![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 8, 2024, 7:09 PM IST
ಗದಗ : ಜನ್ಮ ದಿನದ ಸಂಭ್ರಮದಲ್ಲಿ ಸಿಹಿ ಹಂಚಿ ಸಂಭ್ರಮಿಸಬೇಕಾಗಿದ್ದ ರಾಕಿಂಗ್ ಸ್ಟಾರ್ ಯಶ್ ಅವರು ಮೂವರು ಅಭಿಮಾನಿಗಳ ನಿಧನದಿಂದ ನೊಂದು, ಸೂತಕದ ಮನೆಗಳಲ್ಲಿ ಭಾವುಕರಾಗಬೇಕಾದ ಪ್ರಸಂಗ ಸೋಮವಾರ ಬಂದೊದಗಿತು.
ಯಶ್ ಅವರ ಫೋಟೋವಿದ್ದ ಜನ್ಮ ದಿನದ ಶುಭಾಶಯ ಕೋರುವ ಕಬ್ಬಿಣದ ರಾಡ್ ಗಳಿದ್ದ ಬೃಹತ್ ಕಟೌಟ್ ಗೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿಗೆ ಸೋಮವಾರ ಸಂಜೆ ನಟ ಯಶ್ ಅವರು ದೌಡಾಯಿಸಿದರು. ಈ ವೇಳೆ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪೊಲೀಸರ ಸಹಕಾರದೊಂದಿಗೆ ಗ್ರಾಮಕ್ಕೆ ಆಗಮಿಸಿದ ನಟ ಯಶ್, ಮೃತ ಮೂವರೂ ಅಭಿಮಾನಿಗಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುತ್ತಿಟ್ಟು. ಎಲ್ಲರ ಕಣ್ಣೀರು ಕಂಡು ಯಶ್ ಭಾವುಕರಾಗಿ ಮೌನರಾದರು.
ಗ್ರಾಮದ 10 ಕ್ಕೂ ಹೆಚ್ಚಿನ ಯುವಕರು ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸಲು ಮುಂದಾಗಿದ್ದ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.