![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2020, 12:58 PM IST
ಜೋರ್ಡಾನ್:ಮಲಯಾಳಂ ಸಿನಿಮಾ ನಿರ್ದೇಶಕ ಬ್ಲೇಸೈ, ಸ್ಟಾರ್ ನಟ ಪ್ರಥ್ವಿರಾಜ್ ಸುಕುಮಾರನ್ ಸೇರಿದಂತೆ ಚಿತ್ರತಂಡದ 58 ಮಂದಿ ಕೋವಿಡ್ 19 ಹರಡುವಿಕೆಯ ಭಯದಿಂದ ಹೇರಲಾಗಿದ್ದ ಲಾಕ್ ಡೌನ್ ನಿಂದಾಗಿ ಜೋರ್ಡಾನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ವರದಿಯಾಗಿದೆ.
ಪ್ರಥ್ವಿರಾಜ್ ಅಭಿನಯದ “ಆದುಜೀವಿತಂ” ಸಿನಿಮಾದ ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ಜೋರ್ಡಾನ್ ಗೆ ತೆರಳಿತ್ತು. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಇಡೀ ತಂಡ ಶೂಟಿಂಗ್ ಇಲ್ಲದೇ ಜೋರ್ಡಾನ್ ನಲ್ಲಿಯೇ ಉಳಿಯುವಂತಾಗಿದೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ ಅನಿವಾಸಿ ಕೇರಳಿಯರ ಇಲಾಖೆ ಗುರುವಾರ ಜೋರ್ಡಾನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಮಲಯಾಳಂ ಸಿನಿಮಾ ನಟ ಪ್ರಥ್ವಿರಾಜ್ ಸುಕುಮಾರನ್ ಹಾಗೂ ನಿರ್ದೇಶಕ ಬ್ಲೇಸೈ ಮತ್ತು ಸಿಬ್ಬಂದಿಗಳ ಬಗ್ಗೆ ವಿಚಾರಿಸಿರುವುದಾಗಿ ವರದಿ ವಿವರಿಸಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅನಿವಾಸಿ ಕೇರಳಿಯರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ, ಜೋರ್ಡಾನ್ ನಲ್ಲಿರುವ ಭಾರತೀಯ ರಾಯಭಾರಿ ಜತೆ ಮಾತನಾಡಿ ಅಲ್ಲಿನ ಪರಿಸ್ಥಿತಿಯನ್ನು ತಿಳಿದುಕೊಳ್ಳುವಂತೆ ಸೂಚಿಸಿದ್ದರು.
ರಾಯಭಾರಿ ಕಚೇರಿ ಸಿನಿಮಾ ನಿರ್ದೇಶಕ, ನಟ ಪ್ರಥ್ವಿರಾಜ್ ಬಗ್ಗೆ ಮಾಹಿತಿ ಕಲೆ ಹಾಕಿ ಎಲ್ಲರೂ ಸುರಕ್ಷಿತರಾಗಿರುವುದಾಗಿ ಮಾಹಿತಿ ನೀಡಿದೆ. ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಚಿತ್ರೀಕರಣದಿಂದ ದೂರ ಉಳಿಯುವುದಾಗಿ ಚಿತ್ರ ನಿರ್ದೇಶಕ ತಿಳಿಸಿದ್ದಾರೆ. ಪರಿಸ್ಥಿತಿ ಸಹಜಸ್ಥಿತಿಗೆ ಮರಳಿದ ನಂತರ ಸಿನಿಮಾ ಚಿತ್ರೀಕರಣ ಮುಂದುವರಿಸುವುದಾಗಿ ಹೇಳಿದೆ.
ಬ್ಲೇಸೈ ನಿರ್ದೇಶನದ “ಅದುಜೀವಿತಂ” ಸಿನಿಮಾದಲ್ಲಿ ಪ್ರಥ್ವಿರಾಜ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಜೋರ್ಡಾನ್ ನಲ್ಲಿ 212 ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಕೋವಿಡ್ 19 ಸೋಂಕು ಪೀಡಿತರು ಗುಣಮುಖರಾಗಿದ್ದಾರೆ. ಈವರೆಗೆ ಯಾವುದೇ ಸಾವಿನ ಬಗ್ಗೆ ವರದಿಯಾಗಿಲ್ಲ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.