Viral Video: ಸೆಲ್ಫಿಗಾಗಿ ಬಂದಾತನ ತಲೆಗೆ ಹೊಡೆದ ನಾನಾ ಪಾಟೇಕರ್.!
Team Udayavani, Nov 15, 2023, 2:10 PM IST
ಮುಂಬಯಿ: ಅಭಿಮಾನಿಗಳು ಸೆಲ್ಫಿ ಕೇಳಲು ಬರುವಾಗ ಕೆಲ ಸೆಲೆಬ್ರಿಟಿಗಳು ಉಡಾಫೆಯಾಗಿ ವರ್ತಿಸುತ್ತಾರೆ. ಇದಕ್ಕೆ ಹೊಸ ಉದಾಹರಣೆಯಾಗಿ ಹಿರಿಯ ನಾನಾ ಪಾಟೇಕರ್ ನಿಂತಿದ್ದಾರೆ. ಇತ್ತೀಚೆಗೆ ಅವರು ಅಭಿಮಾಯೊಂದಿಗೆ ವರ್ತಿಸಿದ ರೀತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಾಲಿವುಡ್ ಸೇರಿದಂತೆ, ಮರಾಠಿ ಸಿನಿಮಾರಂಗದಲ್ಲೂ ತನ್ನ ನಟನೆ ಮೂಲಕ ಅಪಾರ ಮೆಚ್ಚುಗೆ ಹಾಗೂ ಗೌರವವನ್ನು ಪಡೆದುಕೊಂಡಿರುವ ನಾನಾ ಪಾಟೇಕರ್ ಇತ್ತೀಚೆಗೆ ಅಭಿಮಾನಿಯೊಬ್ಬರ ಜೊತೆ ನಡೆಸಿಕೊಂಡ ರೀತಿಗೆ ಅನೇಕರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
‘ದಿ ವ್ಯಾಕ್ಸಿನ್ ವಾರ್’ ನಂತರ ನಾನಾ ಪಾಟೇಕರ್ ತಮ್ಮ ಮುಂದಿನ ಚಿತ್ರದ ಚಿತ್ರೀಕರಣವನ್ನು ವಾರಣಾಸಿಯಲ್ಲಿ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ ಮೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ನೆರದಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬ ನಾನಾ ಪಾಟೇಕರ್ ಅವರೊಂದಿಗೆ ಫೋಟೋ ತೆಗೆದುಕೊಳ್ಳಲು ಬಂದಿದ್ದಾರೆ.
ನಾನಾ ಪಾಟೇಕರ್ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದ ಅಭಿಮಾನಿಯ ತಲೆಗೆ ಹೊಡೆದು ದೂಡಿದ್ದಾರೆ. ಇದಾದ ಬಳಿಕ ಸಿಬ್ಬಂದಿ ಅಭಿಮಾನಿಯನ್ನು ಇಚೆ ಎಳೆದಿದ್ದಾರೆ. 10 ಸೆಕೆಂಡ್ ಗಳ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದೀಗ ಈ ಬಗ್ಗೆ ನಿರ್ದೇಶಕ ಅನಿಲ್ ಶರ್ಮ ಅವರು, ಸ್ಪಷ್ಟನೆ ನೀಡಿದ್ದು, ಅದು ಸಿನಿಮಾದ ಚಿತ್ರೀಕರಣ ಒಂದು ಶಾಟ್ ಅಷ್ಟೇ. ರಸ್ತೆ ಮಧ್ಯದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಇದರಲ್ಲಿ ಹುಡುಗನ ತಲೆಯೊಂದಕ್ಕೆ ಹೊಡೆಯಬೇಕಾದ ಸೀನ್ ಇತ್ತು. ಈ ಚಿತ್ರೀಕರಣ ನಡೆಯುವ ವೇಳೆ, ಯಾರೋ ಒಬ್ಬರು ಇದನ್ನು ಮೊಬೈಲ್ ನಲ್ಲಿ ಶೂಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ನಾನಾ ಪಾಟೇಕರ್ ಶೀಘ್ರದಲ್ಲೇ ಪ್ರಕಾಶ್ ಝಾ ನಿರ್ದೇಶನದ ರಾಜಕೀಯ ಥ್ರಿಲ್ಲರ್ ‘ಲಾಲ್ ಬಟ್ಟಿ’ ಮೂಲಕ ಓಟಿಟಿ ಪಾದಾರ್ಪಣೆ ಮಾಡಲಿದ್ದಾರೆ.
Stars won’t exist without fans….Fans should also avoid taking selfies with these egoistic stars…
What is this #Nanapatekar ji???#Prabhas never did like this in his entire career even after getting PAN Indian stardom with #Baahubali ….#Salaar pic.twitter.com/Mb6dIFkzzw— Tolly hub (@tolly_hub) November 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.