![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 19, 2021, 5:50 PM IST
ಮುಂಬೈ: ಪೆಟ್ರೋಲ್ ಸೇರಿದಂತೆ ಇತರೆ ತೈಲಗಳ ಬೆಲೆ ಏರಿಕೆ ಕುರಿತು ಮೌನವಾಗಿದ್ದಾರೆ ಎಂದು ಖ್ಯಾತ ಬಾಲಿವುಡ್ ನಟರುಗಳಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ಈ ನಟರುಗಳ ಸಿನಿಮಾ ಚಿತ್ರೀಕರಣ ನಡೆಸುವುದನ್ನು ಮತ್ತು ಸಿನಿಮಾ ಬಿಡುಗಡೆಗೊಳಿಸುವುದನ್ನು ತಡೆಯುವುದಾಗಿ ತಿಳಿಸಿದೆ.
ಈ ಕುರಿತಾಗಿ ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನಾನಾ ಪಾಟೋಲೆ ಮೋದಿ ಸರ್ಕಾರ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಇದರಿಂದ ಸಾಮಾನ್ಯರಿಗೆ ಬಹಳಾ ಸಮಸ್ಯೆಗಳಾಗಿದೆ. ಆದರೆ ಈ ಕುರಿತಾಗಿ ನಟರುಗಳಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ದನಿ ಎತ್ತಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸೇನಾ ಶಾಲೆಗಳ ಆರ್ಥಿಕ ಸುಸ್ಥಿರತೆಗಾಗಿ ಸೇನೆ, ಇಂದ್ರಾಣಿ ಬಾಲನ್ ಫೌಂಡೇಶನ್ ಒಪ್ಪಂದ
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಇಂತಹ ವಿಚಾರಗಳಲ್ಲಿ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ವಿರೋಧ ವ್ಯಕ್ತಪಡಿಸುತ್ತಿದ್ದರು. ಅಂದಿನ ಕಾಲದಲ್ಲಿ ಅಧಿಕಾರದಲ್ಲಿ ಇದ್ದ ಕಾಂಗ್ರೆಸ್ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಬದ್ಧವಾಗಿತ್ತು. ಆಗ ಯಾರು ಬೇಕಾದರೂ ಸರ್ಕಾರದ ನಿರ್ಧಾರಗಳ ವಿರುದ್ಧ ಮಾತನಾಡಬಹುದಾಗಿತ್ತು ಎಂದಿರುವ ನಾನಾ ಪಾಟೋಲೆ, ಈಗ ಸೆಲೆಬ್ರಿಟಿಗಳು ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ ಹಾಗಾಗಿ ಸರ್ಕಾರದ ಯಾವುದೇ ನಿರ್ಧಾರದ ಕುರಿತಾಗಿ ದನಿ ಎತ್ತುತ್ತಿಲ್ಲ ಎಂದು ಹೇಳಿದ್ದು, ಇಂತಹ ನಟರ ಸಿನಿಮಾಗಳ ಚಿತ್ರೀಕರಣ ಹಾಗೂ ಪ್ರದರ್ಶನ ಮಾಡಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.