Kangana Ranaut: ಸಿಗದ ಸೆನ್ಸಾರ್ ಪ್ರಮಾಣ ಪತ್ರ; ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಮುಂದೂಡಿಕೆ
Team Udayavani, Sep 2, 2024, 1:15 PM IST
ಮುಂಬಯಿ: ಹಲವರು ವಿಘ್ನಗಳನ್ನು ಎದುರಿಸಿ ರಿಲೀಸ್ ಡೇಟ್ ಮುಂದೂಡುತ್ತಾ ಬಂದಿದ್ದ ಕಂಗನಾ ರಣಾವತ್ (Kangana ranaut) ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ (Emergency Movie) ಸಿನಿಮಾಕ್ಕೆ ಮತ್ತೆ ಸಂಕಷ್ಟ ಎದುರಾಗಿದ್ದು ಮತ್ತೆ ರಿಲೀಸ್ ಡೇಟ್ ಮುಂದೂಡಿಕೆ ಆಗಿದೆ ಎಂದು ವರದಿಯಾಗಿದೆ.
ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ(Indira Gandhi) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಭಾರತವೇ ಇಂದಿರಾ & ಇಂದಿರಾ ಭಾರತವೇ!!! ದೇಶದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಮಹಿಳೆ, ಇತಿಹಾಸದಲ್ಲಿ ಅವಳು ಬರೆದ ಕರಾಳ ಅಧ್ಯಾಯ! ಎಂದು ಟ್ರೇಲರ್ನ್ನು ಕಂಗನಾ ಹಂಚಿಕೊಂಡಿದ್ದರು.
ಸೆ.6ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ ಇದೀಗ ಸೆ.6ರಂದು ಕೂಡ ʼಎಮರ್ಜೆನ್ಸಿʼ ಬರುವುದು ಅನುಮಾನವೆನ್ನಲಾಗುತ್ತಿದೆ.
ಕಾರಣವೇನು?: ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಬಳಿಕ ಶಿರೋಮಣಿ ಅಕಾಲಿದಳದ ದೆಹಲಿ ಘಟಕ ಸಿಬಿಎಫ್ಸಿಗೆ ಲೀಗಲ್ ನೋಟಿಸ್ ಕಳುಹಿಸಿ, ರಣಾವತ್ ಅವರ ಚಲನಚಿತ್ರ “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತದೆ” ಮತ್ತು “ತಪ್ಪು ಮಾಹಿತಿ ಹರಡಬಹುದು” ಎಂದು ಆರೋಪಿಸಿ ಬಿಡುಗಡೆಯನ್ನು ತಡೆಯುವಂತೆ ಕೋರಿತ್ತು.
ಇತ್ತ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಸದಸ್ಯರಿಗೆ ಬೆದರಿಕೆಗಳು ಬರುತ್ತಿವೆ ಎಂದು ಕಂಗನಾ ಹೇಳಿದ್ದರು.
ನಮ್ಮ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದು ನಿಜವಲ್ಲ. ವಾಸ್ತವವಾಗಿ, ನಮ್ಮ ಚಲನಚಿತ್ರವನ್ನು ಮೊದಲೇ ಬಿಡುಗಡೆಗೆ ಅನುಮತಿ ನೀಡಲಾಗಿತ್ತು ಆದರೆ ಹಲವಾರು ಬೆದರಿಕೆಗಳಿಂದಾಗಿ ಅದರ ಪ್ರಮಾಣೀಕರಣವನ್ನು ನಿಲ್ಲಿಸಲಾಗಿದೆ, ”ಎಂದು ಕಂಗನಾ ಹೇಳಿದ್ದರು.
ರಿಲೀಸ್ ಮುಂದೂಡಿಕೆ?: ಸೆನ್ಸಾರ್ ಬೋರ್ಡ್ನಿಂದ ಇನ್ನೂ ಕೂಡ ಪ್ರಮಾಣಪತ್ರ ಸ್ವೀಕರಿಸದ ಕಾರಣ ಸೆ.6ರಂದು ಸಿನಿಮಾ ರಿಲೀಸ್ ಆಗೋದು ಅನುಮಾನವೆನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಕಂಗನಾ “ನನ್ನ ಸಿನಿಮಾದ ಮೇಲೆಯೇ ʼಎಮರ್ಜೆನ್ಸಿʼ ಬಿದ್ದಿದೆ. ಇದು ಅತ್ಯಂತ ನಿರಾಶದಾಯಕ ಸ್ಥಿತಿಯಾಗಿದೆ. ನನ್ನ ದೇಶದ ಬಗ್ಗೆ ನಾನು ತುಂಬಾ ನಿರಾಶಗೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.
“ಇಂದು ನಾವು ಯಾರಿಂದಲೂ ಹೆದರಿದರೆ, ನಾಳೆಯ ದಿನ ಬೇರೆ ಅವರಿಂದಲೂ ಹೆದರಬೇಕಾದ ಪರಿಸ್ಥಿತಿ ಬರಬಹುದು. ಜನರು ನಮ್ಮನ್ನು ಹೆದರಿಸುತ್ತಲೇ ಇರುತ್ತಾರೆ ಏಕೆಂದರೆ ನಾವು ತುಂಬಾ ಸುಲಭವಾಗಿ ಹೆದರುತ್ತೇವೆ. ನಾವು ಎಷ್ಟು ಭಯಪಡುತ್ತೇವೆ? ನಾನು ಈ ಚಿತ್ರವನ್ನು ತುಂಬಾ ಸ್ವಾಭಿಮಾನದಿಂದ ಮಾಡಿದ್ದೇನೆ. ಅದಕ್ಕಾಗಿಯೇ ಸಿಬಿಎಫ್ಸಿ ಯಾವುದೇ ವಿವಾದವನ್ನು ಎತ್ತಿ ತೋರಿಸಲು ಸಾಧ್ಯವಿಲ್ಲ. ಚಿತ್ರದ ಕತ್ತರಿಸದ ಆವೃತ್ತಿಯನ್ನು ಬಿಡುಗಡೆ ಮಾಡಲು ನಾನು ನಿರ್ಧರಿಸಿದ್ದೇನೆ. ಅದಕ್ಕೂ ಅವಕಾಶ ನೀಡದೆ ಇದ್ದರೆ ನ್ಯಾಯಾಲಯದಲ್ಲಿ ಹೋರಾಡುತ್ತೇನೆ” ಎಂದು ಕಂಗನಾ ಹೇಳಿದ್ದಾರೆ.
ಅನುಪಮ್ ಖೇರ್, ಶ್ರೇಯಸ್ ತಲ್ಪಾಡೆ, ಮಿಲಿಂದ್ ಸೋಮನ್ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.