![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 16, 2021, 3:07 PM IST
ಕೋಲ್ಕತಾ: ಬಂಗಾಳಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಒಂದಲ್ಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಮಾನಿಗಳಲ್ಲಿ ತಮ್ಮ ವೈವಾಹಿಕ ಜೀವನದ ಕುರಿತಾಗಿ ಮತ್ತೊಂದು ಪ್ರಶ್ನೆ ಹುಟ್ಟು ಹಾಕಿದ್ದಾರೆ.
ನುಸ್ರತ್ ಅವರು ವಿಜಯದಶಮಿಯಂದು ಇನ್ಟಾಗ್ರಾಮ್ ನಲ್ಲಿ ಫೋಟೋ ಒಂದನ್ನೂ ಹಾಕಿ ತಮ್ಮ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದು, ಅದರಲ್ಲಿ ಅವರು ಬಂಗಾಳಿ ವಿವಾಹಿತ ಮಹಿಳೆಯರು ಧರಿಸುವ ಶಾಖಾ ಫೋಲ (ಬಿಳಿ, ಕೆಂಪು ಬಳೆ) ಧರಿಸಿದ್ದು, ಎದ್ದು ಕಂಡಿದೆ. ಈಗ ಆ ಫೋಟೋ ಭಾರಿ ಚರ್ಚೆಗೆ ಕಾರಣವಾಗಿದೆ.
ಬಿಳಿ, ಕೆಂಪು ಬಣ್ಣದ ಬಳೆ ಹಾಗೂ ಬಿಳಿ ಕೆಂಪು ಬಣ್ಣದ ಸೀರೆ ಧರಿಸಿ, ಹಣೆಗೆ ಬಿಂದಿ ಇಟ್ಟು ಫೋಟೋದಲ್ಲಿ ಕಾಣಿಸಿಕೊಂಡಿದ್ದರು.
ನುಸ್ರತ್ ಹಾಗೂ ಯಶ್ ದಾಸ್ ಗುಪ್ತಾ ಅವರು ಈ ಹಿಂದೆ ದುರ್ಗಾ ಪೂಜೆ ಪೆಂಡಾಲ್ ಒಂದಕ್ಕೆ ಭೇಟಿ ನೀಡಿ ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಆ ಫೋಟೋದಲ್ಲಿ ನುಸ್ರತ್, ಯಶ್ ತೊಡೆಯಲ್ಲಿ ಕುಳಿತುಕೊಂಡಿದ್ದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ
ಈ ಫೋಟೋಗಳು ಕಂಡ ಅಭಿಮಾನಿಗಳಲ್ಲಿ ಯಶ್ ಹಾಗೂ ನುಸ್ರತ್ ವಿವಾಹವಾಗಿದ್ದಾರೆಯೆ? ಎನ್ನುವ ಪ್ರಶ್ನೆಗಳು ಮೂಡಿವೆ. ನುಸ್ರತ್ ಆಗಸ್ಟ್ ತಿಂಗಳಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಇಶಾನ್ ಎಂದು ನಾಮಕರಣ ಮಾಡಿದ್ದರು. ಇತ್ತೀಚೆಗೆ ಕೇಕ್ ಕಟ್ ಮಾಡುವ ಮೂಲಕ ತಮ್ಮ ಮಗುವಿನ ಹುಟ್ಟುಹಬ್ಬ ಆಚರಣೆಯ ತುಣುಕನ್ನು ಶೇರ್ ಮಾಡಿದ್ದರು. ಅದರಲ್ಲಿ ಅಪ್ಪ ಮತ್ತು ಮಗ ಎಂದು ಬರೆದಿದ್ದರು.
ವಿವಾಹವಾಗದೆ ಮಗುವನ್ನು ಹೊಂದಿರುವ ಕುರಿತಾಗಿನ ಪ್ರಶ್ನೆಗೆ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಜನ ಹೇಳಿದ್ದೆಲ್ಲವೂ ಸತ್ಯ ಎನ್ನುವ ಹಾಗಿಲ್ಲ. ನಮಗೆ ಮದುವೆಯಾಗಿಯೋ, ಆಗದೆಯೋ ಮಗು ಜನಿಸಿದೆ ಎನ್ನುವುದು ಟೀಕಾಕಾರರಿಗೆ ತಿಳಿದಿಲ್ಲ. ನಾವು ಸತ್ಯವನ್ನು ಹೇಳದಿರುವ ಕಾರಣ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.