I Am Safe… ಕೆನಡಾದಲ್ಲಿ ನಡೆದ ಗುಂಡಿನ ದಾಳಿ ಬಳಿಕ ಗಾಯಕ ಎ.ಪಿ.ಧಿಲ್ಲೋನ್ ಮೊದಲ ಪೋಸ್ಟ್
Team Udayavani, Sep 3, 2024, 10:55 AM IST
ಹೊಸದಿಲ್ಲಿ: ಕೆನಡಾದ ವ್ಯಾಂಕೋವರ್ನಲ್ಲಿರುವ ಪಂಜಾಬ್ನ ಖ್ಯಾತ ಗಾಯಕ ಅಮೃತಪಾಲ್ ಸಿಂಗ್ ಧಿಲ್ಲೋನ್ ಅವರ ಮನೆಯ ಹೊರಗೆ ರವಿವಾರ (ಸೆಪ್ಟೆಂಬರ್ 1) ರಾತ್ರಿ ಗುಂಡಿನ ದಾಳಿ ನಡೆದಿದ್ದು ಇದೀಗ ಗಾಯಕ ತನ್ನ ಹಾಗೂ ಕುಟುಂಬದ ಕುರಿತು ಹೇಳಿಕೆ ನೀಡಿರುವ ಮೊದಲ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಗುಂಡಿನ ದಾಳಿ ಕುರಿತು ಎಪಿ ಧಿಲ್ಲೋನ್ ತಮ್ಮ ಸಾಮಾಜಿಕ ಮಾಧ್ಯಮ (ಇನ್ಸ್ಟಾಗ್ರಾಮ್) ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು ಅದರಲ್ಲಿ “ನಾನು ಸುರಕ್ಷಿತವಾಗಿದ್ದೇನೆ. ನನ್ನ ಕುಟುಂಬವೂ ಸುರಕ್ಷಿತವಾಗಿದೆ. ನಮ್ಮನ್ನು ಸಂಪರ್ಕಿಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲವೇ ಎಲ್ಲವೂ. ಎಂದು ಪೋಸ್ಟ್ ಹಾಕಿದ್ದಾರೆ.
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರ ರೋಹಿತ್ ಗೋಡಾರಾ ಈ ದಾಳಿಯ ಹೊಣೆ ಯನ್ನು ಹೊತ್ತಿದ್ದಾನೆ. ವಿಕ್ಟೋರಿಯಾ ದ್ವೀಪದಲ್ಲಿರುವ ಧಿಲ್ಲೋನ್ ಮನೆ ಬಳಿ ಹಾಗೂ ಟೊರಾಂಟೋದ ವುಡ್ಬ್ರಿಡ್ಜ್ ಬಳಿ ದಾಳಿ ನಡೆದಿರುವ ವೀಡಿಯೋ ವೈರಲ್ ಆಗಿದ್ದು, ರೋಹಿತ್ ಗೋಡಾರಾ ಹೊಣೆ ಹೊತ್ತ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ.
ಸಲ್ಮಾನ್ ಜತೆ ಕಾಣಿಸಿಕೊಂಡಿದ್ದಕ್ಕೆ ಧಿಲ್ಲೋನ್ರನ್ನು ಗುರಿಯಾಗಿಸಲಾಗಿದೆ ಎಂದು ಗೋಡಾರಾ ಪೋಸ್ಟ್ ತಿಳಿಸಿದೆ. ಸಲ್ಮಾನ್ ಖಾನ್ ಹತ್ಯೆಗೆ ಹಿಂದಿನಿಂದಲೂ ಬಿಷ್ಣೋಯ್ ಗ್ಯಾಂಗ್ ಸಂಚು ನಡೆಸುತ್ತಿದೆ. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹಲವು ಸುಲಿಗೆ, ಬೆದರಿಕೆ ಮತ್ತು ಹಿಂಸಾತ್ಮಕ ಅಪರಾಧಗಳಲ್ಲಿ ಭಾಗಿಯಾಗಿದ್ದ 11 ಗ್ಯಾಂಗ್ಗಳನ್ನು ದಿಲ್ಲಿ ಪೊಲೀಸರು ಪತ್ತೆಹಚ್ಚಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ
Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.