Uorfi Javed: ನಕಲಿ ಪೊಲೀಸರೊಂದಿಗೆ ವಿಡಿಯೋ; ಉರ್ಫಿ ಜಾವೇದ್ ವಿರುದ್ಧ ದೂರು ದಾಖಲು
Team Udayavani, Nov 4, 2023, 10:17 AM IST
ಮುಂಬಯಿ: ನಟಿ ಕಂ ಸೋಶಿಯಲ್ ಮೀಡಿಯಾ ಸ್ಟಾರ್ ಉರ್ಫಿ ಜಾವೇದ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.
ತನ್ನ ವಿಭಿನ್ನ ಫ್ಯಾಷನ್ ಹಾಗೂ ಸಣ್ಣ ಸಣ್ಣ ಬಟ್ಟೆಗಳನ್ನು ಹಾಕಿ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುವ ಉರ್ಫಿ ಜಾವೇದ್ ತನ್ನ ವಿಡಿಯೋವೊಂದರ ಮೂಲಕ ಪೊಲೀಸ್ ಠಾಣಾ ಮೆಟ್ಟಿಲೇರುವ ಸಂಕಷ್ಟದಲ್ಲಿ ಸಿಲುಕಿದ್ದಾರೆ.
ನಕಲಿ ಪೊಲೀಸರೊಂದಿಗೆ ವಿಡಿಯೋ.. ಇತ್ತೀಚೆಗಷ್ಟೇ ಉರ್ಫಿ ಜಾವೇದ್ ಅವರನ್ನು ಕೆಲ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿತ್ತು. ಸಣ್ಣ ಸಣ್ಣ ಬಟ್ಟೆ ಹಾಕಿದ್ದರಿಂದ ನಿಮ್ಮನ್ನು ಅರೆಸ್ಟ್ ಮಾಡುತ್ತಿದ್ದೇವೆ ಎಂದು ವಿಡಿಯೋದಲ್ಲಿರುವ ಪೊಲೀಸರು ಹೇಳಿದ್ದರು.
ಈ ವಿಡಿಯೋ ನೋಡಿ ಅನೇಕರು ಅಸಲಿ ನಟಿ ಉರ್ಫಿ ಅರೆಸ್ಟ್ ಆಗಿದ್ದಾರೆ ಎಂದೇ ಅಂದುಕೊಂಡಿದ್ದರು.ವಿಡಿಯೋ ವೈರಲ್ ಆದ ನಂತರ ಯಾವುದೇ ಬಂಧನವಾಗಿಲ್ಲ ಎಂದು ಮುಂಬೈ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೃಷ್ಣಕಾಂತ್ ಉಪಾಧ್ಯಾಯ ಸ್ಪಷ್ಟಪಡಿಸಿದ್ದರು.
ಇದೀಗ ಓಶಿವಾರಾ ಪೊಲೀಸ್ ಠಾಣಾ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಉರ್ಫಿ ಜಾವೇದ್ ಸೇರಿದಂತೆ ಇತರೆ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 171, 419, 500 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
(ವಂಚನೆಯ ಉದ್ದೇಶದಿಂದ (171) ಸಾರ್ವಜನಿಕ ಸೇವಕರು ಬಳಸುವ ವಸ್ತ್ರವನ್ನು ಧರಿಸುವುದು ,ವ್ಯಕ್ತಿಗತವಾಗಿ ವಂಚನೆ (419), ಮಾನಹಾನಿ (50 )
ಜಾವೇದ್ ಕಾನೂನು ತೊಂದರೆ ಎದುರಿಸುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್ 2022 ರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಮತ್ತು ಅಶ್ಲೀಲ ಕೃತ್ಯಗಳಿಗಾಗಿ ಆಕೆಯ ವಿರುದ್ಧ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ
Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.