![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 24, 2021, 9:30 PM IST
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಘೋಷಿಸುತ್ತಿದ್ದಂತೆ ಮಾಲ್ಡಿವ್ಸ್ ಗೆ ಹಾರಿರುವ ಕೆಲವು ತಾರೆಯರ ವಿರುದ್ಧ ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಕಿ ಆಕ್ರೋಶ ಹೊರಹಾಕಿದ್ದರು.
ಇಲ್ಲಿ ಜನ ಊಟ ಇಲ್ಲದೇ ಸಾಯುತ್ತಿದ್ದಾರೆ, ನೀವು ಹಣವನ್ನು ಪ್ರವಾಸದಲ್ಲಿ ಉಡಾಯಿಸುತ್ತಿದ್ದೀರ. ಸ್ವಲ್ಪವಾದ್ರೂ ನಾಚಿಕೆ ಬೇಡವೇ ಎಂದು ಖಾರವಾಗಿ ಪ್ರಶ್ನಿಸಿರುವ ಸಿದ್ಧಕಿ, ನಿಮ್ಮನ್ನು ಸ್ಟಾರ್ಗಳೆಂದು ಆರಾಧಿಸುವ ಜನರೇ ಇಂದು ಸಂಕಷ್ಟದಲ್ಲಿದ್ದಾರೆ. ಸಾಧ್ಯವಾದರೆ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವೇ ಸುಮ್ಮನಿರಿ. ಇಂಥ ಸಮಯದಲ್ಲಿ ಪ್ರವಾಸದ ಸುಂದರ ಫೋಟೋಗಳನ್ನು ಹಾಕಿ ಮಾನ ಕಳೆದುಕೊಳ್ಳಬೇಡಿ ಎಂದು ಗುಡುಗಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಬಾಲಿವುಡ್ನ ಲವ್ಬರ್ಡ್ಸ್ ರಣವೀರ್ ಕಪೂರ್- ಆಲಿಯಾ ಭಟ್ ಕೊರೋನಾದಿಂದ ಗುಣಮುಖರಾಗುತ್ತಲೇ ಮಾಲ್ಡೀವ್ಸ್ಗೆ ಹಾರಿದ್ದರು. ನಟಿಮಣಿಯರಾದ ಜಾಹ್ನವಿ ಕಪೂರ್, ಶ್ರದ್ಧಾ ಕಪೂರ್, ದಿಶಾ ಪಟಾಣಿ ಕೂಡ ಬೀಚ್ನಲ್ಲಿ ಬಿಕಿನಿ ತೊಟ್ಟು ಮಿಂಚುತ್ತಿರುವ ಫೋಟೋಗಳನ್ನು ಅಪಲೋಡ್ ಮಾಡಿದ್ದರು.
ಇನ್ನು ಮುಂಬೈನಲ್ಲಿ ಕೋವಿಡ್ ಸೋಂಕು ಕೈ ಮೀರಿ ವ್ಯಾಪಿಸುತ್ತಿದೆ. ಒಂದು ಕಡೆ ಚೀನಿ ವೈರಸ್ ಅಬ್ಬರ ಹೆಚ್ಚಾಗಿದ್ದರೆ, ಮತ್ತೊಂದೆಡೆ ಆಸ್ಪತ್ರೆಗಲ್ಲಿ ಬೆಡ್ ಹಾಗೂ ಆಕ್ಸಿಜನ್ಗಳ ಅಭಾವ ಎದುರಾಗಿದೆ. ಕೋವಿಡ್ ಸರಪಳಿ ತುಂಡರಿಸಲು ಮಹಾ ಸರ್ಕಾರ ಹರಸಾಹಸ ಪಡುತ್ತಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.