![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 21, 2017, 11:29 AM IST
ಮಧುರೈ: ತಮಿಳಿನ ಪ್ರಖ್ಯಾತ ನಟ,ರಜನಿಕಾಂತ್ ಅವರ ಅಳಿಯ ಧನುಷ್ ಗೆ ದೊಡ್ಡ ರಿಲೀಫ್ ದೊರಕಿದ್ದು, ವೃದ್ಧ ದಂಪತಿಗಳು ನಮ್ಮ ಮಗ ಎಂದು ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಧುರೈ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಮೇಲೂರು ತಾಲೂಕಿನ ಮಾಲಂಪಟ್ಟಿಯ ಕದಿರೇಶನ್(60) ಮತ್ತು ಮೀನಾಕ್ಷಿ (55) ದಂಪತಿ ಧನುಷ್ ನಮ್ಮ ಮೂರು ಮಕ್ಕಳಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದು ನಮಗೆ ಜೀವನ ನಿರ್ವಹಣೆಗೆ ಏನನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ದಾಖಲೆ ಸಮೇತ ಕೋರ್ಟ್ ಮೊರೆ ಹೋಗಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಜನಿಸಿದ್ದು, ಆತನ ನಿಜ ಹೆಸರು ಕಲೈಸೆಲ್ವನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮೇಲೂರಿನಲ್ಲಿ ಪಡೆದ ಆತ ಪಿಯುಸಿ ಶಿಕ್ಷಣ ಅರ್ಧಕ್ಕೆ ಮೊಟಕು ಗೊಳಿಸಿ ಮನೆ ಬಿಟ್ಟು ತೆರಳಿದ ಎಂದು ಫೋಟೋಗಳ ಸಮೇತ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆತ ಚಿತ್ರರಂಗಕ್ಕೆ ಬಂದ ಬಳಿಕ ನಮಗೆ ಆತನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ .ತಮಿಳುನಾಡು ಸರ್ಕಾರಿ ಬಸ್ನ ನಿವೃತ್ತ ಕಂಡಕ್ಟರ್ ಆಗಿರುವ ನನ್ನ ಮತ್ತು ಪತ್ನಿಯ ಆರೋಗ್ಯ ಹದಗೆಟ್ಟಿದ್ದು, ಧನುಷ್ ಮಾಸಿಕ 65,000 ರೂಪಾಯಿ ಹಣ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.