![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 24, 2022, 4:55 PM IST
ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ನಟನೆಯ ʼಗಾಡ್ ಫಾದರ್ʼ ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಅಕ್ಟೋಬರ್ 5 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಭರ್ಜರಿ ಪ್ರಮೋಷನ್ ನಲ್ಲಿ ಚಿತ್ರ ತಂಡ ಬ್ಯುಸಿಯಾಗಿದೆ.
ಮಲಯಾಳಂನ ʼಲೂಸಿಫರ್ʼ ಸಿನಿಮಾದ ರಿಮೇಕ್ ಸಿನಿಮಾವಾಗಿರುವ ʼಗಾಡ್ ಫಾದರ್ʼ ನಲ್ಲಿ ಚಿರಂಜೀವಿಯೊಂದಿಗೆ ಸ್ಪೆಷೆಲ್ ರೋಲ್ ನಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ಟೀಸರ್ ಗೆ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿದೆ.
ಪ್ರಮೋಷನ್ ನ ಅಂಗವಾಗಿ ಮೆಗಾ ಸ್ಟಾರ್ ಚಿರಂಜೀವಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ವಿಶೇಷ ಸಂದರ್ಶನವನ್ನು ನೀಡಿದ್ದಾರೆ. ಈ ಸಂದರ್ಶನದ ಪ್ರೋಮೋ ರಿಲೀಸ್ ಆಗಿದ್ದು, ಅದರಲ್ಲಿ ಚಿರಂಜೀವಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: War Begins Soon.. ಪ್ರೇಮ್ ಸಿನಿಮಾಕ್ಕಾಗಿ ಹೊಸ ಸಾಹಸಕ್ಕೆ ಮುಂದಾದ ಆ್ಯಕ್ಷನ್ ಪ್ರಿನ್ಸ್
ಗಾಡ್ ಫಾದರ್ ನ ಸಬ್ಜೆಕ್ಟ್ ಹೇಗಿದೆ ಎಂದರೆ ಇದರಲ್ಲಿ ನಾಯಕಿ ಅಥವಾ ಹಾಡುಗಳು ಇಲ್ಲದಿದ್ರು ನೀವು ಆಚ್ಚರಿ ಪಡುವುದಿಲ್ಲ. ಸಿನಿಮಾದಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಅವರು ನಟಿಸಿದ್ದಾರೆ. ಅವರು ಮೊದಲು ಯಾವುದೇ ಕಾರಣಕ್ಕೂ ನಟಿಸಲ್ಲ ಎಂದಿದ್ದರು. ಆದರೆ ನೀವು ಸಿನಿಮಾವನ್ನು ನೋಡಿದರೆ ನಿಮಗೆ ಅವರ ನಟನೆ ನೋಡಿ ಆಶ್ಚರ್ಯವಾಗಬಹುದು. ಅವರಲ್ಲೊಬ್ಬ ಪ್ರತಿಭಾವಂತ ನಟನಿರುವುದು ನಿಮಗೆ ತಿಳಿಯುತ್ತದೆ ಎಂದು ಚಿರಂಜೀವಿ ಹೇಳಿದ್ದಾರೆ.
ಇನ್ನು ಸಿನಿಮಾದಲ್ಲಿ ವಿಶೇಷ ಪಾತ್ರವನ್ನು ಮಾಡಿರುವ ಸಲ್ಮಾನ್ ಬಗ್ಗೆ ಪ್ರಶಂಸೆ ಮಾಡುತ್ತಾ, ಸಲ್ಮಾನ್ ಖಾನ್ ಸಂಭಾವನೆ ತೆಗೆದುಕೊಳ್ಳದೆ ಈ ಸಿನಿಮಾವನ್ನು ಮಾಡಿದ್ದಾರೆ. ಅವರು ಪ್ರೀತಿಗಾಗಿ ಮಾತ್ರ ಸಿನಿಮಾ ಮಾಡುತ್ತಾರೆ. ಹ್ಯಾಟ್ಸ್ ಆಫ್ ಸಲ್ಮಾನ್ ಭಾಯಿ, ವಿ ಲವ್ ಯೂ ಎಂದು ಹೇಳಿದ್ದಾರೆ. ಇತ್ತೀಚಿಗೆ ಗಾಡ್ ಫಾದರ್ ಸಿನಿಮಾದ “ಥಾರ್ ಮಾರ್ ಥಕ್ಕರ್ ಮಾರ್” ಹಾಡು ಬಿಡುಗಡೆಯಾಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.