![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2022, 12:10 PM IST
ಮುಂಬಯಿ: ಕಿಂಗ್ ಆಫ್ ರೊಮ್ಯಾನ್ಸ್ ಶಾರುಖ್ ಖಾನ್ ಅವರಿಗಿಂದು 57ನೇ ಹುಟ್ಟುಹಬ್ಬದ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಶಾರುಖ್ ಇಂದು ಟ್ರೆಂಡ್ ನಲ್ಲಿದ್ದಾರೆ. ಒಂದು ಕಡೆ ಹುಟ್ಟುಹಬ್ಬದ ಶುಭಾಶಗಳು ಸುರಿಮಳೆಯಾದರೆ, ಇನ್ನೊಂದೆಡೆ ʼಪಠಾಣ್ʼ ಚಿತ್ರದ ಟೀಸರ್ ರಿಲೀಸ್ ಕುರಿತ ಮಾತು.
ಮೂರು ವರ್ಷದ ಬಳಿಕ ಶಾರುಖ್ ಖಾನ್ ಮತ್ತೆ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ಮೂರು ಚಿತ್ರಗಳು ಅನೌನ್ಸ್ ಆಗಿದ್ದು, ಇದರಲ್ಲಿ ʼಪಠಾಣ್ʼ ಮುಂದಿನ ವರ್ಷ ತೆರೆಗೆ ಬರಲಿದೆ. ಪೋಸ್ಟರ್ ಗಳಿಂದ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿದ್ದ ʼಪಠಾಣ್ʼ ಟೀಸರ್ ಮೂಲಕ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಟೀಸರ್ ನಲ್ಲಿ ಬಂಧಿತನಾಗಿ ಶಾರುಖ್ ಅವರನ್ನು ಒಂದು ಜಾಗಕ್ಕೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಸತ್ಯ ಬಾಯಿ ಬಿಡಲು ಕೊಡುವ ಹಿಂಸೆಯನ್ನು ತೋರಿಸಲಾಗಿದೆ. ಆ ಬಳಿಕ ಅಲ್ಲಿಂದ ಶಾರುಖ್ ಹೇಗೆ ಫೈಟ್ ಮಾಡಿ ಬರುತ್ತಾರೆ ಎನ್ನುವುದನ್ನು ಆ್ಯಕ್ಷನ್ ಪ್ರಿಯರಿಗೆ ಇಷ್ಟವಾಗುವಂತೆ ದೃಶ್ಯವನ್ನು ತೋರಿಸಲಾಗಿದೆ.
ಚಿತ್ರದಲ್ಲಿ ಜಾನ್ ಅಬ್ರಹಾಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಾನ್ ಇಲ್ಲಿ ಜಾಕೆಟ್ ಹಾಕಿಕೊಂಡು ಗನ್ ನಿಂದ ಬುಲೆಟ್ ಬಿಡುವ ಸೀನ್ ಹಾಗೂ ಶಾರುಖ್ ಅವರೊಂದಿಗೆ ಕಾದಾಡುವ ದೃಶ್ಯ ಅದ್ಧೂರಿಯಾಗಿ ಮೂಡಿಬಂದಿದೆ. ದೀಪಿಕಾ ಅವರ ಪಾತ್ರ ಪರಿಚಯವನ್ನು ಮಾಡಲಾಗಿದೆ. ಕೊನೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಹೆಲಿಕಾಪ್ಟರ್ ಓಡಿಸುವಾಗ ಕನ್ನಡಕ ಹಾಕುವ ಶಾರುಖ್ ಆ್ಯಟಿಟ್ಯೂಡ್ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.
ಮೇಲ್ನೋಟಕ್ಕೆ ಇದೊಂದು ಸೀಕ್ರೆಟ್ ಮಿಷನ್ ಸುತ್ತ ಸಾಗುವ ಚಿತ್ರದಂತೆ ಕಾಣುತ್ತದೆ. ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳಿರುವ ʼಪಠಾಣ್ʼ, 2023ರ ಜನವರಿ 25 ರಂದು ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ.
Apni kursi ki peti baandh lijiye…#PathaanTeaser OUT NOW! Celebrate #Pathaan with #YRF50 only at a big screen near you on 25th January, 2023. Releasing in Hindi, Tamil and Telugu. @deepikapadukone | @TheJohnAbraham | #SiddharthAnand | @yrf pic.twitter.com/eZ0TojKGga
— Shah Rukh Khan (@iamsrk) November 2, 2022
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.