Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…


Team Udayavani, Sep 25, 2024, 1:45 PM IST

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

ಮುಂಬಯಿ: ‘ಲಾಪತಾ ಲೇಡೀಸ್’( Laapataa Ladies) ಸಿನಿಮಾ 2025ರ ಆಸ್ಕರ್ ಗೆ (Oscars 2025) ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎನ್ನುವ ಸುದ್ದಿ ಟ್ರೆಂಡ್‌ ನಲ್ಲಿರುವಾಗಲೇ ಮತ್ತೊಂದು ಸಿನಿಮಾ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದು ವರದಿಯಾಗಿದೆ.

97ನೇ ಆಸ್ಕರ್‌ ಪ್ರಶಸ್ತಿಗಾಗಿ ಭಾರತದಿಂದ ಕಿರಣ್‌ ರಾವ್‌ (Kiran Rao) ನಿರ್ದೇಶನದ  ‘ಲಾಪತಾ ಲೇಡೀಸ್’ ಅಧಿಕೃತವಾಗಿ ಪ್ರವೇಶ ಪಡೆದಿದೆ ಎಂದು ಸೋಮವಾರ (ಸೆ.23ರಂದು) ಚೆನ್ನೈನಲ್ಲಿ ಸುದ್ದಿಗೋಷ್ಟಿ ನಡೆಸಿ ಫಿಲಂ ಫೆಡರೇಶನ್‌ ಆಫ್ ಇಂಡಿಯಾ (Film Federation of India) ತಿಳಿಸಿತ್ತು.

ಇದನ್ನೂ ಓದಿ: Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

ಈ ನಡುವೆ ರಣದೀಪ್‌ ಹೂಡಾ ಅಭಿನಯಿಸಿ, ನಿರ್ದೇಶನ ಮಾಡಿರುವ ‘ಸ್ವಾತಂತ್ರ್ಯ ವೀರ ಸಾವರ್ಕರ್‌ʼ ಸಿನಿಮಾವನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ವಿಡಿ ಸಾವರ್ಕರ್ ಅವರ ಜೀವನದ ಕಥೆಯನ್ನು ಹೊಂದಿರುವ ‘ಸ್ವಾತಂತ್ರ್ಯ ವೀರ ಸಾವರ್ಕರ್‌ʼ ಚಿತ್ರ ಇದೇ ವರ್ಷದ ಮಾರ್ಚ್‌ 22ರಂದು ರಿಲೀಸ್‌ ಆಗಿತ್ತು. ರಣದೀಪ್‌ ಹೂಡಾ ಪ್ರಧಾನ ಪಾತ್ರದ ಜತೆ ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟಾಗಿ ಕಲೆಕ್ಷನ್‌ ಮಾಡದೆ ಇದ್ದರೂ ರಣದೀಪ್‌ ಅವರ ಅಭಿನಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

 

View this post on Instagram

 

A post shared by SANDEEP SINGH (@officialsandipssingh)

“ನಮ್ಮ ಸ್ವಾತಂತ್ರ್ಯ ವೀರ ಸಾವರ್ಕರ್ ಚಿತ್ರವನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಸಲಾಗಿದೆ. ನಮ್ಮ ಪರಿಶ್ರಮವನ್ನು ಮೆಚ್ಚಿದ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಧನ್ಯವಾದಗಳು. ಈ ಪ್ರಯಾಣವು ಅದ್ಭುತವಾಗಿದೆ ಮತ್ತು ದಾರಿಯುದ್ದಕ್ಕೂ ನಮಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞರಾಗಿರುತ್ತೇವೆ” ಎಂದು ನಿರ್ಮಾಣ ಸಂಸ್ಥೆ  ಪೋಸ್ಟರ್‌ ಹಂಚಿಕೊಂಡು ಹೇಳಿದೆ.

ಆದರೆ ಈಗಾಗಲೇ ಭಾರತದಿಂದ ಅಧಿಕೃತವಾಗಿ ‘ಲಾಪತಾ ಲೇಡೀಸ್’ ಸಿನಿಮಾವನ್ನು ಆಸ್ಕರ್ ಗೆ ಸಲ್ಲಿಕೆ ಮಾಡಿರುವ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಚಿತ್ರತಂಡದ ಮಾತನ್ನು ತಳ್ಳಿ ಹಾಕಿದೆ.

ರಣದೀಪ್ ಹೂಡಾ ಅವರ ʼಸ್ವಾತಂತ್ರ್ಯ ವೀರ ಸಾವರ್ಕರ್ʼ ತಂಡ ಮಾಡಿರುವ ಘೋಷಣೆಯಲ್ಲಿ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಯಾವುದೇ ಪಾತ್ರವಿಲ್ಲವೆಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೊಟ್ಟಕರ ಸ್ಪಷ್ಟನೆ ನೀಡಿದ್ದಾರೆ.

ʼಸ್ವಾತಂತ್ರ್ಯ ವೀರ ಸಾವರ್ಕರ್ʼ ತಂಡ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗಾಗಿ ‘ಲಾಪತಾ ಲೇಡೀಸ್’ ಚಿತ್ರವನ್ನು ಮಾತ್ರ ಕಳುಹಿಸಲಾಗಿದೆ ಎಂದು ರವಿ ಕೊಟ್ಟಕರ ಸ್ಪಷ್ಟಪಡಿಸಿದ್ದಾರೆ.

ಸಿನಿಮಾ ಆಸ್ಕರ್‌ ಗೆ ಸಲ್ಲಿಕೆಯಾಗಿದೆ ಎನ್ನುವ ಪೋಸ್ಟ್‌ ನ್ನು ಇನ್ಸ್ಟಾಗ್ರಾಮ್‌ನಲ್ಲಿ ಚಿತ್ರದಲ್ಲಿ ನಟಿಸಿರುವ ಅಂಕಿತಾ ಲೋಖಂಡೆ, ಸಹ-ನಿರ್ಮಾಪಕ ಸಂದೀಪ್ ಸಿಂಗ್ ಮತ್ತು ನಿರ್ಮಾಣ ಸಂಸ್ಥೆಗಳ ಸಹಯೋಗದಿಂದ ಹಂಚಿಕೊಳ್ಳಲಾಗಿದೆ. ಆದರೆ ಚಿತ್ರದ ನಿರ್ದೇಶಕ ಹಾಗೂ ನಾಯಕ ರಣದೀಪ್‌ ಈ ಬಗ್ಗೆ ಯಾವುದೇ ಪೋಸ್ಟ್‌ ಹಂಚಿಕೊಂಡಿಲ್ಲ.

“ಚಿತ್ರವನ್ನು ಯಾವಾಗ ಆಸ್ಕರ್‌ಗೆ ಸಲ್ಲಿಸಲಾಯಿತು ಎಂದು ನನಗೆ ತಿಳಿದಿಲ್ಲ. ಆಸ್ಕರ್‌ಗೆ ಹೋಗುವುದು ಒಂದು ದೊಡ್ಡ ಮೈಲಿಗಲ್ಲು ಎನ್ನುವುದನ್ನು ಮಾತ್ರ ನಾನು ಹೇಳಿದ್ದೆ ಎಂದು ಸಹ ನಿರ್ಮಾಪಕ ಆನಂದ್ ಪಂಡಿತ್ ʼಹಿಂದೂಸ್ತಾನ್‌ ಟೈಮ್ಸ್‌ʼಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

siddaramaiah

Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

1-ddd

Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ

Oscars 2025: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Oscars: 97ನೇ ಆಸ್ಕರ್‌ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-thirthahalli

ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

eshwarappa

Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.