Akshay Kumar: ಸ್ವಾತಂತ್ರ್ಯ ದಿನದಂದೇ ಭಾರತದ ಪೌರತ್ವವನ್ನು ಮರಳಿ ಪಡೆದ ಅಕ್ಷಯ್‌ ಕುಮಾರ್


Team Udayavani, Aug 15, 2023, 1:10 PM IST

Akshay Kumar: ಸ್ವಾತಂತ್ರ್ಯ ದಿನದಂದೇ ಭಾರತದ ಪೌರತ್ವವನ್ನು ಮರಳಿ ಪಡೆದ ಅಕ್ಷಯ್‌ ಕುಮಾರ್

ಮುಂಬಯಿ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಕೆನಡಾ ಪೌರತ್ವವನ್ನು ತ್ಯಜಿಸಿ ಭಾರತೀಯ ಪೌರತ್ವ ಹಾಗೂ ಪಾಸ್‌ ಪೋರ್ಟ್‌ನ್ನು ಮರಳಿ ಪಡೆದುಕೊಂಡಿದ್ದಾರೆ.

ಕೆನಡಾ ಪೌರತ್ವ ಸಲ್ಲಿಸಿದ್ದು ಯಾಕೆ?:

ಬಾಲಿವುಡ್‌ ನಲ್ಲಿ ನಟಿಸಿ, ಭಾರತೀಯರ ಅಪಾರ ಅಭಿಮಾನವನ್ನು ಗಳಿಸಿರುವ ನಟ ಅಕ್ಷಯ್‌ ಕುಮಾರ್‌ ಕೆನಡಾ ದೇಶದ ಪೌರತ್ವವನ್ನು ಹೊಂದಿದ್ದರು. 90 ದಶಕದಲ್ಲಿ ಅವರ ಸಾಲು ಸಾಲ ಸಿನಿಮಾಗಳು ಸೋಲುತ್ತಿದ್ದವು. ಇದರಿಂದ ಮನನೊಂದಿದ್ದ ಅವರು ಬೇರೆ ಏನಾದರೂ ಕೆಲಸ ಮಾಡುವ ನಿಟ್ಟಿನಲ್ಲಿ ಅವರ ಸ್ನೇಹಿತರೊಬ್ಬರ ಸಲಹೆಯಂತೆ ಕೆನಡಾಕ್ಕೆ ತೆರಳಿದ್ದರು. ಆ ಬಳಿಕ ಅಲ್ಲಿನ ಪೌರತ್ವಕೆ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಅವರ ಒಂದೊಂದೇ ಸಿನಿಮಾಗಳು ಹಿಟ್ ಆಗುತ್ತಾ ಹೋಯಿತು.  ಆ ಕಾರಣದಿಂದ ಅವರು ಮತ್ತೆ ಭಾರತಕ್ಕೆ ಬಂದಿದ್ದರು. ಆದರೆ ಈ ವೇಳೆ ಅವರು ಪೌರತ್ವ ಹಾಗೂ ಪಾಸ್ ಪೋರ್ಟ್‌ ಎರಡನ್ನೂ ಬದಲಾಯಿಸಿಕೊಂಡಿರಲಿಲ್ಲ.

ವಿವಾದಕ್ಕೆ ಕಾರಣವಾಗಿದ್ದ ಸಂದರ್ಶನ: 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಸಂದರ್ಶನ ಮಾಡಿದ್ದರು. ಈ ವೇಳೆ ಅಕ್ಷಯ್‌ ಅವರ ಪೌರತ್ವದ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಇದಲ್ಲದೇ ಅನೇಕರು ಅಕ್ಷಯ್‌ ಅವರ ಭಾರತೀಯನಲ್ಲ ಎಂದು ಪ್ರಶ್ನೆ ಮಾಡಿದ್ದರು. ಈ ಕಾರಣದಿಂದ ಅಕ್ಷಯ್‌ ಕುಮಾರ್‌ 2019 ರಲ್ಲೇ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋವಿಡ್ ಕಾರಣದಿಂದ ಅವರ ಪೌರತ್ವ ಹಾಗೂ ಪಾಸ್‌ ಪೋರ್ಟ್‌  ಪ್ರಕ್ರಿಯೆ ವಿಳಂಬವಾಗಿತ್ತು.

ದೇಶದ 77ನೇ ಸ್ವಾತಂತ್ರ್ಯ ದಿನದ ಶುಭ ಸಂದರ್ಭದಲ್ಲೇ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಹಾಗೂ ಪಾಸ್ ಪೋರ್ಟ್ ನ್ನು ಮರಳಿ ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಅಕ್ಷಯ್ ಅವರೇ ಹಂಚಿಕೊಂಡಿದ್ದಾರೆ. “ನನ್ನ ಹೃದಯ ಹಾಗೂ ಪೌರತ್ವ ಎರಡೂ ಹಿಂದೂಸ್ತಾನಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು ಜೈಹಿಂದ್” ಎಂದು ಬರೆದುಕೊಂಡು, ಫೋಟೋ ಹಂಚಿಕೊಂಡಿದ್ದಾರೆ.

ಈ ಹಿಂದೆ ಅಕ್ಷಯ್‌ ಕೆನಡಾದ ಪೌರತ್ವ ವಿಚಾರವಾಗಿ ಸಂದರ್ಶನವೊಂದರಲ್ಲಿ“ಭಾರತವೇ ನನಗೆ ಸರ್ವಸ್ವ. ನಾನು ಗಳಿಸಿದ್ದೆಲ್ಲವೂ ಇಲ್ಲಿಂದ. ಮತ್ತು ನಾನು ಹಿಂತಿರುಗಲು ಅವಕಾಶವನ್ನು ಪಡೆದಿರುವುದು ನನ್ನ ಅದೃಷ್ಟ. ಜನರು ಏನನ್ನೂ ತಿಳಿಯದೆ ವಿಷಯಗಳನ್ನು ಹೇಳಿದಾಗ ಬೇಸರವಾಗುತ್ತದೆ” ಎಂದಿದ್ದರು.

ಸದ್ಯ ಅಕ್ಷಯ್‌ ಕುಮಾರ್‌ ಅವರ ʼಓಮೈಗಾಡ್-2”‌ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುವುದರ ಜೊತೆಗೆ ಪ್ರೇಕ್ಷಕರ ಮನಗೆದ್ದಿದೆ.

 

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.