ಪ್ರಭಾಸ್ ನಂತರ ಮತ್ತೋರ್ವ ಟಾಲಿವುಡ್ ನಟನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ
Team Udayavani, May 13, 2021, 8:17 PM IST
ಹೈದರಾಬಾದ್ : ಕೆಜಿಎಫ್ 2 ಬಿಡುಗಡೆ ಹಾಗೂ ಪ್ರಭಾಸ್ ಜೊತೆಗಿನ ಸಲಾರ್ ಸಿನಿಮಾದಲ್ಲಿ ಬ್ಯುಝಿಯಾಗಿರುವ ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್, ಇದೀಗ ಮತ್ತೋರ್ವ ಟಾಲಿವುಡ್ ಸೂಪರ ಸ್ಟಾರ್ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರಂತೆ.
ಕೆಜಿಎಫ್ ಚಾಪ್ಟರ್ 1 ಸಿನಿಮಾ ಸೂಪರ್ ಡೂಪರ್ ಆಗುತ್ತಿದ್ದಂತೆ ನಿರ್ದೇಶಕ ಪ್ರಶಾಂತ್ ನೀಲ್ ಅವರ ಡಿಮ್ಯಾಂಡ್ ಕೂಡ ಹೆಚ್ಚಾಯಿತು. ಅನ್ಯಭಾಷೆಗಳಿಂದ ಆಫರ್ ಗಳ ಮಹಾಪೂರವೇ ಹರಿದು ಬರಲು ಶುರುವಾಯಿತು. ಅವುಗಳೆಲ್ಲವನ್ನೂ ಪಕ್ಕಕ್ಕಿಟ್ಟು, ಕೆಜಿಎಫ್ 2 ಸಿನಿಮಾ ಕೈಗೆತ್ತಿಕೊಂಡ ಅವರು, ಚಿತ್ರೀಕರಣ ಮುಗಿಸಿ ಇದೀಗ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಇದರ ಜೊತೆಗೆ ಟಾಲಿವುಡ್ ಡಾರ್ಲಿಂಗ್. ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರ ಜೊತೆ ಸಲಾರ್ ಸಿನಿಮಾ ಒಪ್ಪಿಕೊಂಡರು. ಈ ಚಿತ್ರದ ಕೆಲಸಗಳು ಸಾಗಿವೆ.
ಸಲಾರ್ ಸಿನಿಮಾ ಮುಗಿಯುತ್ತಿದ್ದಂತೆ ಪ್ರಶಾಂತ್ ನೀಲ್ ಅವರ ಮುಂದಿನ ಸಿನಿಮಾ ಯಾವುದು ಎಂದು ಕಾಯುತ್ತಿದ್ದ ಅವರ ಅಭಿಮಾನಿಗಳಿಗೆ ಇದೀಗ ಉತ್ತರ ಸಿಕ್ಕಿದೆ.
ಹೌದು, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿ ಆರ್ ಸಿನಿಮಾಕ್ಕೆ ಪ್ರಶಾಂತ್ ನೀಲ್ ಅವರು ನಿರ್ದೆಶನ ಮಾಡಲಿದ್ದಾರಂತೆ. ಈ ವಿಚಾರವನ್ನು ಸ್ವತಃ ಎನ್ ಟಿ ಆರ್ ಅವರೇ ಖಚಿತಪಡಿಸಿದ್ದಾರೆ. ಸಲಾರ್ ಸಿನಿಮಾ ಮುಗಿಯುತ್ತಿದ್ದಂತೆ ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆಯಂತೆ. ಸದ್ಯಕ್ಕೆ ಇದಿಷ್ಟೇ ಮಾಹಿತಿ ಹೊರಬಿದ್ದಿದ್ದು, ತಾರಾಗಣದ ಆಯ್ಕೆ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್ ಹಿಟ್ ʼಮಿರ್ಜಾಪುರ್ʼ ಸರಣಿ
Movie: 45 ಕೋಟಿ ಬಜೆಟ್, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ
B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್ಗೆ ಬಿಟೌನ್ ಸ್ಟಾರ್ಸ್ ಪಡೆಯುವ ಸಂಭಾವನೆ ಎಷ್ಟು?
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.