![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 5, 2023, 11:38 AM IST
ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಇತ್ತೀಚಿನ ದಿನಗಳಲ್ಲಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ತೆರದಿದ್ದಾರೆ. ತನ್ನ ಮೆಚ್ಚಿನ ನಟ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿರುವುದನ್ನು ಅಭಿಮಾನಿಗಳು ಟ್ವಿಟರ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಈ ನಡುವೆ ಅವರ ಸಂಸಾರಿಕ ಜೀವನದ ಬಗ್ಗೆಯೂ ಕಳೆದ ಕೆಲ ದಿನಗಳಿಂದ ಸುದ್ದಿಯಾಗುತ್ತಿದೆ.
ಪತ್ನಿ ಅನ್ನಾ ಲಿಜ್ನೋವಾ ಅವರು ಪವನ್ ಕಲ್ಯಾಣ್ ರಿಂದ ದೂರವಾಗಿದ್ದರೆ ಎನ್ನುವ ಕೆಲ ಗಾಸಿಪ್ ಗಳು ಟಾಲಿವುಡ್ ಟೌನ್ ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಪವನ್ ಕಲ್ಯಾಣ್ ರೊಂದಿಗೆ ಅವರು ಕಳೆದ ಕೆಲ ಸಮಯದಿಂದ ಜೊತೆಯಾಗಿ ಕಾಣಿಸಿಕೊಳ್ಳದೇ ಇರುವುದು ಎನ್ನಲಾಗಿದೆ.
ಪವನ್ ರೊಂದಿಗೆ ಸಾರ್ವಜನಿಕ ಸಮಾರಂಭ, ಕುಟುಂಬದ ಸಮಾರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪತ್ನಿ ಅನ್ನಾ ಕಳೆದ ಕೆಲ ಸಮಯದಿಂದ ಎಲ್ಲೂ ಕೂಡ ಜೊತೆಯಾಗಿ ಕಾಣಿಸಿಕೊಂಡಿಲ್ಲ. ಪ್ರಮುಖವಾಗಿ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲೂ ಅವರು ಕಂಡಿಲ್ಲ. ಇನ್ನು ಪವನ್ ಅವರ ರಾಜಕೀಯ ಪ್ರಚಾರ ಕಾರ್ಯಕ್ರಮಕ್ಕೂ ಅವರು ಹಾಜರಾಗಿಲ್ಲ.
ಈ ಎಲ್ಲಾ ಕಾರಣದಿಂದ ಪವನ್ ಕಲ್ಯಾಣ್ – ಅನ್ನಾ ಲಿಜ್ನೋವಾ ಅವರ ಸಂಬಂಧದಲ್ಲಿ ಬಿರುಕು ಉಂಟಾಗಿದೆ. ಅವರು ವಿಚ್ಛೇದನ ಮುಂದಾಗಿದ್ದಾರೆ ಎನ್ನುವ ವದಂತಿಗಳು ಹಬ್ಬಿವೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವ ಮಾಹಿತಿಯೂ ಬಂದಿಲ್ಲ.
ʼತೀನ್ ಮಾರ್ʼ ಶೂಟಿಂಗ್ ವೇಳೆ ಪವನ್ ಕಲ್ಯಾಣ್ ಮತ್ತು ಅನ್ನಾ ಪರಿಚಿತರಾಗಿ ಪ್ರೀತಿಸ ತೊಡಗಿದ್ದರು. 2013 ರ ಡಿಸೆಂಬರ್ ನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಇಬ್ಬರು ಮದುವೆಯಾಗಿದ್ದರು. ಈ ದಂಪತಿಗೆ ಪೋಲೆನಾ ಅಂಜನಾ ಪವನೋವಾ ಮತ್ತು ಮಗ ಮಾರ್ಕ್ ಶಂಕರ್ ಪವನೋವಿಚ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸದ್ಯ ಮಕ್ಕಳು ಅನ್ನಾ ಅವರ ಬಳಿಯೇ ಇದ್ದಾರೆ ಎನ್ನಲಾಗಿದೆ.
ಇದು ಪವನ್ ಕಲ್ಯಾಣ್ ಅವರ ಮೂರನೇ ಮದುವೆ. ಅವರು ಈ ಮೊದಲು ನಂದಿನಿ ಮತ್ತು ರೇಣು ದೇಸಾಯಿ ಅವರನ್ನು ಮದುವೆಯಾಗಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.