![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 2, 2023, 11:25 AM IST
ಮುಂಬಯಿ: ಬಾಲಿವುಡ್ ನ ಖ್ಯಾತ ಕಲಾ ನಿರ್ದೇಶಕರೊಬ್ಬರು ತಮ್ಮ ಸ್ಟುಡಿಯೋದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಾಲಿವುಡ್ ನ ಕಲಾ ನಿರ್ದೇಶಕ ನಿತಿನ್ ದೇಸಾಯಿ (57) ಮುಂಬಯಿಯ ಕರ್ಜಾತ್ ಬಳಿಯ ಖಲಾಪುರ್ ರಾಯ್ಗಢ್ನಲ್ಲಿರುವ ಅವರ ಎನ್ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಅವರ ಸಾವಿನ ಸುದ್ದಿಯ ಕುರಿತು ಬಿಜೆಪಿಯ ಕರ್ಜಾತ್ನ ಸ್ಥಳೀಯ ಶಾಸಕ ಮಹೇಶ್ ಬಾಲ್ಡಿ “ನಿತಿನ್ ದೇಸಾಯಿ ಅವರು ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.
“ನಿತಿನ್ ದೇಸಾಯಿ ಅವರ ಎನ್ಡಿ ಸ್ಟುಡಿಯೋ ನನ್ನ ಕ್ಷೇತ್ರದಲ್ಲಿ ಬರುತ್ತದೆ. ಅವರಿಗೆ ಕಳೆದ ಕೆಲ ದಿನಗಳಿಂದ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು, ಈ ಕಾರಣದಿಂದ ಇಂದು ಬೆಳಗ್ಗೆ ಎನ್ಡಿ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಬಾಲ್ಡಿ ಹೇಳಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, “ ಈ ಬಗ್ಗೆ ಎಲ್ಲಾ ಆಯಾಮದಲ್ಲೂ ನಾವು ತನಿಖೆ ನಡೆಸುತ್ತಿದೆ ಎಂದು ರಾಯಗಢದ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ ಘರ್ಗೆ ಹೇಳಿದ್ದಾರೆ.
ನಿತಿನ್ ದೇಸಾಯಿ ಅವರು ಇಂದು (ಬುಧವಾರ ಆ.2 ರಂದು) ಮುಂಜಾನೆ 4:30 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದುರಂತವೆಂದರೆ ಆಗಸ್ಟ್ 9 ರಂದು ಅವರ 58ನೇ ಹುಟ್ಟುಹಬ್ಬವಿತ್ತು.
ಬಾಲಿವುಡ್ ನ ‘ಹಮ್ ದಿಲ್ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಮತ್ತು ‘ಲಗಾನ್’ ಸಿನಿಮಾಗಳಲ್ಲಿ ಅದ್ಧೂರಿ ಸೆಟ್ ಗಳ ವಿನ್ಯಾಸವನ್ನು ಮಾಡಿ ಖ್ಯಾತಿಯಾಗಿದ್ದರು. 20 ವರ್ಷದ ತನ್ನ ವೃತ್ತಿ ಜೀವನದಲ್ಲಿ ಅಶುತೋಷ್ ಗೋವಾರಿಕರ್, ವಿಧು ವಿನೋದ್ ಚೋಪ್ರಾ, ರಾಜ್ಕುಮಾರ್ ಹಿರಾನಿ ಮತ್ತು ಸಂಜಯ್ ಲೀಲಾ ಬನ್ಸಾಲಿ ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ.
2002 ರಲ್ಲಿ ಚಂದ್ರಕಾಂತ್ ಪ್ರೊಡಕ್ಷನ್ಸ್ನಲ್ಲಿ “ದೇಶ್ ದೇವಿ” ಎನ್ನುವ ಭಕ್ತಿ ಪ್ರಧಾನ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. 2005 ರಲ್ಲಿ, ಅವರು ಮುಂಬೈ ಸಮೀಪದ ಕರ್ಜತ್ನಲ್ಲಿ 52 ಎಕರೆ ಪ್ರದೇಶದಲ್ಲಿ ತಮ್ಮ ಎನ್ ಡಿ ಸ್ಟುಡಿಯೋವನ್ನು ತೆರೆದಿದ್ದರು. ಇವರ ಸ್ಟುಡಿಯೋದ ಪ್ರದೇಶದಲ್ಲಿ ʼಜೋಧಾ ಅಕ್ಬರ್ʼ, ʼಟ್ರಾಫಿಕ್ ಸಿಗ್ನಲ್ʼ ಶೋ ಬಿಗ್ ಬಾಸ್ನಂತಹ ಶೋಗಳ ಶೂಟ್ ಆಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.