, 2020, 1:00 PM IST
ಮುಂಬೈ: ಜಗತ್ತಿನೆಲ್ಲಡೆ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಭಾರತವೂ ಹೋರಾಟ ನಡೆಸುತ್ತಿದೆ. ವೈರಸ್ ವಿರುದ್ಧದ ಹೋರಾಟಕ್ಕೆ ಸಾಮಾನ್ಯ ಜನರು, ಉದ್ಯಮಿಗಳು ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದಾರೆ. ಸಿನಿ ತಾರೆಯರು ಆಯಾ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಪರಿಹಾರ ನಿಧಿ ಸೇರಿದಂತೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಕೈಲಾದಷ್ಟು ಹಣ ಸಹಾಯ ಮಾಡುತ್ತಿದ್ದಾರೆ.
ನಿನ್ನೆಯಷ್ಟೆ ಪ್ರಭಾಸ್ 3 ಕೋಟಿ, ಮೊನ್ನೆ ಪವನ್ ಕಲ್ಯಾಣ್ ಒಂದು ಕೋಟಿ ಹೀಗೆ ಹಲವಾರು ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಸ್ವಲ್ಪ ಸಮಯದ ಹಿಂದೆಯಷ್ಟೆ ಉದ್ಯಮಿ ರತನ್ ಟಾಟಾ ಅವರೂ ಟಾಟಾ ಟ್ರಸ್ಟ್ ವತಿಯಿಂದ 500 ಕೋಟಿ ನೀಡುತ್ತಿರುವುದಾಗಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈಗ ನಟ ಅಕ್ಷಯ್ ಕುಮಾರ್ ಸಹ 25 ಕೋಟಿ ಹಣವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ಇಲ್ಲಿಯವರೆಗೆ ಇಷ್ಟು ದೊಡ್ಡ ಮೊತ್ತದ ಹಣ ನೀಡಿದ ಏಕೈಕ ನಟ ಎಂದರೆ ಅದು ಅಕ್ಷಯ್ ಕುಮಾರ್. ಆ್ಯಕ್ಷನ್ ಕಿಂಗ್ ದೇಶದಲ್ಲಿ ಯಾವಾಗ ಇಂತಹ ಪರಿಸ್ಥಿತಿ ಎದುರಾದರೂ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಾರೆ. ಅಕ್ಷಯ್ ಕುಮಾರ್ ಅವರ ಟ್ವೀಟ್ ನೋಡಿರುವ ಪ್ರಧಾನಿ ಅದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅಕ್ಷಯ್ ಅವರ ನಿರ್ಧಾರದಿಂದ ಖುಷಿಯಾಗಿರುವ ಟ್ವಿಂಕಲ್ ಖನ್ನಾ ಸಹ ಹೆಮ್ಮೆಯಿಂದ ಟ್ವೀಟ್ ಮಾಡಿದ್ದಾರೆ.
ಕೊರೋನಾ ವಿರುದ್ಧದ ಹೋರಾಟಕ್ಕೆ ಹೃತಿಕ್ ರೋಷನ್ 20 ಲಕ್ಷ, ಕಪಿಲ್ ಶರ್ಮಾ 50 ಲಕ್ಷ ನೀಡಿದ್ದಾರೆ. ಹೀಗೆ ಟಾಲಿವುಡ್, ಸ್ಯಾಂಡಲ್ವುಡ್ ಕಲಾವಿದರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.