ಪುಸ್ತಕದಲ್ಲಿ ʼಬೈಬಲ್ʼ ಪದ ಬಳಸಿದ್ದಕ್ಕೆ ಆಕ್ಷೇಪ: ನಟಿ ಕರೀನಾ ಕಪೂರ್‌ಗೆ ಕೋರ್ಟ್ ನೋಟಿಸ್


Team Udayavani, May 11, 2024, 1:45 PM IST

10

ಭೋಪಾಲ್:‌ ತನ್ನ ಪುಸ್ತಕದಲ್ಲಿ ʼಬೈಬಲ್‌ʼ ಪದವನ್ನು ಬಳಸಿದ ಕಾರಣಕ್ಕೆ ಬಾಲಿವುಡ್​ ನಟಿ ಕರೀನಾ ಕಪೂರ್​ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್​​​ ನೋಟಿಸ್​ ಜಾರಿ ಮಾಡಿದೆ.

2021 ರಲ್ಲಿ ನಟಿ ಕರೀನಾ ಕಪೂರ್​ ತಮ್ಮ ಗರ್ಭಾವಸ್ಥೆ ಕುರಿತು ಗರ್ಭಧಾರಣೆಯ ಸಮಯ ಮತ್ತು ನಿರೀಕ್ಷಿತ ತಾಯಂದಿರಿಗೆ ಸಲಹೆಗಳನ್ನು ನೀಡುವ ಪುಸ್ತಕವೊಂದನ್ನು ಬರೆದಿದ್ದರು. ಇದಕ್ಕೆ “ಕರೀನಾ ಕಪೂರ್ ಖಾನ್ಸ್ ಪ್ರೆಗ್ನೆನ್ಸಿ ಬೈಬಲ್” ಎನ್ನುವ ಟೈಟಲ್‌ ಇಡಲಾಗಿತ್ತು.

ಪುಸ್ತಕದಲ್ಲಿನ ಬೈಬಲ್​ ಪದ ಬಳಕೆಗೆ ಆಕ್ಷೇಪಿಸಿ ಜಬಲ್​ಪುರ್​ ನಿವಾಸಿ ಕ್ರಿಸ್ಟೋಫರ್​ ಅಂಥೋನಿ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ.

ಕರೀನಾ ಕಪೂರ್ ಖಾನ್ ಹಾಗೂ ಪುಸ್ತಕ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕ್ರಿಸ್ಟೋಫರ್ ಆಂಥೋನಿ ಒತ್ತಾಯಿಸಿದ್ದಾರೆ. ಪುಸ್ತಕದ ಶೀರ್ಷಿಕೆಯಲ್ಲಿ “ಬೈಬಲ್” ಪದವನ್ನು ಏಕೆ ಬಳಸಲಾಗಿದೆ ಎಂಬುದರ ಕುರಿತು ನ್ಯಾಯಾಲಯ ನಟಿಯಿಂದ ಪ್ರತಿಕ್ರಿಯೆ ಕೇಳಿ ನ್ಯಾ. ಗುರುಪಲ್​ ಸಿಂಗ್​ ಅಹ್ಲುವಾಲಿಯಾ ಅವರಿದ್ದ ಪೀಠ ನಟಿಗೆ ನೋಟಿಸ್​ ಜಾರಿ ಮಾಡಿದೆ.

ಇದನ್ನೂ ಓದಿ: ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

ಪುಸ್ತಕದಲ್ಲಿನ ʼಬೈಬಲ್ʼ​ ಪದ ಬಳಕೆಯು ಕ್ರಿಶ್ಚಿಯನ್​ ಸಮುದಾಯದ ಭಾವನೆಗೆ ಧಕ್ಕೆ ತಂದಿದೆ ಎಂದು ಅರ್ಜಿದಾರ ಕ್ರಿಸ್ಟೋಫರ್​​ ಅಂಥೋನಿ ಉಲ್ಲೇಖಿಸಿದ್ದಾರೆ.

“ಬೈಬಲ್ ಪ್ರಪಂಚದಾದ್ಯಂತದ ಕ್ರಿಶ್ಚಿಯನ್ ಧರ್ಮದ ಪವಿತ್ರ ಗ್ರಂಥವಾಗಿದೆ ಇದನ್ನು ಕರೀನಾ ಕಪೂರ್ ಖಾನ್ ಅವರ ಗರ್ಭಧಾರಣೆಯನ್ನು ಬೈಬಲ್ ನೊಂದಿಗೆ ಹೋಲಿಸುವುದು ತಪ್ಪು” ಎಂದು ಕ್ರಿಸ್ಟೋಫರ್ ಹೇಳಿದ್ದಾರೆ​. ನಟಿ ತನ್ನ ಪುಸ್ತಕಕ್ಕೆ “ಅಗ್ಗದ ಪ್ರಚಾರ” ವನ್ನು (ಚೀಪ್‌ ಪಬ್ಲಿಸಿಟಿ) ಪಡೆಯಲು ಈ ಪದವನ್ನು ಬಳಸಿದ್ದಾರೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಅರ್ಜಿದಾರರು ಮೊದಲು ನಟಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದ್ದರು ಆದರೆ ಅವರು ಪ್ರಕರಣವನ್ನು ದಾಖಲಿಸಲು ನಿರಾಕರಿಸಿದಾಗ, ನಟಿಯ ವಿರುದ್ಧ ದೂರು ದಾಖಲಿಸಲು ಕೆಳ ನ್ಯಾಯಾಲಯಕ್ಕೆ ತೆರಳಿ ಇರುವುದಾಗಿ ಹೇಳಿದ್ದಾರೆ.

ಇದಾದ ಬಳಿಕ ಅವರು, ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಅಲ್ಲಿ ʼಬೈಬಲ್‌ʼ ಎನ್ನುವ ಪದವು ಹೇಗೆ ಕ್ರಿಶ್ಚಿಯನ್​ ಸಮುದಾಯದ ಭಾವನೆಗೆ ಹೇಗೆ ಧಕ್ಕೆ ಆಗುತ್ತದೆ ಎಂದು ಕೋರ್ಟ್ ಕೇಳಿತ್ತು. ಆದರೆ ಅದಕ್ಕೆ ಉತ್ತರಿಸಲು‌ ಅರ್ಜಿದಾರ ವಿಫಲರಾದ ಕಾರಣಕ್ಕೆ ಅವರ ಅರ್ಜಿ ವಜಾ ಆಗಿತ್ತು. ಇದಾದ ಬಳಿಕ ಅವರು ಹೆಚ್ಚುವರಿ ಸೆಷನ್ಸ್​​​ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಇಲ್ಲೂ ಕೂಡ ಪರಿಹಾರ ಕಾಣದ ಹಿನ್ನೆಲೆ ಅವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ನಟಿಗೆ ನೋಟಿಸ್​ ಜಾರಿ ಮಾಡಿರುವ ನ್ಯಾಯಾಲಯ ಪ್ರಕ್ರಿಯೆ ಶುಲ್ಕವನ್ನು ಆರ್​ಎಡಿ ಮೋಡ್​ನಲ್ಲಿ ಪಾವತಿಸಲು ನೋಡಿಸ್​ ನೀಡಿದ್ದು, ಇದನ್ನು ಏಳು ದಿನಗಳಲ್ಲಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.