ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


Team Udayavani, Apr 24, 2024, 1:31 PM IST

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಮುಂಬಯಿ: ಭಾರತ ಮೂಲದ ನಟ ದೇವ್‌ ಪಟೇಕಲ್‌ ಅಭಿನಯದ ʼಮಂಕಿ ಮ್ಯಾನ್‌ʼ ಸಿನಿಮಾದ ಟ್ರೇಡಿಂಗ್‌ ನಲ್ಲಿದೆ. ಸಿನಿಮಾ ಭಾರತದಲ್ಲಿ ಸಿನಿಮಾ ಬಿಡುಗಡೆ ವಿಳಂಬವಾದ ಕಾರಣ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ರೇಲರ್‌ ನಿಂದ ಸದ್ದು ಮಾಡಿರುವ ʼಮಂಕಿ ಮ್ಯಾನ್‌ʼ ಈಗಾಗಲೇ ವಿದೇಶದಲ್ಲಿ ರಿಲೀಸ್‌ ಆಗಿದೆ. ಆದರೆ ಭಾರತದಲ್ಲಿ ಸಿನಿಮಾ ರಿಲೀಸ್‌ ಗೆ ಮತ್ತಷ್ಟು ವಿಳಂಬ ಉಂಟಾಗಿದೆ. ಭಾರತೀಯ ಸೆನ್ಸಾರ್ ಮಂಡಳಿಯ ಸಿನಿಮಾ ರಿಲೀಸ್‌ ಗೆ ವಿಳಂಬ ಮಾಡುತ್ತಿದೆ.

ಸಿನಿಮಾದಲ್ಲಿ ಅತಿಯಾದ ಹಿಂಸಾಚಾರ ಮತ್ತು ಇದು ಭಾರತೀಯರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಬಹುದೆನ್ನುವ ಕಾರಣದಿಂದ ಹಾಗೂ ಪ್ರಸ್ತುತ ದೇಶದಲ್ಲಿ ಚುನಾವಣೆ ನಡೆಯಲಿರುವುದರಿಂದ ಸಿನಿಮಾ ಸದ್ಯಕ್ಕೆ ಬಿಡುಗಡೆ ಆಗುವುದು ಅನುಮಾನ ಎನ್ನಲಾಗುತ್ತಿದೆ.

ಸಿನಿಮಾದಲ್ಲಿನ ನಾಯಕ ಹನುಮಂತನಿಂದ ಸ್ಪೂರ್ತಿ ಪಡೆಯುವ ಕಥೆಯನ್ನು ಹೇಳಲಾಗಿದೆ. ಇದರಲ್ಲಿ ರಾಜಕೀಯ ವಿಷಯಗಳು ಕೂಡ ಇರುವುದರಿಂದ ಸಿನಿಮಾ ಭಾರತದಲ್ಲಿ ರಿಲೀಸ್‌ ಗೆ ಇದು ಅಡ್ಡಿ ಆಗಿದೆ ಎನ್ನಲಾಗುತ್ತಿದೆ.

ಆದರೆ ʼಮಂಕಿ ಮ್ಯಾನ್‌ʼ ಈಗಾಗಲೇ ರಿಲೀಸ್‌ ಆಗಿರುವುದರಿಂದ ಪೈರೇಟೆಡ್ ಕಾಪಿ ಲೀಕ್‌ ಆಗಿದೆ. ಸಿನಿಮಾದ ಹೆಚ್‌ ಡಿ ಕಾಪಿ ಟೊರೆಂಟ್ ನಲ್ಲಿ ಲೀಕ್‌ ಆಗಿದ್ದು, ಕೆಲ ಜನರು ಸಿನಿಮಾವನ್ನು ಇಲ್ಲಿ ನೋಡಿ ವಿಮರ್ಶೆಯನ್ನು ಬರೆಯುತ್ತಿರುವುದು ಚಿತ್ರತಂಡಕ್ಕೆ ಹಿನ್ನೆಡೆ ಆದಂತಾಗಿದೆ.

ಏಪ್ರಿಲ್‌ 5 ರಂದು ʼಮಂಕಿ ಮ್ಯಾನ್‌ʼ ಯುಎಸ್‌, ಯುಕೆ, ಕೆನಡಾ ಮತ್ತು ಐರ್ಲೆಂಡ್ ನಲ್ಲಿ ರಿಲೀಸ್‌ ಆಗಿದೆ. ಭಾರತದಲ್ಲಿ ನೆಟ್‌ ಫ್ಲಿಕ್ಸ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗುವುದಾಗಿ ಹೇಳಲಾಗಿತ್ತು. ಆದರೆ ವಿವಾದತ್ಮಕ ವಿಷಯ ಇರುವುದರಿಂದ ಅಂತಿಮ ಕ್ಷಣದಲ್ಲಿ ನೆಟ್‌ ಫ್ಲಿಕ್ಸ್‌ ಹಿಂದೇಟು ಹಾಕಿದೆ.

ಆನ್ಲೈನ್‌ ನಲ್ಲಿ ಸಿನಿಮಾದ ಕಾಪಿ ಲೀಕ್‌ ಆಗಿರುವುದರಿಂದ ಭಾರತದಲ್ಲಿನ ಸಿನಿಮಾ ರಿಲೀಸ್‌ ಆದರೆ ಬಾಕ್ಸ್‌ ಆಫೀಸ್‌ ನಲ್ಲಿ ಹೊಡೆತ ಬೀಳುವ ಸಾಧ್ಯತೆಯಿದೆ.

ಸಿನಿಮಾದಲ್ಲಿ ದೇವ್ ಪಟೇಲ್, ಸೋಭಿತಾ ಧೂಳಿಪಾಲ ಪ್ರಮುಖವಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.